AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಷ ದಸರಾ ಆಚರಿಸಿಯೇ ತೀರುತ್ತೇವೆ ಎಂದ ಸಮಿತಿ ಸದಸ್ಯರು

ಬುದ್ದ ವಿಹಾರದಿಂದ ಅಶೋಕಪುರಂ ಉದ್ಯಾನವನದವರೆಗೂ ಮಹಿಷ ಮೂರ್ತಿ ಮೆರವಣಿಗೆ ಮೂಲಕ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದೆ.

ಮಹಿಷ ದಸರಾ ಆಚರಿಸಿಯೇ ತೀರುತ್ತೇವೆ ಎಂದ ಸಮಿತಿ ಸದಸ್ಯರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 04, 2021 | 9:07 PM

Share

ಮೈಸೂರು: ದಸರಾ ಉದ್ಘಾಟನೆಗೆ ದಿನಾಂಕ ಈಗಾಗಲೇ ನಿಗದಿಯಾಗಿದೆ. ಮೈಸೂರಿನಲ್ಲಿ ಅಕ್ಟೋಬರ್ 7ರ ಗುರುವಾರ ಬೆಳಿಗ್ಗೆ 8.15ರಿಂದ 8.45ರ ಶುಭ ಮುಹೂರ್ತದಲ್ಲಿ ದಸರೆಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಚಾಲನೆ‌ ನೀಡಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಇನ್ನು ಆಹ್ವಾನ ಪತ್ರಿಕೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ದಸರಾ ಸಂದೇಶ ನೀಡಿದ್ದಾರೆ. ಕೊರೊನಾ ಹಿನ್ನೆಲೆ ಕಳೆದ ಬಾರಿಯಂತೆ ಸರಳ ದಸರಾ ಆಚರಿಸಲಾಗುತ್ತಿದೆ. ಜೀವನದೊಂದಿಗೆ ಜೀವವೂ ಮುಖ್ಯ ಆಶಯದೊಂದಿಗೆ ಈ ನಿರ್ಧಾರ‌ ಕೈಗೊಳ್ಳಲಾಗಿದೆ. ತಾಯಿ ಚಾಮುಂಡೇಶ್ವರಿ ಕೃಪೆಯಿಂದ ಮುಂದಿನ ಬಾರಿ ವಿಜೃಂಭಣೆಯಿಂದ ದಸರಾ ಆಚರಿಸೋಣ ಅಂತಾ ಆಹ್ವಾನ ಪತ್ರಿಕೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಂದೇಶ ನೀಡಿದ್ದಾರೆ.

ಮಹಿಷ ದಸರಾ ಸಮಿತಿ ಸದಸ್ಯರು ಮೈಸೂರು ದಸರಾ ಆಚರಣೆಗಾಗಿ ಪಟ್ಟು ಹಿಡಿದು ಕುಳಿತಿದ್ದಾರೆ. ಮಂಗಳವಾರ (ಅಕ್ಟೋಬರ್ 5) ಅನುಮತಿ ನೀಡಲಿ-ಬಿಡಲಿ ಮಹಿಷ ದಸರಾ ಆಚರಿಸುವುದಾಗಿ ಸಮಿತಿ ಸದಸ್ಯರು ಸ್ಪಷ್ಟಪಡಿಸಿದ್ದಾರೆ. ಇದಕ್ಕಾಗಿ ಆಹ್ವಾನ ಪತ್ರಿಕೆಯನ್ನೂ ಸಹ ಸಿದ್ದಪಡಿಸಿದ್ದಾರೆ. ಮಂಗಳವಾರ 9 ಗಂಟೆಗೆ ಮೈಸೂರಿನ ಅಶೋಕಪುರಂನಲ್ಲಿ ಮೆರವಣಿಗೆ ಮೂಲಕ ಮಹಿಷ ದಸರಾ ಆಚರಣೆಗೆ ಸಿದ್ದತೆ ನಡೆದಿದೆ. ಬುದ್ದ ವಿಹಾರದಿಂದ ಅಶೋಕಪುರಂ ಉದ್ಯಾನವನದವರೆಗೂ ಮಹಿಷ ಮೂರ್ತಿ ಮೆರವಣಿಗೆ ಮೂಲಕ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಇದಕ್ಕೆ ಅನುಮತಿ ನೀಡದ ಸರ್ಕಾರ ಜಿಲ್ಲಾಧಿಕಾರಿ ಹಾಗೂ ಮೈಸೂರು ಪೊಲೀಸ್ ಕಮಿಷನರ್ ವಿರುದ್ದ ಸಮಿತಿ ಸದಸ್ಯರು ಹರಿಹಾಯ್ದಿದ್ದಾರೆ.

ಇದುವರೆಗೂ ಮಹಿಷ ದಸರಾ ಆಚರಣೆಗೆ ಪೊಲೀಸರಿಂದ ಹಾಗೂ ಜಿಲ್ಲಾ ಆಡಳಿತದಿಂದ ಅನುಮತಿ ಸಿಕ್ಕಿಲ್ಲ ಆದರೂ ನಾವು ಮಹಿಷ ದಸರಾ ಆಚರಿಸಿ‌ಯೇ ತೀರುತ್ತೇವೆ ಎಂಬುದು ಮಹಿಷ ಸಮಿತಿ ಸದಸ್ಯರ ಪಟ್ಟು. ಈಗಾಗಿ ಸಹಜವಾಗಿ ನಾಳೆಯ ಬೆಳವಣಿಗೆ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಇದನ್ನೂ ಓದಿ: 

‘ಕೊರೊನಾ ಹಿನ್ನೆಲೆ ಸರಳವಾಗಿ ದಸರಾ ಆಚರಿಸೋಣ’ ಮೈಸೂರು ದಸರಾ ಆಹ್ವಾನ ಪತ್ರಿಕೆಯಲ್ಲಿ ಸಿಎಂ ಸಂದೇಶ 

Mysuru Dasara: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ತಯಾರಾಗುತ್ತಿದೆ ಮೈಸೂರು; ಸಿದ್ಧತೆ ಹೇಗಿದೆ?

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ