AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮೂಹಿಕ ಅತ್ಯಾಚಾರ ಪ್ರಕರಣ: ಮಾನಸ ಗಂಗೋತ್ರಿ ಆವರಣದಲ್ಲಿ ಸಂಜೆ 6.30ರ ಬಳಿಕ ಹೆಣ್ಣುಮಕ್ಕಳು ಒಂಟಿಯಾಗಿ ತಿರುಗಾಡಲು ನಿಷೇಧ, ಕುಕ್ಕರಹಳ್ಳಿ ಕೆರೆಗೂ ಪ್ರವೇಶ ನಿರ್ಬಂಧ

ಸಂಜೆ 6ರಿಂದ 9ರವರೆಗೆ ವಿವಿ ಭದ್ರತಾ ಸಿಬ್ಬಂದಿ ಗಸ್ತು ತಿರುಗಲಿದ್ದು, ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ ಓಡಾಟ ನಿಷೇಧಿಸಲಾಗಿದೆ. ಪೊಲೀಸ್ ಇಲಾಖೆ ಮೌಖಿಕ ನಿರ್ದೇಶನ ಮೇರೆಗೆ ಆದೇಶಿಸಲಾಗಿದೆ.

ಸಾಮೂಹಿಕ ಅತ್ಯಾಚಾರ ಪ್ರಕರಣ: ಮಾನಸ ಗಂಗೋತ್ರಿ ಆವರಣದಲ್ಲಿ ಸಂಜೆ 6.30ರ ಬಳಿಕ ಹೆಣ್ಣುಮಕ್ಕಳು ಒಂಟಿಯಾಗಿ ತಿರುಗಾಡಲು ನಿಷೇಧ, ಕುಕ್ಕರಹಳ್ಳಿ ಕೆರೆಗೂ ಪ್ರವೇಶ ನಿರ್ಬಂಧ
ಮೈಸೂರು ವಿಶ್ವವಿದ್ದಾಲಯ
TV9 Web
| Edited By: |

Updated on:Aug 27, 2021 | 6:53 PM

Share

ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಮಾನಸ ಗಂಗೋತ್ರಿ ಆವರಣದಲ್ಲಿ ಸಂಜೆ 6.30ರ ಬಳಿಕ ಹೆಣ್ಣುಮಕ್ಕಳು ಒಂಟಿಯಾಗಿ ತಿರುಗಾಡುವುದಕ್ಕೆ ನಿಷೇಧ ಹೇರಲಾಗಿದೆ. ಪ್ರಸಿದ್ಧ ಕುಕ್ಕರಹಳ್ಳಿ ಕೆರೆ ಆವರಣದಲ್ಲಿ ಇದೇ ಅವಧಿಯಲ್ಲಿ ಎಲ್ಲರಿಗೂ ಪ್ರವೇಶ ನಿರ್ಬಂಧಿಸಲಾಗಿದೆ. ಸುರಕ್ಷತೆ ದೃಷ್ಟಿ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ನಿರ್ಬಂಧ ವಿಧಿಸಲಾಗಿದ್ದು,  ಈ ಕುರಿತು ಮೈಸೂರು ವಿವಿ ಕುಲಸಚಿವರಿಂದ ಸುತ್ತೋಲೆ ಹೊರಡಿಸಿದ್ದಾರೆ. ಸಂಜೆ 6ರಿಂದ 9ರವರೆಗೆ ವಿವಿ ಭದ್ರತಾ ಸಿಬ್ಬಂದಿ ಗಸ್ತು ತಿರುಗಲಿದ್ದು, ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ ಓಡಾಟ ನಿಷೇಧಿಸಲಾಗಿದೆ. ಪೊಲೀಸ್ ಇಲಾಖೆ ಮೌಖಿಕ ನಿರ್ದೇಶನ ಮೇರೆಗೆ ಆದೇಶಿಸಲಾಗಿದೆ.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣ ನಡೆಯಬಾರದಿತ್ತು, ಆದರೂ ನಡೆದುಹೋಗಿದೆ. ಇದು ಅತ್ಯಂತ ಸೂಕ್ಷ್ಮ ಪ್ರಕರಣವಾಗಿದ್ದರಿಂದ ಈಗಲೇ ಏನೂ ಹೇಳಲಾಗದು. ಈ ಪ್ರಕರಣದ ಆರೋಪಿಗಳನ್ನು ಹಿಡಿಯಲು ಹೆಚ್ಚಿನ ಸಮಯ ಬೇಕಾಗಿದೆ ಎಂದು ಡಿಜಿ ಮತ್ತು ಐಜಿಪಿ  ಪ್ರವೀಣ್ ಸೂದ್ ತಿಳಿಸಿದ್ದಾರೆ.

Mysuru Police Notice

ಸುತ್ತೋಲೆ

ಮೈಸೂರಿನ ದರೋಡೆ, ಶೂಟೌಟ್ ಪ್ರಕರಣದ 6 ಆರೋಪಿಗಳ ಬಂಧನ; ಪ್ರವೀಣ್ ಸೂದ್ ಮಾಹಿತಿ ಮೈಸೂರಿನಲ್ಲಿ ನಡೆದ ದರೋಡೆ ಮತ್ತು ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು 5 ಜನರನ್ನು ಬಂಧಿಸಲಾಗಿತ್ತು, ನಂತರ ಒಬ್ಬರನ್ನು ಬಂಧಿಸಲಾಯಿತು. ಈ ಘಟನೆಗೆ ಸಂಬಂಧಿಸಿದಂತೆ ಒಟ್ಟು 6 ಮಂದಿಯನ್ನು ಬಂಧಿಸಲಾಗಿದೆ ಎಂದು ಮೈಸೂರಿನಲ್ಲಿ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಮಾಹಿತಿ ನೀಡಿದ್ದಾರೆ. ಈ ಕುರಿತು ಇಂದು ಮೈಸೂರಿನಲ್ಲಿ ಪ್ರವೀಣ್ ಸೂದ್ ಸುದ್ದಿಗೋಷ್ಠಿ ನಡೆಸಿದ್ದಾರೆ.

ಆ. 23ರಂದು ಮೈಸೂರಿನಲ್ಲಿ ಅಹಿತಕರ ಘಟನೆ ಆಗಿತ್ತು. ದರೋಡೆ ಮತ್ತು ಶೂಟ್‌ಔಟ್ ಆಗಿತ್ತು. ಈ ಕೃತ್ಯಕ್ಕೆ ಕಂಟ್ರಿ ರಿವಾಲ್ವರ್ ಬಳಸಿದ್ದರು. ಇದು ಸಾಮಾನ್ಯ ಪ್ರಕರಣ ಅಲ್ಲ, ಆರೋಪಿ ಪತ್ತೆಯಾಗಲೇಬೇಕು ಅಂತ ಸೂಚನೆ ನೀಡಲಾಗಿತ್ತು. ಅದಕ್ಕಾಗಿ 5 ತಂಡಗಳನ್ನು ರಚಿಸಲಾಗಿತ್ತು. ನಾಲ್ಕು ದಿನಗಳ ನಂತರ ಇದುವರೆಗೂ 5 ಮಂದಿಯನ್ನು ಬಂಧಿಸಲಾಗಿದೆ, ಪ್ಲ್ಯಾನ್ ಮಾಡಿದ ಇಬ್ಬರ ಬಂಧನವಾಗಿದೆ. ಒಬ್ಬರು ಮೈಸೂರು ಮತ್ತೊಬ್ಬರು ಬೆಂಗಳೂರಿನವರಾಗಿದ್ದಾರೆ. ವೆಸ್ಟ್ ಬೆಂಗಾಲ್ ಮುಂಬಯಿ ರಾಜಸ್ಥಾನದಿಂದ ತಲಾ ಒಬ್ಬರನ್ನು ಬಂಧಿಸಲಾಗಿದೆ. ಆರನೇ ಆರೋಪಿ ಜಮ್ಮು ಮತ್ತು ಕಾಶ್ಮೀರದಿಂದ ಬಂಧಿಸಲಾಗಿದೆ. ಆರೋಪಿಗಳು ದೇಶದ 5 ಕಡೆಗೆ ಓಡಿ ಹೋಗಿದ್ದರು. ಆದರೂ ಅವರನ್ನು ಬಂಧಿಸಲಾಗಿದೆ ಎಂದು ಪ್ರವೀಣ್ ಸೂದ್ ತಿಳಿಸಿದ್ದಾರೆ.

ಕಳ್ಳತನವಾದ ಬಹುತೇಕ ವಸ್ತುಗಳು ಸಿಕ್ಕಿವೆ. ಈ ಕೃತ್ಯವೆಸಗಿದ 8 ದರೋಡೆಕೋರರಲ್ಲಿ 6 ಜನರನ್ನು ಬಂಧಿಸಲಾಗಿದೆ. ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಮುಂಬೈ, ಜಮ್ಮು-ಕಾಶ್ಮೀರ, ರಾಜಸ್ಥಾನ, ಬೆಂಗಳೂರಿನಲ್ಲಿ ತಲಾ ಒಬ್ಬೊಬ್ಬರನ್ನು ಬಂಧಿಸಿದ್ದೇವೆ. ನಮ್ಮ ಪೊಲೀಸರು ಆಯಾ ರಾಜ್ಯಗಳಿಗೆ ತೆರಳಿ ಬಂಧಿಸಿದ್ದಾರೆ. ಕೋರ್ಟ್​ ಪ್ರೊಸೀಜರ್​ ಪ್ರಕಾರ ಅಲ್ಲಿಂದ ಕರೆತರಬೇಕಾಗಿದೆ. ಮೈಸೂರಿನ ಒಬ್ಬರು ಸೇರಿ ದರೋಡೆಗೆ ಪ್ಲ್ಯಾನ್​ ಮಾಡಿದ್ದರು. ಸಂಚುಕೋರ ಚಿನ್ನಾಭರಣ ಅಂಗಡಿ ಇಟ್ಟುಕೊಂಡಿದ್ದರು. ದರೋಡೆಗೆ ಹೊರಗಿನಿಂದ ಜನರನ್ನು ಕರೆಸಿ ಕೃತ್ಯವೆಸಗಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.

ಇದನ್ನೂ ಓದಿ:  

ಆ ಹುಡುಗಿ ಅಷ್ಟೊತ್ತಿಗೆ ಅಲ್ಲಿಗೆ ಏಕೆ ಹೋಗಿದ್ದಳೋ -ಮೈಸೂರು ಗ್ಯಾಂಗ್ ರೇಪ್ ಬಗ್ಗೆ ಮಂಜುಳಾ ಮಾನಸ ಉಡಾಫೆ ಮಾತು

‘ನಾಳೆ ನಮ್ಮ-ನಿಮ್ಮೆಲ್ಲರ ತಂಗಿ-ತಾಯಿಗೂ ಹೀಗಾಗಬಹುದು; ಎಚ್ಚೆತ್ತುಕೊಳ್ಳಿ’: ಮೈಸೂರು​ ಗ್ಯಾಂಗ್ ರೇಪ್​ಗೆ ಅದಿತಿ ಆಕ್ರೋಶ

(Mysuru Gang Rape effect Kukkarahalli Lake and Mansa Gangotri Campus Banned for solitary confinement of girls after 6.30 pm)

Published On - 6:23 pm, Fri, 27 August 21

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ