AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕಿ ವಿದ್ಯುತ್ ಬಿಲ್​​ ಕಟ್ಟುವಂತೆ ಮೊಬೈಲ್‌ಗೆ ಬಂದಿದ್ದ ಲಿಂಕ್‌ ಕ್ಲಿಕ್ಕಿಸಿ 5.48 ಲಕ್ಷ ರೂ ಕಳೆದುಕೊಂಡ ಮೈಸೂರಿನ ವ್ಯಕ್ತಿ

ಮೈಸೂರಿನ ವ್ಯಕ್ತಿಯೊಬ್ಬರು ಹ್ಯಾಕರ್‌ಗಳು ಕಳಿಸಿದ್ದ ಲಿಂಕ್‌ ಅನ್ನು ಕ್ಲಿಕ್‌ ಮಾಡಿ ಬರೋಬ್ಬರಿ 5.48 ಲಕ್ಷ ರೂ ಹಣ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಬಾಕಿ ವಿದ್ಯುತ್​ ಬಿಲ್ ಕಟ್ಟುವಂತೆ ಹೇಳಿ ಮೊಬೈಲ್​ಗೆ ಲಿಂಕ್​ ಕಳುಹಿಸಿ ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಡ್ರಾ ಮಾಡಿಕೊಂಡು ವಂಚನೆ ಮಾಡಿದ್ದಾರೆ.​

ಬಾಕಿ ವಿದ್ಯುತ್ ಬಿಲ್​​ ಕಟ್ಟುವಂತೆ ಮೊಬೈಲ್‌ಗೆ ಬಂದಿದ್ದ ಲಿಂಕ್‌ ಕ್ಲಿಕ್ಕಿಸಿ  5.48 ಲಕ್ಷ ರೂ ಕಳೆದುಕೊಂಡ ಮೈಸೂರಿನ ವ್ಯಕ್ತಿ
ಮೈಸೂರು ಸೈಬರ್ ಪೊಲೀಸ್ ಠಾಣೆ
ರಾಮ್​, ಮೈಸೂರು
| Edited By: |

Updated on:Aug 10, 2023 | 1:14 PM

Share

ಮೈಸೂರು, (ಆಗಸ್ಟ್ 10): ಕಾಂಗ್ರೆಸ್ (Congress) ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ 200 ಯುನಿಟ್ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ ಸಂಬಂಧ ಇನ್ನೂ ಅನೇಕ ಜನರಲ್ಲಿ ಗೊಂದಲಗಳು ಇವೆ. 200 ಯುನಿಟ್​ಗಿಂತ ಕಡಿಮೆ ಉಪಯೋಗಿಸಿದ್ದರೂ ಬಿಲ್​ ಕೊಟ್ಟಿದ್ದಾರೆ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, ಇನ್ನೂ ಕೆಲವರು ನಮಗೆ ಝೀರೋ ವಿದ್ಯುತ್ ಬಿಲ್ (electricity bill)​ ಬಂದಿದೆ ಎಂದು ಫುಲ್ ಖುಷಿಯಾಗಿದ್ದಾರೆ. ಇನ್ನು ಗ್ಯಾರಂಟಿಗಳಿಗೆ ಅರ್ಜಿಗಾಗಿ ನಕಲಿ ಆ್ಯಪ್​ಗಳು ಸಹ ತಲೆ ಎತ್ತಿದ್ದು, ಸೈಬರ್​ ವಂಚಕರು ಸಾರ್ವಜನಿಕರ ಹಣ ಪೀಕಲು ಬಕಪಕ್ಷಿಯಂತೆ ಕಾಯುತ್ತಿದ್ದಾರೆ. ಅದರಂತೆ ಮೈಸೂರಿನಲ್ಲಿ ದೂರವಾಣಿ ಕರೆ ಮಾಡಿ ಬಾಕಿ ವಿದ್ಯುತ್ ಬಿಲ್ ಕಟ್ಟುವಂತೆ ಹೇಳಿ ವ್ಯಕ್ತಿಯೊಬ್ಬರ ಖಾತೆತಿಂದ​ ಬರೋಬ್ಬರಿ 5.48 ಲಕ್ಷ ರೂ. ದೋಚಿರು ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಫೋನ್​ಪೇ ಮಾಡುವುದಾಗಿ ನಂಬಿಸಿ ಅಂಗವಿಕಲ ಆಟೋ ಚಾಲಕನಿಗೆ ವಂಚಿಸಿದ ಯುವತಿ

ಮೈಸೂರಿನ ಯಾದವಗಿರಿ ಬಡಾವಣೆ ನಿವಾಸಿ ಕಣ್ಣನ್ ಎಂಬುವರಿಗೆ ವಂಚಕರು ದೂರವಾಣಿ ಕರೆ ವಿದ್ಯುತ್ ಬಿಲ್ ಬಾಕಿ ಇದ್ದು,  ಲಿಂಕ್​ ಮೂಲಕ ಪಾವತಿಸುವಂತೆ ಸೂಚಿಸಿದ್ದಾರೆ. ಕರೆ ಕಡಿತಗೊಳಿಸಿದ ನಂತರ ಖದೀಮರು, ಕಣ್ಣನ್ ಅವರ ಫೋನ್​ಗೆ ಲಿಂಕ್ ಕಳುಹಿಸಿ ಹಣ ಪಾವತಿಸುವಂತೆ ಹೇಳಿದ್ದಾರೆ. ಅದಂತೆ ಕಣ್ಣನ್ ಅವರು ಸಹ ವಂಚಕರು ಕಳುಹಿಸಿದ್ದ ಲಿಂಕ್​ ಮೇಲೆ ಕ್ಲಿಕ್​ ಮಾಡಿದ್ದಾರೆ. ಬಳಿಕ ವಂಚಕರು ಲಿಂಕ್ ಮೂಲಕ ಸಂಪೂರ್ಣ ಮಾಹಿತಿ ಪಡೆದು ಖಾತೆಯಿಂದ 5,48,149 ರೂ. ಡ್ರಾ ಮಾಡಿಕೊಂಡಿದ್ದಾರೆ. ಹಣ ಡ್ರಾ ಆಗಿರುವ ಮೆಸೇಜ್ ನೋಡಿ ಶಾಕ್ ಆದ ಕಣ್ಣನ್​ ಅವರು ಕೂಡಲೇ ಮೈಸೂರು ಸೈಬರ್ ಪೊಲೀಸ್ ಠಾಣೆಗೆ ತೆರೆಳಿ ದೂರು ದಾಖಲಿಸಿದ್ದಾರೆ.

ಹೀಗೆ ನಿಮ್ಮ ಮೊಬೈಲ್​ಗೆ ನಾನಾ ಬಗೆಯ ಸಂದೇಶಗಳು ಬರುತ್ತಿರುತ್ತವೆ. ನಿಮಗೆ ಲಾಟರಿ ಹೊಡೆದಿದೆ. ನಿಮಗೆ ಕೊಡುಗೆ ನೀಡುತ್ತಿದ್ದೇವೆ ಅಂತೆಲ್ಲಾ ನಾನಾ ಮೆಸೇಜ್​ಗಳು ಬರುತ್ತವೆ. ಆದ್ರೆ, ಈ ಬಗ್ಗೆ ನೀವು ಎಚ್ಚರದಿಂದ ಇರುವುದು ಒಳಿತು. ಒಂದು ವಂಚಕರು ಹೇಳಿದ ಹಾಗೇ ಕೇಳಿದ್ರೆ ನಿಮ್ಮ ಖಾತೆಯಲ್ಲಿರುವ ಹಣ ಕೆಲವೇ ಸೆಕೆಂಡ್​ಗಳಲ್ಲಿ ಮಾಯವಾಗುವುದು ಗ್ಯಾರಂಟಿ. ಯಾರು ಬಲೆ ಬೀಳುತ್ತಾರೆ ಯಾರಿಲ್ಲ ಎಂದು ಸೈಬರ್ ವಂಚಕರು ಬಕಪಕ್ಷಿಗಳಂತೆ ಕಾದು ಕುಳಿತಕೊಂಡಿರುತ್ತಾರೆ. ಈ ಬಗ್ಗೆ ಎಚ್ಚರದಿಂದ ಇರಿ.

ಮೈಸೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:06 pm, Thu, 10 August 23

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ