AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಭಾಗದಲ್ಲಿ ಒಂದೇ ದಿನ ಎರಡು ಆನೆಗಳ ಸಾವು

ನಿನ್ನೆ ಬಂದೇ ದಿನ ಪ್ರತ್ಯೇಕ ಘಟನೆಗಳಲ್ಲಿ 2 ಆನೆಗಳು ಮೃತಪಟ್ಟಿವೆ. ನಂಜನಗೂಡು ತಾಲೂಕಿನ ಮಲ್ಲಹಳ್ಳಿ ಗ್ರಾಮದ ಬಳಿ ಕಂದಕಕ್ಕೆ ಉರುಳಿಬಿದ್ದು ಕಾಡಾನೆ ಮೃತಪಟ್ಟಿದ್ದು ಮತ್ತೊಂದೆಡೆ ಹಾಸನ ಜಿಲ್ಲೆಯ ಹೆತ್ತೂರು ಹೋಬಳಿಯ ವನಗೂರು ಗ್ರಾಮ ಪಂಚಾಯಿತಿಯ ಕಡ್ರಳ್ಳಿಯಲ್ಲಿ ಅನಾರೋಗ್ಯದಿಂದ 22 ವರ್ಷದ ಹೆಣ್ಣಾನೆ ಸಾವನ್ನಪ್ಪಿದೆ.

ಮೈಸೂರು ಭಾಗದಲ್ಲಿ ಒಂದೇ ದಿನ ಎರಡು ಆನೆಗಳ ಸಾವು
ಮೃತ ಆನೆ
TV9 Web
| Edited By: ಆಯೇಷಾ ಬಾನು|

Updated on: Oct 04, 2024 | 11:09 AM

Share

ಮೈಸೂರು, ಅ.04: ಮೈಸೂರು ಜಿಲ್ಲೆಯ ಭಾಗದಲ್ಲಿ ನಿನ್ನೆ ಬಂದೇ ದಿನ ಎರಡು ಪ್ರತ್ಯೇಕ ಘಟನೆಗಳಲ್ಲಿ ಎರಡು ಆನೆಗಳು ಮೃತಪಟ್ಟಿವೆ (Elephant Death) ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮೈಸೂರು ಭಾಗದ ಗುಂಡ್ಲುಪೇಟೆ ಮತ್ತು ಹೆತ್ತೂರಿನಲ್ಲಿ ಗುರುವಾರ ಎರಡು ಆನೆಗಳು ಮೃತಪಟ್ಟಿವೆ. ನಂಜನಗೂಡು ತಾಲೂಕಿನ ಮಲ್ಲಹಳ್ಳಿ ಗ್ರಾಮದ ಬಳಿ ಕಂದಕಕ್ಕೆ ಉರುಳಿಬಿದ್ದು ಕಾಡಾನೆ ಮೃತಪಟ್ಟಿದ್ದು ಮತ್ತೊಂದೆಡೆ ಹಾಸನ ಜಿಲ್ಲೆಯ ಹೆತ್ತೂರು ಹೋಬಳಿಯ ವನಗೂರು ಗ್ರಾಮ ಪಂಚಾಯಿತಿಯ ಕಡ್ರಳ್ಳಿಯಲ್ಲಿ ಅನಾರೋಗ್ಯದಿಂದ 22 ವರ್ಷದ ಹೆಣ್ಣಾನೆ ಸಾವನ್ನಪ್ಪಿದೆ.

ಮೈಸೂರು ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವನ್ಯಜೀವಿ ವಲಯ ವ್ಯಾಪ್ತಿಯ ಮಲ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ 45 ವರ್ಷ ವಯಸ್ಸಿನ ಗಂಡಾನೆ ಕಂದಕಕ್ಕೆ ಬಿದ್ದು ಮೃತಪಟ್ಟಿದೆ. ಈ ಭಾಗದಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ಗ್ರಾಮಸ್ಥರು ಕಂದಕ ನಿರ್ಮಿಸಿದ್ದರು. ಆಹಾರ ಅರಸಿ ಗ್ರಾಮದ ಕಡೆ ಬರುವಾಗ ಕಾಡಾನೆ ಕಂದಕಕ್ಕೆ ಬಿದ್ದಿದೆ. ಕಂದಕದಲ್ಲಿ ಸಾವು-ಬದುಕಿನ ನಡುವೆ ನರಳಾಡುತ್ತಿದ್ದ ಕಾಡಾನೆಯನ್ನು ಕಂಡ ಜನ ಕೂಡಲೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಆದರೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಕಾಡಾನೆ ಕೊನೆಯುಸಿರೆಳೆದಿದೆ. ಸದ್ಯ ಜೆಸಿಬಿ ಮೂಲಕ ಮೃತ ಕಾಡಾನೆಯನ್ನು ಅರಣ್ಯ ಸಿಬ್ಬಂದಿ ಹೊರತೆಗೆದಿದ್ದಾರೆ.

ಆನೆಯ ಒಂದು ಕಣ್ಣು ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡಿತ್ತು. ಮತ್ತೊಂದು ಕಣ್ಣಿಗೂ ಪೊರೆ ಬಂದಿತ್ತು. ಕರಳಿನ ಕಾಯಿಲೆಯಿಂದಲೂ ಬಳಲುತ್ತಿತ್ತು. ಆನೆ ಹೃದಯಾಘಾತದಿಂದ ಅಸುನೀಗಿದೆ ಎಂದು ವಲಯ ಅರಣ್ಯಾಧಿಕಾರಿ ಸತೀಶ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ ದಸರಾಕ್ಕೆ ಸಕ್ರೆಬೈಲಿನ ಮೂರು ಆನೆಗಳಿಗೆ ವಿಶೇಷ ಆಹ್ವಾನ: ಅಂಬಾರಿ ಹೊರಲು ಸಾಗರಗೆ ತಾಲೀಮು

ಇನ್ನು ಮತ್ತೊಂದೆಡೆ ಹಾಸನ ಜಿಲ್ಲೆಯ ಹೆತ್ತೂರು ಹೋಬಳಿಯ ವನಗೂರು ಗ್ರಾಮ ಪಂಚಾಯಿತಿಯ ಕಡ್ರಳ್ಳಿಯಲ್ಲಿ ಅನಾರೋಗ್ಯದಿಂದ 22 ವರ್ಷದ ಹೆಣ್ಣಾನೆ ಮೃತಪಟ್ಟಿದೆ.  ಮೃತ ಆನೆ ಕಾಡಾನೆ ಹಿಂಡಿದ್ದ ಬೇರ್ಪಟ್ಟಿತ್ತು. ಮೂರು ತಿಂಗಳಿನಿಂದ ಆನೆಗುಂಡಿ ಪಟ್ಲ, ಬೆಟ್ಟದ ಮನೆ, ವನಗೂರು, ಕಡ್ರಳ್ಳಿ ಸುತ್ತಮುತ್ತ ಓಡಾಡಿಕೊಂಡಿದ್ದ ಕಾಡಾನೆಗಳ ಗುಂಪಿನಿಂದ ಬೇರ್ಪಟ್ಟು ಆಹಾರವಿಲ್ಲದೆ ಪರದಾಡಿತ್ತು ಎಂದು ತಿಳಿದುಬಂದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ