AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ್ಯುವೆನ್ನುವುದೊಂದು ತೆರೆಯಿಳಿತ, ತೆರೆಯೇರು, ಮತ್ತೆ ತೋರ್ಪುದು ನಾಳೆ; ಡಿವಿಜಿ ಸಾಲು ಹಂಚಿಕೊಂಡು ವಿರೋಧಿಗಳಿಗೆ ಪ್ರತಾಪ್​ ಸಿಂಹ ಟಾಂಗ್

ಡಿವಿಜಿ ಸಾಲು ಹಂಚಿಕೊಂಡು ವಿರೋಧಿಗಳಿಗೆ ಪ್ರತಾಪ್​ ಸಿಂಹ ಟಾಂಗ್ ಕೊಟ್ಟಿದ್ದಾರೆ. ಡಿವಿಜಿ ನನ್ನ ನೆಚ್ಚಿನ ಬರಹಗಾರ ಎಂದು ಪ್ರತಾಪ್ ಸಿಂಹ ಪೋಸ್ಟ್ ಮಾಡಿದ್ದಾರೆ. ಸತ್ತೆನೆಂದೆನಬೇಡ, ಸೋತೆನೆಂದನಬೇಡ, ಬತ್ತಿತೆನ್ನೊಳು ಸತ್ತ್ವದೂಟೆಯೆನಬೇಡ. ಮೃತ್ಯುವೆನ್ನುವುದೊಂದು ತೆರೆಯಿಳಿತ, ತೆರೆಯೇರು, ಮತ್ತೆ ತೋರ್ಪುದು ನಾಳೆ ಸೋಲು ಗೆಲುವು ಸ್ವಾಭಾವಿಕವೇ, ಒಂದು ಸೋಲಾಗಬಹುದು. ಒಂದು ಸಲ ಗೆಲುವಾಗಬಹುದು, ಇಂದು ಬಿದ್ದ ಅಲೆ ನಾಳೆ ಏಳುತ್ತದೆ. ಇಂದು ಬಂದ ಸೋಲು ನಾಳೆ ಗೆಲುವಾಗುತ್ತದೆ ಎಂದು ಪೋಸ್ಟ್​​ ಹಂಚಿಕೊಂಡಿದ್ದಾರೆ.

ಮೃತ್ಯುವೆನ್ನುವುದೊಂದು ತೆರೆಯಿಳಿತ, ತೆರೆಯೇರು, ಮತ್ತೆ ತೋರ್ಪುದು ನಾಳೆ; ಡಿವಿಜಿ ಸಾಲು ಹಂಚಿಕೊಂಡು ವಿರೋಧಿಗಳಿಗೆ ಪ್ರತಾಪ್​ ಸಿಂಹ ಟಾಂಗ್
ಡಿವಿಜಿ ಸಾಲು ಹಂಚಿಕೊಂಡು ವಿರೋಧಿಗಳಿಗೆ ಪ್ರತಾಪ್​ ಸಿಂಹ ಟಾಂಗ್
ದಿಲೀಪ್​, ಚೌಡಹಳ್ಳಿ
| Edited By: ಆಯೇಷಾ ಬಾನು|

Updated on:Mar 16, 2024 | 10:51 AM

Share

ಮೈಸೂರು, ಮಾರ್ಚ್​.16: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರತಾಪ ಸಿಂಹಗೆ (Pratap Simha) ಈ ಬಾರಿಯ ಬಿಜೆಪಿ ಟಿಕೆಟ್ ಕೈತಪ್ಪಿದೆ. ಮೈಸೂರು ರಾಜವಂಶಸ್ಥ ಯದುವೀರ ಒಡೆಯರ್ (Yaduveer Krishnadatta Chamaraja Wadiyar) ಅವರನ್ನು ಬಿಜೆಪಿ ಕಣಕ್ಕೆ ಇಳಿಸಿದೆ. ಎರಡು ಬಾರಿ ಸಂಸದರಾಗಿ 10 ವರ್ಷ ಸೇವೆ ಸಲ್ಲಿಸಿದ್ದ ಪ್ರತಾಪ್ ಸಿಂಹ ಅವರು ಮೂರನೆ ಸಲವೂ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. 10 ವರ್ಷಗಳ ಸಾಧನೆಯ ರಿಪೋರ್ಟ್‌ ಕಾರ್ಡ್‌ ಅನ್ನು ಕ್ಷೇತ್ರದ ಮತದಾರರಿಗೆ ತಲುಪಿಸಿದ್ದರು. ಆದರೆ ಬಿಜೆಪಿ ಹೊಸ ಅಭ್ಯರ್ಥಿಗೆ ಗಾಳ ಹಾಕಿದ್ದು ಯದುವೀರ ಒಡೆಯರ್ ಅವರಿಗೆ ಟಿಕೆಟ್ ನೀಡಿದೆ. ಸದ್ಯ ಡಿವಿಜಿ (D. V. Gundappa) ಸಾಲು ಹಂಚಿಕೊಂಡು ವಿರೋಧಿಗಳಿಗೆ ಪ್ರತಾಪ್​ಸಿಂಹ ಟಾಂಗ್ ಕೊಟ್ಟಿದ್ದಾರೆ.

ಬಿಜೆಪಿ ಟಿಕೆಟ್​ನಿಂದ ವಂಚಿತರಾದ ಪ್ರತಾಪ್ ಸಿಂಹ ಮಂಕಾಗಿದ್ದಾರೆ. ಸದ್ಯ ಪ್ರತಾಪ್ ಸಿಂಹ ಅವರು ಮಂಕು ತಿಮ್ಮನ ಕಗ್ಗ ಒಂದನ್ನು ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಡಿವಿಜಿ ನನ್ನ ನೆಚ್ಚಿನ ಬರಹಗಾರ ಎಂದು ಸಂಸದ ಪ್ರತಾಪ್ ಸಿಂಹ ಪೋಸ್ಟ್ ಮಾಡಿದ್ದಾರೆ.

ಸತ್ತೆನೆಂದೆನಬೇಡ, ಸೋತೆನೆಂದನಬೇಡ, ಬತ್ತಿತೆನ್ನೊಳು ಸತ್ತ್ವದೂಟೆಯೆನಬೇಡ
ಮೃತ್ಯುವೆನ್ನುವುದೊಂದು ತೆರೆಯಿಳಿತ, ತೆರೆಯೇರು, ಮತ್ತೆ ತೋರ್ಪುದು ನಾಳೆ
ಸೋಲು ಗೆಲುವು ಸ್ವಾಭಾವಿಕವೇ, ಒಂದು ಸೋಲಾಗಬಹುದು
ಒಂದು ಸಲ ಗೆಲುವಾಗಬಹುದು, ಇಂದು ಬಿದ್ದ ಅಲೆ ನಾಳೆ ಏಳುತ್ತದೆ
ಇಂದು ಬಂದ ಸೋಲು ನಾಳೆ ಗೆಲುವಾಗುತ್ತದೆ 

ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರತಾಪ್​ ಸಿಂಹ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಎಸಿ ರೂಮ್​ನಿಂದ ಜನರ ಮಧ್ಯೆ ಬರುವುದು ಕಷ್ಟವೇನಲ್ಲ: ಪ್ರತಾಪ್ ಸಿಂಹಗೆ ಯದುವೀರ್ ಟಾಂಗ್

ಪ್ರತಾಪ್ ಸಿಂಹ ಪೋಸ್ಟ್

ಬ್ರಹ್ಮವಸ್ತುವು ಆನಂದಪಡುವುದಕ್ಕೋಸ್ಕರ ಪ್ರಕೃತಿಯ ಮೂಲಕವಾಗಿ ಆಟವನ್ನು ನಡೆಸುತ್ತಿದೆ. ತ್ರಿಗುಣಗಳ ವ್ಯತ್ಯಾಸದಿಂದ ಸೋಲು, ಗೆಲವು ಸ್ವಾಭಾವಿಕವೇ. ಈ ಲೀಲೆ ಸತತವಾಗಿ ಕೊನೆಯಿಲ್ಲದೆ ನಡೆಯುತ್ತಿರುವುದರಿಂದ ಇಲ್ಲಿ ಒಂದು ಸಲ ಸೋಲಾಗಬಹುದು, ಇನ್ನೊಂದು ಸಲ ಗೆಲುವಾಗಬಹುದು. ಆದದ್ದರಿಂದ ಈ ತತ್ತ್ವವನ್ನು ಮನದಟ್ಟು ಮಾಡಿಕೊಂಡು, ನನ್ನ ಜೀವನ ಕೆಟ್ಟಿತು, ನಾನು ಸಾಧಿಸಬೇಕಾದದ್ದನ್ನು ಸಾಧಿಸದೆಯೇ ಸಾಯುತ್ತಿದ್ದೇನೆ, ನಾನು ಸೋತೆ. ನನ್ನ ಒಳಸತ್ಯ ಬತ್ತಿಹೋಗಿದೆ, ನಾನು ಕೆಲಸಕ್ಕೆ ಬಾರದವನಾದೆ ಎಂದು-ನಿರಾಸೆಯ ಮನೋಭಾವವನ್ನು ತಳೆಯುವುದು ತಪ್ಪು ಎನ್ನುತ್ತಾರೆ ತಿಮ್ಮಗುರು.

ಮೃತ್ಯು ಎಂಬುದು ಒಂದು ಅಲೆಯಂತೆ, ಅಲೆ ಮೇಲೇಳುತ್ತದೆ ಮತ್ತೆ ಬೀಳುತ್ತದೆ, ಇನ್ನೊಂದು ಸಲ ಏಳುತ್ತದೆ. ಹೀಗೆ ನಮ್ಮ ಜೀವನ ಒಂದೇ ಜನ್ಮದಲ್ಲಿ ಮುಗಿದುಹೋಗುವುದಿಲ್ಲ. ಇಂದು ಬಿದ್ದ ಅಲೆ ನಾಳೆ ಏಳುತ್ತದೆ. ಇಂದು ಬಂದ ಸೋಲು ನಾಳೆ ಗೆಲುವಾಗುತ್ತದೆ.

ಈ ಹಿಂದೆ 2020ರಲ್ಲಿ ಸಿ.ಟಿ. ರವಿ ಅವರು ಕೂಡ ಇದೇ ಸಾಲುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:04 am, Sat, 16 March 24

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್