AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲು ಸೇರಿದ ತಂದೆ, ಮಗ; ಮನನೊಂದು ತಾಯಿ ಆತ್ಮಹತ್ಯೆ, ಜೈಲಿನಲ್ಲೇ ಪತಿಗೆ ಹೃದಯಾಘಾತ

ಮೈಸೂರಿನ ವಿದ್ಯಾನಗರದಲ್ಲಿ ನಡೆದಿದ್ದ ಬಾಲರಾಜ್‌ ಕೊಲೆ ಪ್ರಕರಣದಲ್ಲಿ ತಂದೆ ಮತ್ತು ಮಗ ಜೈಲು ಸೇರಿದ್ದಾರೆ. ಇತ್ತ ಮನನೊಂದ ತಾಯಿ ಆತ್ಮಹತ್ಯೆಗೆ ಶರಣಾಗಿದ್ದು, ವಿಚಾರ ತಿಳಿದು ಹೃದಯಾಘಾತಕ್ಕೆ ಒಳಗಾದ ಪತಿ ಸಾವನ್ನಪ್ಪಿದ್ದಾರೆ.

ಜೈಲು ಸೇರಿದ ತಂದೆ, ಮಗ; ಮನನೊಂದು ತಾಯಿ ಆತ್ಮಹತ್ಯೆ, ಜೈಲಿನಲ್ಲೇ ಪತಿಗೆ ಹೃದಯಾಘಾತ
ಮೃತ ದಂಪತಿ ಸಾಮ್ರಾಟ್ ಮತ್ತು ಇಂದ್ರಾಣಿ ಹಾಗೂ ಇವರ ಮಗ ತೇಜಸ್
ರಾಮ್​, ಮೈಸೂರು
| Edited By: Rakesh Nayak Manchi|

Updated on: Aug 22, 2023 | 10:36 AM

Share

ಮೈಸೂರು, ಆಗಸ್ಟ್ 22: ಕೊಲೆ ಪ್ರಕರಣದಲ್ಲಿ ತಂದೆ ಮತ್ತು ಮಗ ಜೈಲು ಸೇರಿದರೆ, ಇತ್ತ ಮನನೊಂದ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು (Mysuru) ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ತೇಜಸ್ ತಾಯಿ ಇಂದ್ರಾಣಿ (35) ನೇಣಿಗೆ ಶರಣಾದವರು. ಈ ವಿಚಾರ ತಿಳಿದು ಜೈಲಿನಲ್ಲೇ ಇಂದ್ರಾಣಿ ಪತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮೈಸೂರಿನ ವಿದ್ಯಾನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಬಾಲರಾಜ್‌ ಜೊತೆ ಸ್ನೇಹಿತ ತೇಜಸ್, ಈತನ ತಂದೆ, ಮತ್ತಿಬ್ಬರು ಸೇರಿ ಜಗಳ ಮಾಡಿಕೊಂಡು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಆರೋಪಿಗಳಾದ ತೇಜಸ್, ಈತನ ತಂದೆ ಸಾಮ್ರಾಟ್, ಕಿರಣ್ ಸಂಜಯ್ ಎಂಬವರನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು.

ಇದನ್ನೂ ಓದಿ: ಮೈಸೂರು: ಹೂವಿನ ಗಿಡಗಳ ಜೊತೆ ಗಾಂಜಾ ಗಿಡ ಬೆಳೆದ ಆರೋಪಿ ಅರೆಸ್ಟ್​

ತನ್ನ ಪತಿ ಮತ್ತು ಮಗ ಈ ರೀತಿ ಕೃತ್ಯ ಎಸಗಿ ಜೈಲು ಸೇರಿದರಲ್ಲಾ ಎಂದು ಆಘಾತಕ್ಕೆ ಒಳಗಾದ ಇಂದ್ರಾಣಿ, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿನ ಸುದ್ದಿ ತಿಳಿದು ಆರೋಪಿಯೂ ಆಗಿರುವ ಇಂದ್ರಾಣಿ ಪತಿ ಸಾಮ್ರಾಟ್​ಗೆ ಜೈಲಿನಲ್ಲೇ ಹೃದಯಾಘಾತವಾಗಿದೆ. ಪ್ರಕರಣ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ