AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್ ಕೈತಪ್ಪುವ ಆತಂಕದಲ್ಲಿ ಸಂಸದ ಪ್ರತಾಪ್ ಸಿಂಹ: ನಡುರಾತ್ರಿ ಫೇಸ್​​ಬುಕ್​ ಲೈವ್​ನಲ್ಲಿ ಕಣ್ಣೀರು!

ಮೈಸೂರು ಕೊಡಗು ಬಿಜೆಪಿ ಸಂಸದ ಪ್ರತಾಪ್​ ಸಿಂಹಗೆ ಈ ಬಾರಿ ಬಿಜೆಪಿ ಟಿಕೆಟ್ ಕೈತಪ್ಪಲಿದೆ ಎಂಬ ವದಂತಿಗಳ ಬೆನ್ನಲ್ಲೇ ಸೋಮವಾರ ಮಧ್ಯರಾತ್ರಿ ಫೇಸ್​​ಬುಕ್​ ಲೈವ್​ನಲ್ಲಿ ಬಂದ ಅವರು ಕ್ಷೇತ್ರದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. ಇದೇ ವೇಳೆ ಭಾವುಕರಾದ ಅವರು, ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಮತ್ತೆ ಟಿಕೆಟ್ ಸಿಗಬಹುದು ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ.

ಟಿಕೆಟ್ ಕೈತಪ್ಪುವ ಆತಂಕದಲ್ಲಿ ಸಂಸದ ಪ್ರತಾಪ್ ಸಿಂಹ: ನಡುರಾತ್ರಿ ಫೇಸ್​​ಬುಕ್​ ಲೈವ್​ನಲ್ಲಿ ಕಣ್ಣೀರು!
ಟಿಕೆಟ್ ಕೈತಪ್ಪುವ ಆತಂಕದಲ್ಲಿ ಸಂಸದ ಪ್ರತಾಪ್ ಸಿಂಹ: ನಡುರಾತ್ರಿ ಫೇಸ್​​ಬುಕ್​ ಲೈವ್​ನಲ್ಲಿ ಕಣ್ಣೀರು!
ರಾಮ್​, ಮೈಸೂರು
| Updated By: Ganapathi Sharma|

Updated on:Mar 12, 2024 | 6:47 AM

Share

ಮೈಸೂರು, ಮಾರ್ಚ್​ 12: ಲೋಕಸಭೆ ಚುನಾವಣೆ (Lok Sabha Election) ಟಿಕೆಟ್ ಕೈತಪ್ಪುವ ಆತಂಕದಲ್ಲಿರುವ ಮೈಸೂರು ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ (Pratap Simha) ಸೋಮವಾರ ತಡರಾತ್ರಿ ಫೇಸ್​ಬುಕ್​ ಲೈವ್​ನಲ್ಲಿ ಮಾತನಾಡಿ, ಕ್ಷೇತ್ರದ ಜನತೆಗೆ ಧನ್ಯವಾದ ಸಮರ್ಪಿಸಿದ್ದಾರೆ. ಕೊಡಗಿನ (Kodagu) ಜನ ತೋರಿಸಿದ ಪ್ರೀತಿಯನ್ನು ಮರೆಯಲಾರೆ. ನಿಮ್ಮ ಹೃದಯದಲ್ಲಿ ಸ್ಥಾನ ಕೊಟ್ಟಿದ್ದೀರಿ ಎಂದು ಭಾವುಕರಾದರು.

ಸ್ವಾರ್ಥಕ್ಕಾಗಿ ಯಾರ ಮನೆ ಬಾಗಿಲನ್ನೂ ನಾನು ತಟ್ಟಿಲ್ಲ. ಟಿಕೆಟ್ ಸಿಗುತ್ತೋ, ಸಿಗಲ್ವೋ ಚಾಮುಂಡಿ ನಿರ್ಧರಿಸುತ್ತಾಳೆ. ನನ್ನ ಏಳಿಗೆಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಎಂದ ಸಿಂಹ, 10 ವರ್ಷಗಳ ರಾಜಕಾರಣದ ಬಗ್ಗೆ ಸುದೀರ್ಘ ಮಾತುಗಳನ್ನಾಡಿದರು.

ಮಡಿಕೇರಿಯ ಜನರು ನೇರ ಹಾಗೂ ನಿಷ್ಠುರವಾದಿಗಳು. ಆದರೆ, ಮೈಸೂರು ಜನ ರಾಜಕಾರಣ‌ ಮಾಡುವವರು. ಮೈಸೂರಿನಲ್ಲಿರುವಷ್ಟು ರಾಜಕಾರಣ ಎಲ್ಲಿಯೂ ಇಲ್ಲ. ಜನರ ಮಧ್ಯೆ ಇರುವವರಿಗೆ ಪಕ್ಷ ಟಿಕೆಟ್ ನೀಡಬೇಕು. ನನ್ನಿಂದ ಯಾರು ಸಹ ಸೋತಿಲ್ಲ. ನನ್ನ ವಿರುದ್ಧ ಏಕೆ ಇಲ್ಲಸಲ್ಲದ ಆರೋಪ ಮಾಡುತ್ತೀರಿ? ನನ್ನ ಕ್ಷೇತ್ರದಾಚೆಗೂ ಜನ ಪ್ರೀತಿ ವಿಶ್ವಾಸ ತೋರಿಸುತ್ತಿದ್ದಾರೆ. ಈಗಲೂ ಪಕ್ಷ ಟಿಕೆಟ್ ಕೊಡುತ್ತದೆ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದರು.

ರಾಜಕಾರಣದಲ್ಲಿ ಏನಾದರೂ ಆಗಬಹುದು: ಪ್ರತಾಪ್

ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದೆ. ಪ್ರಧಾನಿ ಮೋದಿ ಇರುವವರೆಗೂ ಇರುತ್ತೇನೆ ಎಂದು ಹೇಳಿದ್ದೆ. ನನ್ನಂಥ ವ್ಯಕ್ತಿಗೆ ಟಿಕೆಟ್ ಕೊಡಬೇಕೆಂದು ನಿರೀಕ್ಷಿಸಿದ್ದೆ. ಆದರೆ, ರಾಜಕಾರಣದಲ್ಲಿ ಏನಾದರೂ ಆಗಬಹುದು. ಮೋದಿಯಂಥ ಮೋದಿಯೇ ಗೌಣವಾಗಿದ್ದರು. ಸೂರ್ಯನಿಗೇ ಗ್ರಹಣ ಬಡಿಯುತ್ತದೆ, ಇನ್ನು ನಾನ್ಯಾರು? ನಾನು ಈಗ ಎಂಪಿ ಆಗಿದ್ದೀನಿ, ಎಂಪಿ ಆಗಿಯೇ ಸಾಯುವುದಿಲ್ಲ. ನನ್ನ ನಸೀಬು ಕೆಟ್ಟು ಏನು ಬೇಕಾದರೂ ಆಗಬಹುದು. 10 ವರ್ಷ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ಎಂದು ಪ್ರತಾಪ್ ಸಿಂಹ ಹೇಳಿದರು.

ಪರೋಕ್ಷವಾಗಿ ಮಾಜಿ ಶಾಸಕ ನಾಗೇಂದ್ರ, ರಾಮದಾಸ್ ವಿರುದ್ಧ ಕಿಡಿ

ಮುಡಾದಲ್ಲಿ ಬದಲಿ ಸೈಟ್ ಮಾಡಿದ್ದರೆ ಕೋಟ್ಯಂತರ ಹಣ ಮಾಡುತ್ತಿದ್ದೆ. ಆದರೆ ಮುಡಾದಲ್ಲಿ ಬದಲಿ ಸೈಟ್ ಮಾಡಿಕೊಂಡಿಲ್ಲ. ಗ್ಯಾಸ್ ಪೈಪ್​​ಲೈನ್ ವಿಚಾರದಲ್ಲಿ ರಾಜಕಾರಣ ಮಾಡಿದರು ಎಂದು ಪರೋಕ್ಷವಾಗಿ ಮಾಜಿ ಶಾಸಕ ನಾಗೇಂದ್ರ, ರಾಮದಾಸ್ ವಿರುದ್ಧ ಕಿಡಿ ಕಾರಿದರು. ಮಡಿಕೇರಿ ಜನರು ನೇರ, ನಿಷ್ಠುರವಾದಿಗಳು. ಆದರೆ ಮೈಸೂರು ಜಿಲ್ಲೆಯ ಜನರು ರಾಜಕಾರಣ‌ ಮಾಡುವವರು. ರಾಜರಾಗಿದ್ದ ಶ್ರೀಕಂಠದತ್ತ ಒಡೆಯರ್ ಅವರನ್ನೇ ಜನ ಸೋಲಿಸಿದರು ಎಂದು ಅವರು ಹೇಳಿದರು.

ಇದನ್ನೂ ಓದಿ: 18 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಅಂತಿಮ: ಕಗ್ಗಾಂಟಾಗಿ ಉಳಿದ 10 ಕ್ಷೇತ್ರಗಳು, ಕೆಲ ಹಾಲಿ ಎಂಪಿಗಳಿಗೆ ಟಿಕೆಟ್ ಡೌಟ್

ಡಾ.ಮಹದೇವಪ್ಪ ಜೊತೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಇರಬಹುದು. ಮೈಸೂರಿನಲ್ಲಿ ಯಾರಾದರೂ ಸೋತಿದ್ದರೆ ಅವರ ನಡತೆಗಳು ಕಾರಣ. ವಿಧಾನಸಭೆ ಚುನಾವಣೆಯಲ್ಲಿ ನನ್ನಿಂದ ಯಾರೂ ಕೂಡ ಸೋತಿಲ್ಲ. ನನ್ನ ಕ್ಷೇತ್ರದಾಚೆಗೂ ಕೂಡ ಜನರು ಪ್ರೀತಿ, ವಿಶ್ವಾಸ ತೋರುತ್ತಿದ್ದಾರೆ. ಈಗಲೂ ಕೂಡ ನನಗೆ ಟಿಕೆಟ್ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಿಂಹ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:46 am, Tue, 12 March 24

ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ವಿಡಿಯೋ ನೋಡಿ
ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ವಿಡಿಯೋ ನೋಡಿ
ಈ ಭಾಗದ ಕನಸು ಸಾಕಾರಗೊಳಿಸಿದ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
ಈ ಭಾಗದ ಕನಸು ಸಾಕಾರಗೊಳಿಸಿದ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
ವಿಲ್ ಜ್ಯಾಕ್ಸ್ ಬಿರುಗಾಳಿ ಬ್ಯಾಟಿಂಗ್: 57 ಎಸೆತಗಳಲ್ಲಿ ಮುಗಿದ ಪಂದ್ಯ
ವಿಲ್ ಜ್ಯಾಕ್ಸ್ ಬಿರುಗಾಳಿ ಬ್ಯಾಟಿಂಗ್: 57 ಎಸೆತಗಳಲ್ಲಿ ಮುಗಿದ ಪಂದ್ಯ
ಕಾಲೇಜಿನಲ್ಲಿ ರ‍್ಯಾಗಿಂಗ್, ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ ಕೊಟ್ರು
ಕಾಲೇಜಿನಲ್ಲಿ ರ‍್ಯಾಗಿಂಗ್, ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ ಕೊಟ್ರು