AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಚಿನ್ನದ ಅಂಗಡಿ ದರೋಡೆ ಯತ್ನ, ತಡೆಯಲು ಯತ್ನಿಸಿದವರ ಮೇಲೆ ಗುಂಡು ಹಾರಿಸಿ ಪರಾರಿಯಾದ ದರೋಡೆಕೋರರು

ಸ್ಥಳಕ್ಕೆ ವಿದ್ಯಾರಣ್ಯಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನಲ್ಲಿ ಚಿನ್ನದ ಅಂಗಡಿ ದರೋಡೆ ಯತ್ನ, ತಡೆಯಲು ಯತ್ನಿಸಿದವರ ಮೇಲೆ ಗುಂಡು ಹಾರಿಸಿ ಪರಾರಿಯಾದ ದರೋಡೆಕೋರರು
ಚಿನ್ನದ ಅಂಗಡಿ ದರೋಡೆಗೆ ಯತ್ನ
TV9 Web
| Edited By: |

Updated on:Aug 23, 2021 | 8:16 PM

Share

ಮೈಸೂರು: ಮೈಸೂರಿನ ಚಿನ್ನಾಭರಣ ಅಂಗಡಿಯೊಂದರಲ್ಲಿ ದರೋಡೆಗೆ ಯತ್ನಿಸಿ, ದರೋಡೆಕೋರರನ್ನು ತಡೆಯಲು ಯತ್ನಿಸಿದ ಚಿನ್ನದವರ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ. ದರೋಡೆಕೋರರನ್ನು ತಡೆಯಲು ಚಿನ್ನದಂಗಡಿ ಮಾಲೀಕ ಯತ್ನಿಸಿದ್ದಾರೆ. ಈವೇಳೆ   ಗುಂಡುಹಾರಿಸಿ ದರೋಡೆಕೋರರು ಪರಾರಿಯಾಗಿದ್ದಾರೆ. ಮೈಸೂರಿನ ವಿದ್ಯಾರಣ್ಯಪುರಂನ ಚಿನ್ನದ ಅಂಗಡಿ ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಪ್ಯಾಲೇಸ್ನಲ್ಲಿ ದರೋಡೆಕೋರರು ದಾಳಿ ನಡೆಸಿ ಚಿನ್ನವನ್ನು ಕದ್ದೊಯ್ಯಲು ಯತ್ನಿಸಿದ್ದಾರೆ. ಈವೇಳೆ ತಡೆಯಲು ಯತ್ನಿಸಿದ ಅಂಗಡಿ ಮಾಲೀಕ ಧರ್ಮೇಂದ್ರ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ವಿದ್ಯಾರಣ್ಯಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದೇ ಘಟನೆಗೆ ಸಂಬಂಧಿಸಿ ಮೈಸೂರಿನಲ್ಲಿ ದರೋಡೆಕೋರರ ಗುಂಡೇಟಿಗೆ ಯುವಕ ಮೃತಪಟ್ಟಿದ್ದಾನೆ. ಮೈಸೂರು ತಾಲೂಕಿನ ದಡದಹಳ್ಳಿಯ ಚಂದ್ರು(27) ಸಾವನ್ನಪ್ಪಿದ ವ್ಯಕ್ತಿ. ಚಿನ್ನಾಭರಣ ಮಳಿಗೆಯಲ್ಲಿ ಮೂವರಿಂದ ದರೋಡೆಗೆ ಯತ್ನಿಸಿದಾಗ ಅಂಗಡಿ ಮಾಲೀಕ ದರೋಡೆಗೆ ತೀವ್ರ ಪ್ರತಿರೋಧವೊಡ್ಡಿದ್ದ. ಹೀಗಾಗಿ ಪರಾರಿಯಾಗುತ್ತಿದ್ದ ಮೂವರು ದರೋಡೆಕೋರರನ್ನು ಹಿಡಿಯುವುದಕ್ಕೆ ಚಂದ್ರು ಯತ್ನಿಸಿದ್ದ. ಚಂದ್ರು ತಲೆಗೆ ಗುಂಡು ಹಾರಿಸಿ ದರೋಡೆಕೋರರು ಪರಾರಿಯಾಗಿದ್ದರು. ಗಂಭೀರ ಗಾಯಗೊಂಡಿದ್ದ ಚಂದ್ರು ಕೆಲವೇ ಕ್ಷಣಗಳಲ್ಲಿ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: 

Greenland Rain: ಇತಿಹಾಸದಲ್ಲೇ ಮೊದಲ ಬಾರಿಗೆ ಭರ್ಜರಿ ಮಳೆ; ಇಲ್ಲಿ ಮಳೆ ಸುರಿದದ್ದೇ ಜಾಗತಿಕ ಮಟ್ಟದಲ್ಲಿ ಚಿಂತೆಗೆ ಕಾರಣ

Burkina Faso: ಆಫ್ರಿಕಾ ಖಂಡದ ಪುಟ್ಟ ದೇಶ ಬುರ್ಕಿನಾ ಫಾಸೋದಲ್ಲಿ ಉಗ್ರರ ಉಪಟಳ; 80 ಜನರು ಬಲಿ: ಭಾರತಕ್ಕೂ ಈ ದೇಶಕ್ಕೂ ಏನು ಸಂಬಂಧ?

(Mysuru Gold shop robbery attepmt robbers shoot the owner who tried to stop)

Published On - 6:54 pm, Mon, 23 August 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ