AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಜರನ್ನೇ ರಾಜಕೀಯಕ್ಕೆ ತಂದ ಪಕ್ಷದ ಮುಖಂಡರಿಗೆ ನಮೋ! ಯದುವೀರ್​​ ರಾಜಕೀಯ ಪ್ರವೇಶ ಬಗ್ಗೆ ಪ್ರತಾಪ್​ ಸಿಂಹ ಟಾಂಗ್

ಲೋಕಸಭೆ ಚುನಾವಣೆಯಲ್ಲಿ ರಾಜವಂಶಸ್ಥರಾದ ಯದುವೀರ್ ಒಡೆಯರ್​ಗೆ ಬಿಜೆಪಿ ಟಿಕೆಟ್ ಕೊಟ್ಟರೆ ಸಾಮಾನ್ಯ ಕಾರ್ಯಕರ್ತನಾಗಿ ಅವರ ಪರ ಕೆಲಸ ಮಾಡುವೆ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದರು. ಆದರೆ, ಅದೇ ರೀತಿ ಅವರು ಯದುವೀರ್​ ಹಾಗೂ ಪಕಷದ ನಾಯಕತ್ವಕ್ಕೆ ಪರೋಕ್ಷವಾಗಿ ಟಾಂಗ್ ನೀಡುವುದನ್ನು ಮರೆಯಲಿಲ್ಲ! ಪಕ್ಷದ ನಾಯಕರಿಗೆ ಪರೋಕ್ಷವಾಗಿ ಪ್ರತಾಪ್ ಸಿಂಹ ಚುಚ್ಚಿ ಮಾತನಾಡಿದ್ದು ಹೇಗೆ? ಇಲ್ಲಿದೆ ನೋಡಿ.

ಮಹಾರಾಜರನ್ನೇ ರಾಜಕೀಯಕ್ಕೆ ತಂದ ಪಕ್ಷದ ಮುಖಂಡರಿಗೆ ನಮೋ! ಯದುವೀರ್​​ ರಾಜಕೀಯ ಪ್ರವೇಶ ಬಗ್ಗೆ ಪ್ರತಾಪ್​ ಸಿಂಹ ಟಾಂಗ್
ಪ್ರತಾಪ್​ ಸಿಂಹ
TV9 Web
| Edited By: |

Updated on:Mar 12, 2024 | 2:12 PM

Share

ಮೈಸೂರು, ಮಾರ್ಚ್​ 12: ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಈ ಬಾರಿ ಪ್ರತಾಪ್ ಸಿಂಹ (Pratap Simha) ಬದಲು ರಾಜವಂಶಸ್ಥರಾದ ಯದುವೀರ್ ಒಡೆಯರ್​ಗೆ ಬಿಜೆಪಿ (BJP) ಟಿಕೆಟ್ ನೀಡಲಿದೆ ಎಂಬ ಬಗ್ಗೆ ವರದಿಗಳಾಗಿವೆ. ಈ ವಿಚಾರವಾಗಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ, ಯದುವೀರ್​ಗೆ ಟಿಕೆಟ್ ಕೊಟ್ಟರೆ ಸ್ವಾಗತ. ಕಾರ್ಯಕರ್ತನಾಗಿ ಅವರ ಪರ ಕೆಲಸ ಮಾಡುತ್ತೇನೆ. ಅರಮನೆಯ ದರ್ಬಾರಿನಲ್ಲಿರುವ ಬದಲು ಸಾಮಾನ್ಯ ಪ್ರಜೆಗಳಂತೆ ಬದುಕಲು ಬಂದರೆ ಸ್ವಾಗತಿಸದಿರಲು ಆಗುತ್ತದೆಯೇ ಎಂದು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ರಾಜ-ಪ್ರಜೆ ನಡುವಣ ವ್ಯತ್ಯಾಸ ಬದಿಗಿಟ್ಟು ಬಂದರೆ ಅವರಿಗೆ ಸ್ವಾಗತ. ರಾಜರೇ ಪ್ರಜೆಗಳ ಜೊತೆ ಇರಲು ಬಂದರೆ ನನ್ನ ಸ್ವಾಗತ. ಅರಮನೆ ಆಸ್ತಿ ವಿಚಾರದಲ್ಲಿ ಸರ್ಕಾರದ ನಡುವೆ ವ್ಯಾಜ್ಯಗಳಿವೆ. ಅದರಲ್ಲಿ ಬಹುತೇಕ ಆಸ್ತಿಗಳು ಸಾರ್ವಜನಿಕರ ಬಳಕೆಯಲ್ಲಿವೆ. ಯದುವೀರ್ ಜನಪ್ರತಿನಿಧಿ ಆಗಿ ಆ ಆಸ್ತಿಗಳನ್ನು ಜನರಿಗೆ ಬಿಟ್ಟು ಕೊಡಿಸುತ್ತಾರೆ. ಅರಮನೆಯಲ್ಲಿ ಅರಾಮವಾಗಿದ್ದ ವ್ಯಕ್ತಿ ಹೋರಾಟಕ್ಕೆ ಬರುತ್ತಿದ್ದಾರೆ. ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಹೋರಾಡಲು ಬೀದಿಗೆ ಬಂದ್ರೆ ಸಂತೋಷ. ಅರಮನೆ ವೈಭೋಗ ಬೇಡ, ಹೋರಾಟಕ್ಕೆ ಬರುತ್ತೇನೆ ಅಂದರೆ ಸ್ವಾಗತ. ಠಾಣೆಗೆ ಬಂದು ರಾಜರು ಸಮಸ್ಯೆ ಬಗೆಹರಿಸಿದರೆ ಸಂತೋಷ ಅಲ್ವಾ ಎಂದು ಅವರು ಹೇಳಿದರು.

ಸುಖದ ಸುಪತ್ತಿಗೆಯಲ್ಲಿದ್ದವರನ್ನು ರಾಜಕೀಯಕ್ಕೆ ತಂದವರಿಗೆ ಧನ್ಯವಾದ. ಮಹಾರಾಜರನ್ನೇ ರಾಜಕೀಯಕ್ಕೆ ತಂದ ನಮ್ಮ ಮುಖಂಡರಿಗೆ ಧನ್ಯವಾದ ಎಂದು ಪ್ರತಾಪ್ ಸಿಂಹ ಟಾಂಗ್ ನೀಡಿದ್ದಾರೆ.

ನನ್ನಷ್ಟು ಹಿಂದುತ್ವಕ್ಕೆ ಬದ್ಧತೆಯುಳ್ಳ ಸಂಸದರು ಇನ್ಯಾರಿದ್ದಾರೆ: ಸಿಂಹ ಪ್ರಶ್ನೆ

ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಭೇಟಿ ಮಾಡುವಂತೆ ಕರೆದಿದ್ದಾರೆ. ಇಂದು ಮಧ್ಯಾಹ್ನ ಬೆಂಗಳೂರಿಗೆ ತೆರಳುತ್ತೇನೆ. ನನಗೆ ಈ ಕ್ಷಣಕ್ಕೂ ವಿಶ್ವಾಸವಿದೆ. ಸಂಘಟನೆ, ಸಿದ್ಧಾಂತಕ್ಕೆ ಗಟ್ಟಿಯಾಗಿ ನಿಂತಿರುವ ನನಗೆ ಟಿಕೆಟ್ ಸಿಗುತ್ತದೆ. 25 ಸಂಸದರಲ್ಲಿ ಹಿಂದುತ್ವದ ಬಗ್ಗೆ ನನ್ನಷ್ಟು ಬದ್ಧತೆ ಇರುವವರು ಇನ್ಯಾರಿದ್ದಾರೆ? ಹಿಂದುತ್ವದ ವಿಚಾರದಲ್ಲಿ ನನ್ನನ್ನು ಯಾರ ಜತೆಗೂ ಹೋಲಿಕೆ ಮಾಡಲು ಆಗಲ್ಲ.

ಇದನ್ನೂ ಓದಿ: ಟಿಕೆಟ್ ಕೈತಪ್ಪುವ ಆತಂಕದಲ್ಲಿ ಸಂಸದ ಪ್ರತಾಪ್ ಸಿಂಹ: ನಡುರಾತ್ರಿ ಫೇಸ್​​ಬುಕ್​ ಲೈವ್​ನಲ್ಲಿ ಕಣ್ಣೀರು!

ಪ್ರಧಾನಿ ಮೋದಿ ಬಗ್ಗೆ ಸಿದ್ದರಾಮಯ್ಯ ಬಾಯಿಗೆ ಬಂದ ರೀತಿ ಟೀಕಿಸಿದಾಗ ಅವರ ಮಾತನ್ನು ದೊಡ್ಡ ಮಟ್ಟದಲ್ಲಿ ಖಂಡಿಸುವ ವ್ಯಕ್ತಿ ಈ ಪ್ರತಾಪ್ ಸಿಂಹ. ಇದು ನನ್ನ ದೌರ್ಬಲ್ಯವಾ? ಮೈಸೂರು, ಕೊಡಗು ಅಭಿವೃದ್ಧಿಗೆ ಅತಿ ಹೆಚ್ಚಿನ ಕೆಲಸ ಮಾಡಿದ್ದು ನನ್ನ ದೌರ್ಬಲ್ಯವಾ? ನನಗೆ ಪಕ್ಷ ನಿಷ್ಠೆ ಇದೆ. ಬ್ಯಾನರ್, ಬಂಟಿಂಗ್ ಕಟ್ಟಲು ನಾನು ಸಿದ್ಧ. ನನಗಾಗಿ ಪಕ್ಷ, ಕಾರ್ಯಕರ್ತರು ದುಡಿದಿದ್ದಾರೆ. ನಾನು ಮುಂದೆ ಅವರಂತೆಯೇ ದುಡಿಯುತ್ತೇನೆ. ಯದುವೀರ್​ಗೆ ಟಿಕೆಟ್ ಕೊಡುವುದು ನಿಜವಾದದರೆ ಅದನ್ನು ಸ್ವಾಗತಿಸುತ್ತೇನೆ. ಕಾರ್ಯಕರ್ತನಾಗಿ ಅವರ ಪರ ಕೆಲಸ ಮಾಡುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:59 pm, Tue, 12 March 24

Follow Us
TV9 Web
TV9 Web

TV9 Kannada

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್