AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲು ಸೇರಿದ ತಂದೆ, ಮಗ; ಮನನೊಂದು ತಾಯಿ ಆತ್ಮಹತ್ಯೆ, ಜೈಲಿನಲ್ಲೇ ಪತಿಗೆ ಹೃದಯಾಘಾತ

ಮೈಸೂರಿನ ವಿದ್ಯಾನಗರದಲ್ಲಿ ನಡೆದಿದ್ದ ಬಾಲರಾಜ್‌ ಕೊಲೆ ಪ್ರಕರಣದಲ್ಲಿ ತಂದೆ ಮತ್ತು ಮಗ ಜೈಲು ಸೇರಿದ್ದಾರೆ. ಇತ್ತ ಮನನೊಂದ ತಾಯಿ ಆತ್ಮಹತ್ಯೆಗೆ ಶರಣಾಗಿದ್ದು, ವಿಚಾರ ತಿಳಿದು ಹೃದಯಾಘಾತಕ್ಕೆ ಒಳಗಾದ ಪತಿ ಸಾವನ್ನಪ್ಪಿದ್ದಾರೆ.

ಜೈಲು ಸೇರಿದ ತಂದೆ, ಮಗ; ಮನನೊಂದು ತಾಯಿ ಆತ್ಮಹತ್ಯೆ, ಜೈಲಿನಲ್ಲೇ ಪತಿಗೆ ಹೃದಯಾಘಾತ
ಮೃತ ದಂಪತಿ ಸಾಮ್ರಾಟ್ ಮತ್ತು ಇಂದ್ರಾಣಿ ಹಾಗೂ ಇವರ ಮಗ ತೇಜಸ್
ರಾಮ್​, ಮೈಸೂರು
| Edited By: |

Updated on: Aug 22, 2023 | 10:36 AM

Share

ಮೈಸೂರು, ಆಗಸ್ಟ್ 22: ಕೊಲೆ ಪ್ರಕರಣದಲ್ಲಿ ತಂದೆ ಮತ್ತು ಮಗ ಜೈಲು ಸೇರಿದರೆ, ಇತ್ತ ಮನನೊಂದ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು (Mysuru) ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ತೇಜಸ್ ತಾಯಿ ಇಂದ್ರಾಣಿ (35) ನೇಣಿಗೆ ಶರಣಾದವರು. ಈ ವಿಚಾರ ತಿಳಿದು ಜೈಲಿನಲ್ಲೇ ಇಂದ್ರಾಣಿ ಪತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮೈಸೂರಿನ ವಿದ್ಯಾನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಬಾಲರಾಜ್‌ ಜೊತೆ ಸ್ನೇಹಿತ ತೇಜಸ್, ಈತನ ತಂದೆ, ಮತ್ತಿಬ್ಬರು ಸೇರಿ ಜಗಳ ಮಾಡಿಕೊಂಡು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಆರೋಪಿಗಳಾದ ತೇಜಸ್, ಈತನ ತಂದೆ ಸಾಮ್ರಾಟ್, ಕಿರಣ್ ಸಂಜಯ್ ಎಂಬವರನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು.

ಇದನ್ನೂ ಓದಿ: ಮೈಸೂರು: ಹೂವಿನ ಗಿಡಗಳ ಜೊತೆ ಗಾಂಜಾ ಗಿಡ ಬೆಳೆದ ಆರೋಪಿ ಅರೆಸ್ಟ್​

ತನ್ನ ಪತಿ ಮತ್ತು ಮಗ ಈ ರೀತಿ ಕೃತ್ಯ ಎಸಗಿ ಜೈಲು ಸೇರಿದರಲ್ಲಾ ಎಂದು ಆಘಾತಕ್ಕೆ ಒಳಗಾದ ಇಂದ್ರಾಣಿ, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿನ ಸುದ್ದಿ ತಿಳಿದು ಆರೋಪಿಯೂ ಆಗಿರುವ ಇಂದ್ರಾಣಿ ಪತಿ ಸಾಮ್ರಾಟ್​ಗೆ ಜೈಲಿನಲ್ಲೇ ಹೃದಯಾಘಾತವಾಗಿದೆ. ಪ್ರಕರಣ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ