AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುತ್ತಾ ಒಕ್ಕಲಿಗ, ಬೆಳೆಯುತ್ತಾ ವಿಶ್ವ ಮಾನವ; ಜಾತಿ ಪ್ರಮಾಣ ಪತ್ರ ಪ್ರದರ್ಶಿಸಿ ಬಿಜೆಪಿಗೆ ಟಾಂಟ್ ಕೊಟ್ಟ ಲಕ್ಷ್ಮಣ್

ಮೈಸೂರಿನಲ್ಲಿ ಒಕ್ಕಲಿಗ ಜಾತಿ ಕಾರ್ಡ್​ ವಿಚಾರ ತಾರಕಕ್ಕೇರಿದೆ. ಸದ್ಯ ಬಿಜೆಪಿ ಮಾಡುತ್ತಿರುವ ಜಾತಿವಾರು ಆರೋಪಗಳಿಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಎಂ. ಲಕ್ಷ್ಮಣ್ ತಿರುಗೇಟು ನೀಡಿದ್ದಾರೆ. ನಾನು ಹುಟ್ಟುತ್ತಾ ಒಕ್ಕಲಿಗ, ಬೆಳೆಯುತ್ತಾ ವಿಶ್ವ ಮಾನವ. ಬಿಜೆಪಿ ಚೀಪ್ ಪಾಲಿಟಿಕ್ಸ್ ಕೈ ಬಿಡಬೇಕು. ನಾನು ಒಕ್ಕಲಿಗನಲ್ಲ ಅಂತಾ ಬಿಜೆಪಿಯವರು ಗೊಂದಲ ಮೂಡಿಸ್ತಿದ್ದಾರೆ ಎಂದು ಗುಡುಗಿದ್ದಾರೆ.

ಹುಟ್ಟುತ್ತಾ ಒಕ್ಕಲಿಗ, ಬೆಳೆಯುತ್ತಾ ವಿಶ್ವ ಮಾನವ; ಜಾತಿ ಪ್ರಮಾಣ ಪತ್ರ ಪ್ರದರ್ಶಿಸಿ ಬಿಜೆಪಿಗೆ ಟಾಂಟ್ ಕೊಟ್ಟ ಲಕ್ಷ್ಮಣ್
ಎಂ.ಲಕ್ಷ್ಮಣ್
ರಾಮ್​, ಮೈಸೂರು
| Updated By: ಆಯೇಷಾ ಬಾನು|

Updated on: Mar 28, 2024 | 1:04 PM

Share

ಮೈಸೂರು, ಮಾರ್ಚ್​.28: 1951ರಿಂದ 17 ಚುನಾವಣೆ ಕಂಡಿರುವ ಮೈಸೂರು ಕ್ಷೇತ್ರದಲ್ಲಿ (Mysuru Lok Sabha Election) 12 ಬಾರಿ ಕಾಂಗ್ರೆಸ್ ಗೆದ್ದು ಬೀಗಿದೆ. ಬಿಜೆಪಿ 4 ಬಾರಿ ಗೆದ್ದಿದೆ. ಇಲ್ಲಿ ಗೆಲುವು ಸಾಧಿಸಲು ಒಕ್ಕಲಿಗ ಸಮುದಾಯದ ಮತಗಳು ನಿರ್ಣಾಯಕ. ಸದ್ಯ ಮೈಸೂರಿನಲ್ಲಿ ಒಕ್ಕಲಿಗ ಜಾತಿ ಕಾರ್ಡ್​ ವಿಚಾರ ತಾರಕಕ್ಕೇರಿದೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ (M Lakshman) ಜಾತಿ ಪ್ರಮಾಣ ಪತ್ರ ಪ್ರದರ್ಶಿಸಿ ಬಿಜೆಪಿ ವಿರುದ್ಧ ಗುಡುಗಿದ್ದಾರೆ.

ನಾನು ಹುಟ್ಟುತ್ತಾ ಒಕ್ಕಲಿಗ, ಬೆಳೆಯುತ್ತಾ ವಿಶ್ವ ಮಾನವ. ಬಿಜೆಪಿ ಚೀಪ್ ಪಾಲಿಟಿಕ್ಸ್ ಕೈ ಬಿಡಬೇಕು. ನಾನು ಒಕ್ಕಲಿಗನಲ್ಲ ಅಂತಾ ಬಿಜೆಪಿಯವರು ಗೊಂದಲ ಮೂಡಿಸ್ತಿದ್ದಾರೆ. ನಾನು ಒಕ್ಕಲಿಗ ಅಂತಾ ಸುಳ್ಳು ಹೇಳುವ ಅಗತ್ಯವಿಲ್ಲ. ಪ್ರತಾಪಸಿಂಹ ಮೊದಲ ಬಾರಿ ಬಂದಾಗ ಗೌಡ ಅಂತಾ ಬದಲಿಸಿಕೊಂಡ್ರು. ಅದೇ ರೀತಿ ನಾನು ಲಕ್ಷ್ಮಣ್ ಗೌಡ ಅಂತಾ ಬದಲಾಯಿಸಿಕೊಳ್ಳಬೇಕಾ? ಹಣೆಯ ಮೇಲೆ ಒಕ್ಕಲಿಗ ಅಂತಾ ಬರೆದುಕೊಂಡು ಓಡಾಡಲು ಆಗುತ್ತಾ? ಸಂಸದ ಪ್ರತಾಪ್​ಸಿಂಹಗೆ ಒಕ್ಕಲಿಗರು 10 ವರ್ಷ ಅವಕಾಶ ಕೊಟ್ಟಿದ್ದಾರೆ. ನನಗೂ ಒಂದು ಅವಕಾಶ ಕೊಡಿ ಎಂದು ಕೇಳುವುದು ತಪ್ಪಾ ಎಂದು ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ನನ್ನ ಸೋಲಿನ ಬಗ್ಗೆ ಹೇಳಲು ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರು: ಕುಮಾರಸ್ವಾಮಿ ಪ್ರಶ್ನೆ

ವಂಶವೃಕ್ಷ ಬಿಚ್ಚಿಟ್ಟ ಲಕ್ಷ್ಮಣ್

ಜಾತಿ ಸಾಬೀತು ಮಾಡಲು ಮಾಧ್ಯಮದ ಮುಂದೆ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ವಂಶವೃಕ್ಷವನ್ನೇ ಬಿಚ್ಚಿಟ್ಟಿದ್ದಾರೆ. ನಾನು ಹುಟ್ಟಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕುಲುವನಹಳ್ಳಿಯಲ್ಲಿ. ಮೈಸೂರಿಗೆ ಬಂದು ನೆಲೆನಿಂತು 35 ವರ್ಷ ಆಯ್ತು. ನನ್ನ ತಂದೆ ಮುದ್ದಲಿಂಗೇಗೌಡ, ತಾಯಿ ಸಾಕಮ್ಮ. ನಾನು ಮೈಸೂರು ಕನ್ನೇಗೌಡನ ಕೊಪ್ಪಲಿನಲ್ಲಿದ್ದೆ. ಮಾವ ನಿವೃತ್ತ ಎನ್‌ಸಿಸಿ ಆಫೀಸರ್ ಕೆ ಸಿ.ಮರೀಗೌಡ, ಅತ್ತೆ ಲಕ್ಷ್ಮಿ. ಪತ್ನಿ ರೂಪಶ್ರೀಗೌಡ, ಮಗಳು ವರ್ಷಿತಾಗೌಡ, ಮಗ ಆದಿತ್ಯ ಲಕ್ಷ್ಮಣ್. ನಾನು ಹುಟ್ಟುತ್ತ ಒಕ್ಕಲಿಗ ಹೌದು ಆಗಂತ ಲಕ್ಷ್ಮಣ್ ಗೌಡ ಅಂತ ಹೆಸರು ಇಟ್ಟುಕೊಂಡಿಲ್ಲ. ಎಲ್ಲಾ ಜಾತಿಯನ್ನು ಒಟ್ಟಿಗೆ ತೆಗೆದುಕೊಂಡು ಹೋಗುವವನು ನಾನು ಎಂದು ಲಕ್ಷ್ಮಣ್ ತಿಳಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!