AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಿ ಜ್ಞಾನವಾಪಿ ವರದಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಇತಿಹಾಸ ತಜ್ಞ ಡಾ ಶೆಲ್ವಪಿಳೈ ಅಯ್ಯಂಗಾರ್

ಮೈಸೂರಿನಲ್ಲಿ ಟಿವಿ9 ಜೊತೆ ಮಾತನಾಡಿರುವ ಇತಿಹಾಸ ತಜ್ಞ ಡಾ. ಶೆಲ್ವಪಿಳೈ ಅಯ್ಯಂಗಾರ್​, ಕಾಶಿ ಜ್ಞಾನವಾಪಿ ವರದಿ ಅತ್ಯಂತ ವೈಜ್ಞಾನಿಕವಾಗಿ ತಯಾರಿಸಿ ಮಂಡಿಸಲಾಗಿದೆ. ಒಬ್ಬ ಇತಿಹಾಸ ಸಂಶೋಧನಾ ವಿದ್ಯಾರ್ಥಿಯಾಗಿ ನನಗೆ ತುಂಬಾ ಖುಷಿ ಕೊಟ್ಟಿದೆ. ವರದಿಯನ್ನು ಸಂಪೂರ್ಣ ಓದಿದ್ದೇನೆ ಎಂದು ಹೇಳಿದ್ದಾರೆ. ಕನ್ನಡ, ಸಂಸ್ಕೃತ, ತೆಲುಗು, ತಮಿಳು, ಪರ್ಸಿಯನ್​, ಅರೆಬಿಕ್​ ಮತ್ತು ಬ್ರಾಹ್ಮಿ ಸೇರಿದಂತೆ ಲಿಪಿಗಳು ಪತ್ತೆಯಾಗಿವೆ ಎಂದಿದ್ದಾರೆ.

ಕಾಶಿ ಜ್ಞಾನವಾಪಿ ವರದಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಇತಿಹಾಸ ತಜ್ಞ ಡಾ ಶೆಲ್ವಪಿಳೈ ಅಯ್ಯಂಗಾರ್
ಇತಿಹಾಸ ತಜ್ಞ ಡಾ ಶೆಲ್ವಪಿಳೈ ಅಯ್ಯಂಗಾರ್
ರಾಮ್​, ಮೈಸೂರು
| Edited By: |

Updated on:Feb 02, 2024 | 12:03 PM

Share

ಮೈಸೂರು, ಜನವರಿ 27: ಕಾಶಿ ಜ್ಞಾನವಾಪಿ (Gnanavapi) ವರದಿ ಅತ್ಯಂತ ವೈಜ್ಞಾನಿಕವಾಗಿ ತಯಾರಿಸಿ ಮಂಡಿಸಲಾಗಿದೆ. ಒಬ್ಬ ಇತಿಹಾಸ ಸಂಶೋಧನಾ ವಿದ್ಯಾರ್ಥಿಯಾಗಿ ನನಗೆ ತುಂಬಾ ಖುಷಿ ಕೊಟ್ಟಿದೆ. ವರದಿಯನ್ನು ಸಂಪೂರ್ಣ ಓದಿದ್ದೇನೆ ಎಂದು ಇತಿಹಾಸ ತಜ್ಞ ಡಾ. ಶೆಲ್ವಪಿಳೈ ಅಯ್ಯಂಗಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ಕನ್ನಡ, ಸಂಸ್ಕೃತ, ತೆಲುಗು, ತಮಿಳು, ಪರ್ಸಿಯನ್​, ಅರೆಬಿಕ್​ ಮತ್ತು ಬ್ರಾಹ್ಮಿ ಸೇರಿದಂತೆ ಲಿಪಿಗಳು ಪತ್ತೆಯಾಗಿವೆ. ಅದರಲ್ಲಿ ಕನ್ನಡದ ದೊಡರಸಯ್ಯನ ನರಸಣಭಿಂನ್ನಹ ಎಂದು ಇದೆ. ಇದು 16ನೇ ಶತಮಾನದ ಶಾಸನವಾಗಿದೆ. ಕನ್ನಡ ಗೊತ್ತಿರುವ ಯಾರು ಬೇಕಾದರೂ ಓದಬಹುದಾಗಿದೆ. ಇದು ಕಾಶಿ ವಿಶ್ವನಾಥನಿಗೆ ಸೇವೆ ಸಲ್ಲಿಸಿ ಹಾಕಿಸಿಕೊಂಡಿರುವ ಶಾಸನವಾಗಿರಬಹುದು ಎಂದು ಹೇಳಿದ್ದಾರೆ.

ವರದಿಯ ಪ್ರಕಾರ ಇದು 3500 ವರ್ಷಗಳ ಹಿಂದಿನಿಂದಲೂ ಇಲ್ಲೊಂದು ಮಹಾ ದೇವಾಲಯ ಇತ್ತು ಅನ್ನೋದು ಸೂಚಕವಾಗಿದೆ. ಪದೇ ಪದೇ ಇದನ್ನು ನಾಶ ಮಾಡಲಾಗಿದೆ ಎನ್ನುವುದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದು ನ್ಯಾಯಾಲಯಕ್ಕೆ ಬಿಟ್ಟ ವಿಚಾರ

ಇಲ್ಲಿ ಮತ್ತೆ ದೇವಸ್ಥಾನ ನಿರ್ಮಾಣವಾಗಬೇಕಾ ಅಥವಾ ಏನು ಮಾಡಬೇಕು ಎಂಬುದನ್ನು ನ್ಯಾಯಾಲಯ ತೀರ್ಮಾನ ಮಾಡಲಿದೆ. ಆದರೆ ಇದು ಸೂಕ್ಷ್ಮ, ಧಾರ್ಮಿಕ ವಿಚಾರವಾದ ಹಿನ್ನೆಲೆ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವುದು ಸೂಕ್ತ ಎಂದಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿಯ ಎಎಸ್‌ಐ ಸಮೀಕ್ಷೆ ವರದಿ ಸಾರ್ವಜನಿಕಗೊಳಿಸಲಾಗುವುದು: ವಾರಣಾಸಿ ನ್ಯಾಯಾಲಯ

ಹಿಂದೂಗಳ ಕೆಲವೇ ಪವಿತ್ರ ಹಾಗೂ ಸ್ಥಳ ಪುರಾಣಗಳಲ್ಲಿ ಕಾಶಿ ಕೂಡ ಒಂದು. ಉಳಿದಂತೆ ಮಥುರ, ಅಯೋಧ್ಯಾ, ಕಾಶ್ಮೀರ, ಮಾರ್ತಾಂಡ ದೇಗುಲ ಇದೆ. ಇದು ಹಿಂದೂಗಳ ಪವಿತ್ರ ಸ್ಥಳವಾದ್ದರಿಂದ ಇದನ್ನು ಮುಸ್ಲಿಂರೇ ಬಿಟ್ಟು ಕೊಡುವ ಉದಾರತೆ ತೋರಬೇಕಿದೆ. ಈ ಹಿಂದೆ ಹಿಂದೂಗಳು ಹಲವು ಸ್ಥಳ ಬಿಟ್ಟು ಕೊಟ್ಟಿದ್ದಾರೆ. ಮುಸ್ಲಿಂರು ಮೈಸೂರು ಸೇರಿದಂತೆ ಹಲವು ಕಡೆ ಮಂದಿರ ನಿರ್ಮಾಣಕ್ಕೆ ಸಹಕರಿಸಿದ್ದಾರೆ. ಇಲ್ಲೂ ಕೂಡ ಅದೇ ರೀತಿ ಆದರೆ ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

21 ಸಾವಿರಕ್ಕೂ ಹೆಚ್ಚು ದೇಗಲುಗಳ ಮೇಲೆ ದಾಳಿ

ವಿಶ್ವ ವ್ಯಾಪಿ 21 ಸಾವಿರಕ್ಕೂ ಹೆಚ್ಚು ದೇಗಲುಗಳ ಮೇಲೆ ದಾಳಿ ಮಾಡಿ ನಾಶ ಮಾಡಿ ಹೊಸ ಕಟ್ಟಡ ತಲೆ ಎತ್ತಿದೆ. ಇದನ್ನು ಇತಿಹಾಸ ತಜ್ಞರು ದಾಖಲಿಸಿದ್ದಾರೆ. ಕಾಶಿ ಸೇರಿದಂತೆ ಇವೆಲ್ಲಾ ಪ್ರಾಕೃತಿಕ ವೈಪರಿತ್ಯದಿಂದ ನಾಶವಾಗಿಲ್ಲ ದಾಳಿಕೋರರಿಂದಲೇ ನಾಶವಾಗಿದೆ. ಇದನ್ನು ದಾಳಿ ಮಾಡಿದವರೇ ಬರೆದುಕೊಂಡಿದ್ದಾರೆ. ದಾಳಿ ಮಾಡಿ ನಾಶ ಮಾಡಿದನ್ನು ಕೆಳಗೆ ಹಾಕಲು ಕಾರಣ ವಿಜಯದ ಪಾರುಪತ್ಯ. ನಾನು ಗೆದ್ದೆ ಎನ್ನುವುದನ್ನು ತೋರಿಸಲು ಎಲ್ಲವನ್ನೂ ಅಲ್ಲೇ ಉಳಿಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:40 pm, Sat, 27 January 24

Follow Us
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ