AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಅಭಿವೃದ್ಧಿ ಮಾಡಿದ್ದು ನಾನು, ನಾನು, ನಾನು! ಮೈಸೂರು ಮಹಾರಾಜರನ್ನು ಬಿಟ್ಟರೆ ನೆಕ್ಸ್ಟ್​​ ನಾನೇ: ಮೈಸೂರು ಶಾಸಕರಿಗೆ ಸಿಂಹ ಸವಾಲು

Mysuru MP Pratap Simha: ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂಸದ ಪ್ರತಾಪ್​ ತಮ್ಮಕ್ಷೇತ್ರದಲ್ಲಿ ಬೆಳವಣಿಗೆಗಳು, ಅಭಿವೃದ್ಧಿ ಕಾರ್ಯಗಳ ಅಗಲಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡಿದ್ದಾರೆ. ಮೈಸೂರು ಅಭಿವೃದ್ಧಿ ಮಾಡಿದ್ದು ನಾನು, ನಾನು, ನಾನು..! ಎಂದು ಘಂಟಾಘೋಷವಾಗಿ ಹೇಳಿರುವ ಸಂಸದ ಪ್ರತಾಪ್ ಸಿಂಹ, ಮೈಸೂರು ಮಹಾರಾಜರನ್ನು ಬಿಟ್ಟರೆ ನೆಕ್ಟ್ ನಾನೇ ಎಂದು ಘೋಷಿಸಿಕೊಂಡಿದ್ದಾರೆ.

ಮೈಸೂರು ಅಭಿವೃದ್ಧಿ ಮಾಡಿದ್ದು ನಾನು, ನಾನು, ನಾನು! ಮೈಸೂರು ಮಹಾರಾಜರನ್ನು ಬಿಟ್ಟರೆ ನೆಕ್ಸ್ಟ್​​ ನಾನೇ: ಮೈಸೂರು ಶಾಸಕರಿಗೆ ಸಿಂಹ ಸವಾಲು
ಪ್ರತಾಪ್ ಸಿಂಹ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 29, 2022 | 1:43 PM

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಡುಗೆ ಅನಿಲ ಕೊಳವೆ ಮಾರ್ಗ ಅಳವಡಿಸುವ ವಿಷಯದಲ್ಲಿ ಸ್ವಪಕ್ಷೀಯರಿಂದ ಟೀಕೆಗೆ ಒಳಗಾಗಿರುವ ಮೈಸೂರು-ಕೊಡಗು ಸಂಸದೀಯ ಕ್ಷೇತ್ರಕ್ಕೆ ಎರಡು ಬಾರಿ ಸಂಸದರಾಗಿರುವ ಪ್ರತಾಪ್ ಸಿಂಹ (Pratap simha) ಮೈಸೂರಿನ ಶಾಸಕರಿಗೆ ಸಿಂಹ ಸವಾಲು ಹಾಕಿದ್ದಾರೆ. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂಸದ ಪ್ರತಾಪ್​ ತಮ್ಮಕ್ಷೇತ್ರದಲ್ಲಿ ಬೆಳವಣಿಗೆಗಳು, ಅಭಿವೃದ್ಧಿ ಕಾರ್ಯಗಳ ಅಗಲಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡಿದ್ದಾರೆ. ಮೈಸೂರು ಅಭಿವೃದ್ಧಿ ಮಾಡಿದ್ದು ನಾನು, ನಾನು, ನಾನು..! ಎಂದು ಘಂಟಾಘೋಷವಾಗಿ ಹೇಳಿರುವ ಸಂಸದ ಪ್ರತಾಪ್ ಸಿಂಹ, ಮೈಸೂರು ಮಹಾರಾಜರನ್ನು (mysore wadeyar) ಬಿಟ್ಟರೆ ನೆಕ್ಟ್ ನಾನೇ ಎಂದು ಘೋಷಿಸಿಕೊಂಡಿದ್ದಾರೆ.

ಮಹಾರಾಜರ ನಂತರ ಅತಿಹೆಚ್ಚು ಲೀಡ್‌ನಲ್ಲಿ ಗೆದ್ದಿರೋದು ನಾನು. ನನ್ನಿಂದಲೇ ಮೈಸೂರು ಅಭಿವೃದ್ಧಿ ಆಗಿರೋದು. ಶಾಸಕ ಎಲ್. ನಾಗೇಂದ್ರ ಅಭಿವೃದ್ಧಿ ಹರಿಕಾರ ಅನ್ನುವ ಭ್ರಮೆಯಲ್ಲಿದ್ದಾರೆ. 30 ಕೋಟಿ ರೂ. ಅನುದಾನ ತಂದಿಲ್ಲ. 300 ಕೋಟಿ ರೂ. ಕೆಲಸ ಅಂತ ಹೇಳುತ್ತಾರೆ. ಎಲ್ಲಿದೆ 300 ಕೋಟಿ ? ಯಾವ ರಸ್ತೆ ಮಾಡಿದ್ದೀರಿ ಅಂತಾ ತೋರಿಸಿ. ಚಾಮರಾಜ ಕ್ಷೇತ್ರದ ಕೆ.ಆರ್. ಆಸ್ಪತ್ರೆಯಲ್ಲಿ ಸೊಳ್ಳೆ, ನಾಯಿ ಕಾಟ ಇದೆ. ನಿಮ್ಮ ಕ್ಷೇತ್ರದ ವಿಜಯನಗರದಲ್ಲಿ ವಾಟರ್ ಟ್ಯಾಂಕ್ ಹಾಕಿಸಿದ್ದು ನಾನು. ಪಾಸ್ ಪೊರ್ಟ್ ಸೇವಾ ಕೇಂದ್ರ ಮಾಡಿಸಿದ್ದು ನಾನು. ಶಾಸಕರು ಗೋವಾಕ್ಕೆ ಹೋಗುವ ಫ್ಲೈಟ್ ತಂದಿದ್ದು ನಾನು. ಬೆಂಗಳೂರು- ಮೈಸೂರು ಹೆದ್ದಾರಿ ಮಾಡಿಸಿದ್ದು ನಾನು. ಕೆ.ಆರ್. ಕ್ಷೇತ್ರದ ಕಸದ ಸಮಸ್ಯೆ ನಿವಾರಿಸಿದ್ದು ನಾನು. ಶಾಸಕರು ರಿಯಲ್ ಎಸ್ಟೇಟ್ ಮಾಡಲಿ. ಆದರೆ ಕೃಷ್ಣರಾಜ, ಚಾಮರಾಜ ಕ್ಷೇತ್ರಗಳು ಅವರ ಬಡಾವಣೆಗಳಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಮ್ಮ ಸಾಧನೆಗಳ ದೊಡ್ಡ ಪಟ್ಟಿಯನ್ನೇ ಹರಿಯಬಿಟ್ಟಿದ್ದಾರೆ.

ಯೋಜನೆ ರದ್ದು ಮಾಡುವಂತೆ ಪ್ರಧಾನಿಗೆ ಪತ್ರ ಬರೆಯಲಿ -ನಾಗೇಂದ್ರ-ರಾಮದಾಸ್ ಜೋಡಿ​ಗೆ ಪ್ರತಾಪ್ ಸಿಂಹ ಸಲಹೆ: ದಾರಿ ತಪ್ಪಿಸುವುದು, ಏನೇನೋ ಮಾತನಾಡುವುದು ಬೇಡ. ಪಾಲಿಕೆಯಲ್ಲಿ ಚರ್ಚೆಗೆ ಬಂದಿದ್ದರೆ ಎಲ್ಲ ಮಾಹಿತಿ ನೀಡುತ್ತಿದ್ದೆ ಎಂದಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸುಮ್ಮನೆ ಮಾತಾಡಿದರೆ ಉಗುಳು ಇರುತ್ತದೆ, ವಿಷಯ ಇರಲ್ಲ ಎಂದು ಕಟಕಿಯಾಡಿದ್ದಾರೆ. ಮುಂದುವರಿದು ಮಾತನಾಡಿದ ಅವರು, ಪ್ರಧಾನಿ ಮೋದಿಗಿಂತ ನಾಗೇಂದ್ರ, ರಾಮದಾಸ್ ಅನುಭವಿಗಳು. ಇವರಿಬ್ಬರೂ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯಲಿ. ಯೋಜನೆ ಸರಿಯಿಲ್ಲ, ನಾವು ನಿಮಗಿಂತ ಹಿರಿಯರೆಂದು ಹೇಳಲಿ. ಯೋಜನೆ ರದ್ದು ಮಾಡುವಂತೆ ಪ್ರಧಾನಿಗೆ ಪತ್ರ ಬರೆಯಲಿ ಎಂದು ತಮ್ಮ ವಿರುದ್ಧ ಸಿಡಿದೆದ್ದಿರುವ ನಾಗೇಂದ್ರ ಮತ್ತು ರಾಮದಾಸ್​ಗೆ ಸಂಸದ ಪ್ರತಾಪ್ ಸಿಂಹ ಸಲಹೆ ನೀಡಿದ್ದಾರೆ.

Mysore MP Pratap Simha PressMeet | ಮೈಸೂರಿನಲ್ಲಿ ಸಂಸದ ಪ್ರತಾಪ್​ಸಿಂಹ ಸುದ್ದಿಗೋಷ್ಠಿ

ಇದನ್ನೂ ಓದಿ:

Gas Pipeline: ಮೈಸೂರಲ್ಲಿ ರಾಮದಾಸ್ ವರ್ಸಸ್ ಪ್ರತಾಪ್ ಸಿಂಹ: ಗ್ಯಾಸ್ ಸಂಪರ್ಕ ವಿಚಾರದಲ್ಲಿ ಹಗ್ಗಜಗ್ಗಾಟ

ಹೈಕಮಾಂಡ್ ವಿರುದ್ಧ ಸಿದ್ದರಾಮಯ್ಯ ಭಾರಿ ಅಪ್ ಸೆಟ್: ಕೊನೆಗೆ ಜಮೀರ್ ಅಹ್ಮದ್​ರನ್ನ ತಮ್ಮ ಡೆಪ್ಯುಟಿ ಮಾಡಲು ದುಂಬಾಲು

Published On - 1:30 pm, Sat, 29 January 22

ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
VIDEO: ಲೈನ್ ದಾಟಿ ವಿಕೆಟ್ ಕೈಚೆಲ್ಲಿದ ಜಸ್​ಪ್ರೀತ್ ಬುಮ್ರಾ
VIDEO: ಲೈನ್ ದಾಟಿ ವಿಕೆಟ್ ಕೈಚೆಲ್ಲಿದ ಜಸ್​ಪ್ರೀತ್ ಬುಮ್ರಾ