ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮೈಸೂರಿನ ಬಾಲಕಿ

Mysuru Yukti K: ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮೈಸೂರಿನ ಯುಕ್ತಿ ಕೆ. ಯು-16 ಲಾಂಗ್ ಜಂಪ್‌ನಲ್ಲಿ ಚಿನ್ನದ ಪದಕ ಗೆದ್ದು ಹೊಸ ದಾಖಲೆ ನಿರ್ಮಿಸಿದ್ದಾರೆ. ಕೋಚ್ ಪ್ರಭಾಕರ್ ಮಾರ್ಗದರ್ಶನದಲ್ಲಿ ಯುಕ್ತಿ ಈ ಮಹತ್ವದ ಸಾಧನೆ ಮಾಡುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮೈಸೂರಿನ ಬಾಲಕಿ
ಯುಕ್ತಿ ಕೆ
Image Credit source: tv9 kannada
Edited By:

Updated on: Aug 13, 2026 | 9:36 PM

ಮೈಸೂರು, ಆಗಸ್ಟ್​​ 13: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 2026ರ ರಾಜ್ಯಮಟ್ಟದ ಕ್ರೀಡಾಕೂಟದ 16 ವರ್ಷದೊಳಗಿನವರ (U-16) ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಮೈಸೂರಿನ (Mysuru) ಪ್ರತಿಭಾನ್ವಿತ ಬಾಲಕಿ ಯುಕ್ತಿ ಕೆ. ಅತ್ಯದ್ಭುತ ಸಾಧನೆ ಮಾಡುವ ಮೂಲಕ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾಳೆ. ಅಷ್ಟೇ ಅಲ್ಲದೆ ಹೊಸ ‘ಮೀಟ್ ದಾಖಲೆ’ ನಿರ್ಮಿಸಿ ಸುವರ್ಣ ಪದಕಕ್ಕೆ ಮುತ್ತಿಕ್ಕಿದ್ದಾಳೆ.

ಅಭಿನಂದನೆಗಳ ಸುರಿಮಳೆ

ಮೈಸೂರಿನ ಕಿಶೋರ್ ದಂಪತಿಯ ಪುತ್ರಿ ಯುಕ್ತಿ ಕೆ. ಕ್ರೀಡಾ ಕೋಚ್ ಪ್ರಭಾಕರ್ ಅವರ ಗರಡಿಯಲ್ಲಿ ಯುಕ್ತಿ  ತರಬೇತಿ ಪಡೆಯುತ್ತಿದ್ದಾರೆ. ಕೋಚ್ ಮಾರ್ಗದರ್ಶನ ಹಾಗೂ ನಿರಂತರ ಅಭ್ಯಾಸದಿಂದ ಈ ಅಭೂತಪೂರ್ವ ಯಶಸ್ಸು ಸಾಧಿಸಿರುವ ಯುಕ್ತಿಗೆ ಮೈಸೂರಿನ ಕ್ರೀಡಾಭಿಮಾನಿಗಳು, ತರಬೇತುದಾರರು ಹಾಗೂ ಹಿತೈಷಿಗಳಿಂದ ಅಭಿನಂದನೆಗಳ ಸುರಿಮಳೆಯೇ ಹರಿದುಬರುತ್ತಿದೆ.

ಇದನ್ನೂ ಓದಿ: ನಂದಿ ಹಿಲ್ಸ್​​ ಮಾನ್ಸೂನ್​ ಮ್ಯಾರಥಾನ್​ ವೇಳೆ ದುರಂತ ಅಂತ್ಯಕಂಡ ಕ್ರೀಡಾಪಟು: ಹೃದಯಾಘಾತದಿಂದ ಸಾವು?

ಈಗಾಗಲೇ ರಾಜ್ಯಮಟ್ಟದಲ್ಲಿ ದಾಖಲೆ ನಿರ್ಮಿಸುವ ಮೂಲಕ ಕ್ರೀಡಾಪಟುಗಳ ಗಮನ ಸೆಳೆದಿರುವ ಯುಕ್ತಿ, ಮುಂಬರುವ ದಿನಗಳಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ದೇಶಕ್ಕೆ ಮತ್ತು ನಾಡಿಗೆ ಮತ್ತಷ್ಟು ಕೀರ್ತಿ ತರಲಿದ್ದಾರೆ ಎಂಬ ನಿರೀಕ್ಷೆ ಕ್ರೀಡಾ ವಲಯಲ್ಲಿ ಮೂಡಿದೆ.

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮೈಸೂರಿನ ಪ್ಯಾರಾ ಅಥ್ಲೀಟ್ ಕೆಎಸ್​​ ಶಿಲ್ಪಾ ಸಾಧನೆ

ಇನ್ನು ಇತ್ತೀಚೆಗೆ ಸ್ಕಾಟ್‌ಲ್ಯಾಂಡ್‌ನ ಗ್ಲ್ಯಾಸ್ಗೋ ನಗರದಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಶಾಟ್‌ಪುಟ್ (ಗುಂಡು ಎಸೆತ) ವಿಭಾಗದಲ್ಲಿ ಮೈಸೂರು ಮೂಲದ ಪ್ಯಾರಾ ಅಥ್ಲೀಟ್ ಕೆಎಸ್​ ಶಿಲ್ಪಾ ಕಂಚಿನ ಪದಕ ತಮ್ಮದಾಗಿಸಿಕೊಳ್ಳುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಇದನ್ನೂ ಓದಿ: ಅನುದಾನ ದುರುಪಯೋಗ, ಲೈಂಗಿಕ ದೌರ್ಜನ್ಯ ಆರೋಪ: ಮೈಸೂರು ವಿವಿ ಕುಲಸಚಿವರ ಹುದ್ದೆಗೆ ಪ್ರೊ ಬಿಕೆ ಕೆಂಪೇಗೌಡ ನೇಮಕಕ್ಕೆ ವಿರೋಧ

36 ವರ್ಷದ ಕೆ.ಎಸ್. ಶಿಲ್ಪಾ ಅವರು, ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಕಂಚುಗಾರಕೊಪ್ಪಲು ಮೂಲದ ಕೃಷಿಕ ದಂಪತಿ ಶೈಲ ಹಾಗೂ ಶಾಂತಾ ಅವರ ಪುತ್ರಿ. ಮಹಿಳೆಯರ F-57 ಸ್ಪರ್ಧಾ ವಿಭಾಗದಲ್ಲಿ ಭಾಗವಹಿಸಿದ್ದ ಇವರು 7.26 ಮೀಟರ್ ದೂರಕ್ಕೆ ಗುಂಡು ಎಸೆಯುವ ಮೂಲಕ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us