AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಸಂಬಂಧಿಕರಿಂದಲೇ ದರೋಡೆಗೆ ಸುಪಾರಿ? ಆಕಸ್ಮಿಕವಾಗಿ ಶೂಟೌಟ್​ಗೆ ಬಲಿಯಾದ ಅಮಾಯಕ ಯುವಕ

ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಅಂಗಡಿ ಮಾಲೀಕನ ಸಂಬಂಧಿಕರಿಂದಲೇ ದರೋಡೆಗೆ ಸುಪಾರಿ ನೀಡಿರುವ ಅನುಮಾನ ವ್ಯಕ್ತವಾಗಿದ್ದು, ಮಾಲೀಕನ ಏಳಿಗೆ ಸಹಿಸದೆ ಸಂಬಂಧಿಕರೇ ಹೀಗೆ ಮಾಡಿದ್ದಾರೆ ಎಂಬ ಶಂಕೆ ದಟ್ಟವಾಗಿದೆ.

ಮೈಸೂರಿನಲ್ಲಿ ಸಂಬಂಧಿಕರಿಂದಲೇ ದರೋಡೆಗೆ ಸುಪಾರಿ? ಆಕಸ್ಮಿಕವಾಗಿ ಶೂಟೌಟ್​ಗೆ ಬಲಿಯಾದ ಅಮಾಯಕ ಯುವಕ
ಸಿಸಿಟಿವಿಯಲ್ಲಿ ಸೆರೆಯಾದ ದರೋಡೆ ದೃಶ್ಯ
TV9 Web
| Edited By: |

Updated on:Aug 27, 2021 | 11:29 AM

Share

ಮೈಸೂರು: ಮೈಸೂರಿನ ವಿದ್ಯಾರಣ್ಯಪುರಂನ ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಅಂಗಡಿಯಲ್ಲಿ ನಡೆದ ದರೋಡೆ, ಶೂಟೌಟ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ತರ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ರಾಜಸ್ಥಾನ ಮೂಲದ ಸತ್ಯೇಂದ್ರ ಪಾಲ್ ಸಿಂಗ್, ತೇಜವೀರ್ ಸಿಂಗ್ ಬಂಧನದ ನಂತರ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಅಂಗಡಿ ಮಾಲೀಕನ ಸಂಬಂಧಿಕರಿಂದಲೇ ದರೋಡೆಗೆ ಸುಪಾರಿ ನೀಡಿರುವ ಅನುಮಾನ ವ್ಯಕ್ತವಾಗಿದ್ದು, ಮಾಲೀಕನ ಏಳಿಗೆ ಸಹಿಸದೆ ಸಂಬಂಧಿಕರೇ ಹೀಗೆ ಮಾಡಿದ್ದಾರೆ ಎಂಬ ಶಂಕೆ ದಟ್ಟವಾಗಿದೆ.

ಅಸಲಿಗೆ ಸುಪಾರಿಯ ಟಾರ್ಗೆಟ್​ ಅಂಗಡಿ ಮಾಲೀಕನಾಗಿದ್ದ. ಆದರೆ ಆಕಸ್ಮಿಕವಾಗಿ ಶೂಟೌಟ್​ಗೆ ಅಮಾಯಕ ಯುವಕ ಬಲಿಯಾಗಿದ್ದಾನೆ ಎಂಬ ಸಂಗತಿ ಬಯಲಾಗಿದೆ. ಇನ್ನೊಂದಷ್ಟು ಮೂಲಗಳ ಪ್ರಕಾರ, ಕೆಲ ತಿಂಗಳ ಹಿಂದೆ ಅಂಗಡಿ ಇಂಟಿರಿಯರ್ ಕೆಲಸ ಮಾಡಿದವರಿಂದಲೇ ಕೃತ್ಯ ನಡೆದಿದೆ ಎನ್ನಲಾಗಿದೆ.

ಅತ್ಯಾಚಾರ ಪ್ರಕರಣ: ಸಂತ್ರಸ್ತೆಯ ಸ್ನೇಹಿತನ ಹೇಳಿಕೆ ಲಭ್ಯ ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನೆ ಹೇಗೆ ನಡೆಯಿತು ಎಂದು ವಿವರಿಸಿದ್ದಾರೆ. ಅದಕ್ಕೆ ಸಂಬಂಧಿಸಿದ ಮಾಹಿತಿ ಟಿವಿ9ಗೆ ಲಭ್ಯವಾಗಿದ್ದು, ಯುವಕ ಹೇಳಿದ ವಿಷಯ ಸಾಂಸ್ಕೃತಿಕ ನಗರಿಯ ಜನರನ್ನು ಬೆಚ್ಚಿಬೀಳಿಸುವಂತಿದೆ. ಯುವಕ ಮತ್ತು ಯುವತಿ ಜಾಗಿಂಗ್​ಗೆ ಹೋದಾಗ ದುಷ್ಕೃತ್ಯ ನಡೆದಿದೆ ಎಂದು ಹೇಳಲಾಗಿದ್ದು, ತನ್ನ ಮೇಲೂ ಹಲ್ಲೆ ನಡೆದಿರುವುದಾಗಿ ಯುವಕ ಹೇಳಿಕೊಂಡಿದ್ದಾನೆ.

ಆಗಸ್ಟ್​ 24ರ ಸಂಜೆ 7.25 ರಿಂದ 7.30ರ ಸುಮಾರಿಗೆ ಜೆಎಸ್‌ಎಸ್ ಆಯುರ್ವೇದಿಕ್ ಕಾಲೇಜಿನ ಮುಂದೆ ವಾಟರ್ ಟ್ಯಾಂಕ್ ಬಳಿ ಕಚ್ಚಾ ರಸ್ತೆಯಲ್ಲಿ ನಾವಿಬ್ಬರೂ ಹೋಗಿದ್ದೆವು. ನಾನು ಯಾವಾಗಲೂ ಜಾಗಿಂಗ್‌ಗೆ ಹೋಗುವ ಸ್ಥಳ ಅದಾಗಿತ್ತು. ಅಲ್ಲಿ ಹೋಗಿ ಬೈಕ್ ನಿಲ್ಲಿಸಿದಾಗ 25 ರಿಂದ‌ 30 ವರ್ಷದ ಸುಮಾರು 6 ಮಂದಿ ಬಂದರು. ಬಲ ಭಾಗದಿಂದ ಏಕಾಏಕಿ ಬಂದು ದೊಣ್ಣೆಯಿಂದ ಹಲ್ಲೆ ಮಾಡಿದರು. ನಂತರ ನನ್ನನ್ನು ತಳ್ಳಿ ಜೊತೆಯಲ್ಲಿದ್ದವಳನ್ನು ಪೊದೆಗಳಿರುವ ಜಾಗಕ್ಕೆ ಎಳೆದುಕೊಂಡು ಹೋದರು. ಅದರಲ್ಲಿ ತೆಳ್ಳಗಿರುವ ಒಬ್ಬ ನನ್ನ ಹಣೆಗೆ ಕಲ್ಲಿನಿಂದ ಹೊಡೆದ. ಆಗ ಪ್ರಜ್ಞೆ ಹೋಗಿ 15 ನಿಮಿಷದ ನಂತರ ಪ್ರಜ್ಞೆ ಬಂತು. ಆಗ 4 ಜನ ನನ್ನ ಮುಂದೆ ನಿಂತು ನನ್ನ ತಂದೆಗೆ ಕಾಲ್ ಮಾಡಿಸಿದರು. 3 ಲಕ್ಷ ರೂಪಾಯಿ ಹಣ ಕೊಡುವಂತೆ ಒತ್ತಾಯ ಮಾಡಿದರು. ನಾನು ಗೆಳತಿ ಎಲ್ಲಿ ಎಂದು ಕೇಳಿದಾಗ ಇಬ್ಬರು ಆಕೆಯನ್ನು ಎಳೆದುಕೊಂಡು ಬಂದು ನನ್ನ ಪಕ್ಕ ಕೂರಿಸಿದರು. ಅವಳು ತೀವ್ರವಾಗಿ ಗಾಯಗೊಂಡು ನಿತ್ರಾಣಗೊಂಡಿದ್ದಳು. ಅವಳಿಗೆ ತರಚಿದ ಗಾಯಗಳಾಗಿದ್ದವು. ಎಂದು ಪೊಲೀಸರಿಗೆ ಸಂತ್ರಸ್ತೆಯ ಸ್ನೇಹಿತ ಹೇಳಿಕೆ ನೀಡಿದ್ದಾನೆ.

(Mysuru Jewellery Shop Robbery and Shootout case police suspects relatives of Jewellery Shop owner behind the incident)

ಇದನ್ನೂ ಓದಿ: ‘ನಾಳೆ ನಮ್ಮ-ನಿಮ್ಮೆಲ್ಲರ ತಂಗಿ-ತಾಯಿಗೂ ಹೀಗಾಗಬಹುದು; ಎಚ್ಚೆತ್ತುಕೊಳ್ಳಿ’: ಮೈಸೂರು​ ಗ್ಯಾಂಗ್ ರೇಪ್​ಗೆ ಅದಿತಿ ಆಕ್ರೋಶ

Published On - 11:00 am, Fri, 27 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು