AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜನಗೂಡು ದೇಗುಲ ತೆರವು ವಿಚಾರ: ದೇವಾಲಯ ಮರುನಿರ್ಮಾಣಕ್ಕೆ ಗ್ರಾಮಸ್ಥರ ತಯಾರಿ

Mysuru: ಸುಪ್ರೀಂಕೋರ್ಟ್ ಆದೇಶ ಪಾಲನೆ ಅನಿವಾರ್ಯ ಆಗಿದೆ. ದೇವಸ್ಥಾನ ತೆರವು ವಿಚಾರವನ್ನು ನನ್ನ ಗಮನಕ್ಕೆ ತಂದು ತೆರವುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ನಂಜನಗೂಡು ದೇಗುಲ ತೆರವು ವಿಚಾರ: ದೇವಾಲಯ ಮರುನಿರ್ಮಾಣಕ್ಕೆ ಗ್ರಾಮಸ್ಥರ ತಯಾರಿ
ನಂಜನಗೂಡು ಹುಚ್ಚಗಣಿ ಮಹದೇವಮ್ಮ ದೇವಸ್ಥಾನ ತೆರವುಗೊಳಿಸಿದ್ದ ತಹಶೀಲ್ದಾರ್​ ತಲೆದಂಡ
TV9 Web
| Edited By: |

Updated on: Sep 12, 2021 | 4:05 PM

Share

ಮೈಸೂರು: ದೇಗುಲ ತೆರವುಗೊಳಿಸಿದ ದೇಗುಲದ ಜಾಗದ ಪಕ್ಕದಲ್ಲೇ ಹುಚ್ಚಗನಿಯಲ್ಲಿ ಮಹದೇವಮ್ಮ ದೇಗುಲ ಮರುನಿರ್ಮಾಣಕ್ಕೆ ಜನರು ಯೋಜನೆ ಹಾಕಿಕೊಂಡಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಚ್ಚಗನಿಯಲ್ಲಿ ದೇಗುಲ ತೆರವುಗೊಳಿಸಲಾಗಿತ್ತು. ಈ ಬಗ್ಗೆ, ಸಿದ್ದರಾಮಯ್ಯ ಟ್ವೀಟ್ ಮಾಡಿ ವಿರೋಧ ವ್ಯಕ್ತಪಡಿಸಿದ್ದರು. ಜನರು ಕೂಡ ಅಸಮಾಧಾನ ಹೊರಹಾಕಿದ್ದರು. ದೇಗುಲ ತೆರವುಗೊಳಿಸಿದ್ದ ಜಿಲ್ಲಾಡಳಿತದ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿದೆ. ಗ್ರಾಮಸ್ಥರು, ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಗುಲ ಮರುನಿರ್ಮಾಣಕ್ಕೆ ಗ್ರಾಮಸ್ಥ ಜಾಗ ನೀಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಕಳಸ ಪ್ರತಿಷ್ಠಾಪಿಸಿ ಹೋಮ, ಪೂಜೆ ಮಾಡಿದ್ದಾರೆ.

ನಂಜನಗೂಡಿನ ದೇವಸ್ಥಾನ ತೆರವು ಮಾಡಿದ ವಿಚಾರವಾಗಿ ನಂಜನಗೂಡು ಬಿಜೆಪಿ ಶಾಸಕ ಹರ್ಷವರ್ಧನ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರ್ಮಿಕ ಕಟ್ಟಡ ವಿಚಾರವಾಗಿ ಸಿಎಸ್ ಒತ್ತಡ ಹೇರುತ್ತಿದ್ದಾರೆ. ಮುಖ್ಯ ಕಾರ್ಯದರ್ಶಿಗಳು ನ್ಯಾಯಾಲಯದ ಆದೇಶವನ್ನು ತಪ್ಪಾಗಿ ಅರ್ಥೈಸಿ ಹೇಳಿರಬಹುದು. ಸುಪ್ರೀಂಕೋರ್ಟ್ ಆದೇಶ ಪಾಲನೆ ಅನಿವಾರ್ಯ ಆಗಿದೆ. ದೇವಸ್ಥಾನ ತೆರವು ವಿಚಾರವನ್ನು ನನ್ನ ಗಮನಕ್ಕೆ ತಂದು ತೆರವುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಈ ಮಧ್ಯೆ, ಸಿದ್ದರಾಮಯ್ಯ ಟ್ವೀಟ್ ನನಗೆ ಬೇಸರ ತರಿಸಿದೆ. ಬಹುಶಃ ಇಂತಹ ಬೇಜವಾಬ್ದಾರಿ ಹೇಳಿಕೆ ಅವರದ್ದಾಗಿರುವುದಿಲ್ಲ. ಅವರ ಹೆಸರಲ್ಲಿ ಬೇರೆ ಯಾರೋ ಟ್ವೀಟ್ ಮಾಡಿರಬಹುದು. ಸಿಎಂ ಆಗಿದ್ದವರು ಅವರಿಗೆ ನ್ಯಾಯಾಲಯದ ಆದೇಶದ ಅರಿವಿದೆ. ಇಲ್ಲಿ ಕೇವಲ ನಂಜನಗೂಡು ದೇವಸ್ಥಾನ ತೆರವು ವಿಚಾರ ಮಾತ್ರ ಹೈಲೈಟ್ ಮಾಡಲಾಗುತ್ತಿದೆ. ಇದರಿಂದ ನನಗೆ ತುಂಬಾ ನೋವಾಗಿದೆ ಎಂದು ತಿಳಿಸಿದ್ದಾರೆ. ಪ್ರತಾಪ್ ಸಿಂಹ ಕೂಡ ಈ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ.

ಹಿಂದೂ ದೇಗುಲಗಳ ರಕ್ಷಣೆಗೆ ಪ್ರತ್ಯೇಕ ಕಾಯ್ದೆಯ ಅವಶ್ಯಕತೆ ಇದೆ. ಬೇರೆ ಧರ್ಮಗಳಲ್ಲಿ ಪ್ರತ್ಯೇಕ ಕಾಯ್ದೆ ಇದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಬೇಕಿದೆ. ಈ ಮೂಲಕ ದೇಗುಲಗಳ ರಕ್ಷಣೆ ಸಾಧ್ಯ ಆಗಲಿದೆ. ಈ ಬಗ್ಗೆ ಶಾಸಕರ ಸಭೆಯಲ್ಲಿ ನಾನು ಸಿಎಂ ಗಮನಕ್ಕೆ ತರುತ್ತೇನೆ. ನಾನು ಸಾಕಷ್ಟು ದೇಗುಲಗಳನ್ನು ಉಳಿಸಿದ್ದೇನೆ ಎಂದು ಶಾಸಕ ಹರ್ಷವರ್ಧನ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಅನಧಿಕೃತ ಧಾರ್ಮಿಕ ಕೇಂದ್ರ ತೆರವು ವಿಚಾರ: ಎಷ್ಟು ದರ್ಗಾ, ಮಸೀದಿ ತೆರವು ಮಾಡಿದ್ದೀರಿ?- ಸಂಸದ ಪ್ರತಾಪ್ ಸಿಂಹ ಗರಂ

ಇದನ್ನೂ ಓದಿ: Mysuru Dasara 2021: ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು ವೀರನಹೊಸಹಳ್ಳಿಯಿಂದ ನಾಳೆ ಗಜಪಯಣ ಆರಂಭ

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ