Mysuru gang rape : ಗ್ಯಾಂಗ್‌ರೇಪ್ ಪ್ರಕರಣ- ತಮಿಳುನಾಡಲ್ಲಿ ಐದು ಆರೋಪಿಗಳು ವಶಕ್ಕೆ, ಆರೋಪಿಗಳು ವಿದ್ಯಾರ್ಥಿಗಳಲ್ಲ

ಐವರ ಪೈಕಿ ಯಾರೂ ವಿದ್ಯಾರ್ಥಿಗಳಲ್ಲವೆನ್ನುವ ಬಗ್ಗೆ ಮಾಹಿತಿ ಬಂದಿದ್ದು, ಈ ಹಿಂದೆ ಇಂಥದ್ದೇ ಕೃತ್ಯದಲ್ಲಿ ಭಾಗಿಯಾಗಿದ್ದರು ಎಂಬುದು ಗಮನಾರ್ಹ. ಈ ಮಧ್ಯೆ, ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ನಡೆದಿದೆ.

Mysuru gang rape : ಗ್ಯಾಂಗ್‌ರೇಪ್ ಪ್ರಕರಣ- ತಮಿಳುನಾಡಲ್ಲಿ ಐದು ಆರೋಪಿಗಳು ವಶಕ್ಕೆ, ಆರೋಪಿಗಳು ವಿದ್ಯಾರ್ಥಿಗಳಲ್ಲ
ಗ್ಯಾಂಗ್‌ರೇಪ್ ಪ್ರಕರಣ: ತಮಿಳುನಾಡಲ್ಲಿ 5 ಆರೋಪಿಗಳು ವಶಕ್ಕೆ, ಆರೋಪಿಗಳು ವಿದ್ಯಾರ್ಥಿಗಳಲ್ಲ
Follow us
| Updated By: ಸಾಧು ಶ್ರೀನಾಥ್​

Updated on:Aug 28, 2021 | 10:44 AM

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಗಸ್ಟ್​ 24 ಮಂಗಳವಾರ ರಾತ್ರಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರು ಪೊಲೀಸರು ದೊಡ್ಡ ಸಾಹಸವನ್ನೇ ಮಾಡಿದ್ದಾರೆ. ಮೈಸೂರು ಪೊಲೀಸರು ಗ್ಯಾಂಗ್‌ರೇಪ್ ಪ್ರಕರಣದ 6 ಆರೋಪಿಗಳ ಪೈಕಿ 5 ಮಂದಿಯನ್ನು ತಮಿಳುನಾಡಲ್ಲಿ ವಶಕ್ಕೆ ತೆಗೆದು ಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದಲ್ಲಿ ಎಂಜಿನಿಯರಿಂಗ್​ ವಿದ್ಯಾರ್ಥಿಗಳ ತಂಡ ಈ ಕುಕೃತ್ಯ ನಡೆಸಿರಬಹುದು ಎನ್ನಲಾಗಿತ್ತು. ಆದರೆ ಬಂಧಿತ ಐವರ ಪೈಕಿ ಯಾರೂ ವಿದ್ಯಾರ್ಥಿಗಳಲ್ಲ ಎನ್ನುವ ಬಗ್ಗೆ ಮಾಹಿತಿ ಈಗ ಲಭ್ಯವಾಗಿದೆ.

ಇನ್ನೆರಡು ಗಂಟೆಯಲ್ಲಿ ಆರೋಪಿಗಳ ಬಂಧನದ ಬಗ್ಗೆ ಮಾಹಿತಿ -ಗೃಹ ಸಚಿವ ಆರಗ ಜ್ಞಾನೇಂದ್ರ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ತಮಿಳುನಾಡಲ್ಲಿ ತಲೆಮರೆಸಿಕೊಂಡಿದ್ದ 5 ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದ್ದು, ಕಾರ್ಯಾಚರಣೆ ಸಕ್ಸಸ್​ ಆಗಿದೆ ಎಂದು ಹೇಳಿದ್ದಾರೆ. ಇನ್ನೆರಡು ಗಂಟೆಯಲ್ಲಿ ಆರೋಪಿಗಳ ಬಂಧನದ ಬಗ್ಗೆ ಮಾಹಿತಿ ನೀಡುತ್ತೇವೆ. ಪೊಲೀಸರು ಅಥವಾ ನಾನೇ ಅಧಿಕೃತ ಮಾಹಿತಿ ನೀಡುವೆ ಎಂದೂ ಹೇಳಿದ್ದಾರೆ.

ಬಂಧಿತ ಐವರ ಪೈಕಿ ಯಾರೂ ವಿದ್ಯಾರ್ಥಿಗಳಲ್ಲ ಎನ್ನುವ ಬಗ್ಗೆ ಮಾಹಿತಿ ಬಂದಿದ್ದು, ಈ ಹಿಂದೆ ಇಂಥದ್ದೇ ಕೃತ್ಯದಲ್ಲಿ ಭಾಗಿಯಾಗಿದ್ದರು ಎಂಬುದು ಗಮನಾರ್ಹ. ಈ ಮಧ್ಯೆ, ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ನಡೆದಿದೆ.

ಆರೋಪಿಗಳು ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ಚಲನವಲನದ ಮೇಲೆ ನಿಗಾವಹಿಸಿದ್ದರು. ಸಂತ್ರಸ್ತೆ ಮತ್ತು ಯುವಕ 3 ದಿನಗಳ ಕಾಲ ಒಂದೇ ಸ್ಥಳಕ್ಕೆ ಬರುತ್ತಿದ್ದರು.ಅವರಿಬ್ಬರನ್ನೂ 3 ದಿನ ಫಾಲೋ ಮಾಡಿ 4ನೇ ದಿನ ಗ್ಯಾಂಗ್​ ದಾಳಿ ಮಾಡಿತ್ತು. ಆ. 24ರಂದು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು.

ಆರೋಪಿಗಳು ತಮಿಳುನಾಡಿನ ಸತ್ಯಮಂಗಲ ಮೂಲದವರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ಆರೋಪಿಗಳು ತಮಿಳುನಾಡಿನ ಸತ್ಯಮಂಗಲ ಮೂಲದವರು. ವಶಕ್ಕೆ ಪಡೆದಿರುವ ಐವರು ಆರೋಪಿಗಳು ಕೂಲಿಕಾರ್ಮಿಕರು. ಪ್ರಕರಣದಲ್ಲಿ ಇನ್ನೂ ಯಾರಾದ್ರೂ ಇದ್ದಾರಾ ಎಂದೂ ತನಿಖೆ ನಡೆಯುತ್ತಿದೆ. ಪೊಲೀಸರು ಆರೋಪಿಗಳನ್ನು ಮೈಸೂರಿಗೆ ಕರೆತಂದ ನಂತರ ಆರೋಪಿಗಳ ಹೆಚ್ಚಿನ ವಿಚಾರಣೆ ನಡೆಯಲಿದೆ ಎಂದು ತಿಳಿದುಬಂದಿದೆ.

Mysuru gang rape: ಯುವಕನ ತಂದೆಯೇ ತಮ್ಮ ಕಾರಿನಲ್ಲಿ ಸ್ಥಳಕ್ಕೆ ಹೋಗಿ ಇಬ್ಬರನ್ನೂ ಕರೆದುಕೊಂಡು ಬಂದಿದ್ದರು

(mysuru gang rape mysuru police arrest 5 accused in tamilnadu)

Published On - 9:12 am, Sat, 28 August 21

ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್