AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ವಿಭಾಗದ ರೈಲ್ವೆ ನಿಲ್ದಾಣಗಳ ಉನ್ನತೀಕರಣಕ್ಕೆ 347ಕೋಟಿ ರೂ ಮಂಜೂರು, ಆ. 6ರಂದು ಮೋದಿ ಚಾಲನೆ

ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್‌ 6ರಂದು ದೇಶದಾದ್ಯಂತ 508 ರೈಲ್ವೆ ನಿಲ್ದಾಣಗಳಿಗೆ ವಿಡಿಯೋ ಕಾನ್ಫೆರನ್ಸ್ ಮೂಲಕ ಶಿಲಾನ್ಯಾಸ ಮಾಡಲಿದ್ದಾರೆ. ಈ ಪೈಕಿ ಮೈಸೂರು ರೈಲ್ವೆ ವಿಭಾಗದಿಂದ 15 ರೈಲು ನಿಲ್ದಾಣಗಳ ಉನ್ನತೀಕರಣ ಮಾಡಲಾಗುತ್ತಿದೆ.

ಮೈಸೂರು ವಿಭಾಗದ ರೈಲ್ವೆ ನಿಲ್ದಾಣಗಳ ಉನ್ನತೀಕರಣಕ್ಕೆ 347ಕೋಟಿ ರೂ ಮಂಜೂರು, ಆ. 6ರಂದು ಮೋದಿ ಚಾಲನೆ
ನರೇಂದ್ರ ಮೋದಿ
ದಿಲೀಪ್​, ಚೌಡಹಳ್ಳಿ
| Edited By: ಆಯೇಷಾ ಬಾನು|

Updated on: Aug 04, 2023 | 2:29 PM

Share

ಮೈಸೂರು, ಆ. 04: ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ(Amrit Bharat Station Scheme) ಮೈಸೂರು ರೈಲ್ವೆ ವಿಭಾಗದಿಂದ 15 ರೈಲು ನಿಲ್ದಾಣಗಳ ಉನ್ನತೀಕರಣ ಮಾಡಲಾಗುತ್ತಿದೆ. ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಕರ್ನಾಟಕದ 8 ಪ್ರಮುಖ ರೈಲು ನಿಲ್ದಾಣಗಳನ್ನು ಹತ್ತಾರು ಕೋಟಿ ರೂಪಾಯಿ ವೆಚ್ಚದಲ್ಲಿ ಪುನರಾಭಿವೃದ್ಧಿ ಮಾಡಲು ಕೇಂದ್ರ ಸರ್ಕಾರ ಮುಂದಾಗಿದ್ದು ಮೊದಲ ಹಂತದ ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಆಗಸ್ಟ್‌ 6ರಂದು ದೇಶದಾದ್ಯಂತ 508 ರೈಲ್ವೆ ನಿಲ್ದಾಣಗಳಿಗೆ ವಿಡಿಯೋ ಕಾನ್ಫೆರನ್ಸ್ ಮೂಲಕ ಶಿಲಾನ್ಯಾಸ ಮಾಡಲಿದ್ದಾರೆ. ಈ ಪೈಕಿ ಮೈಸೂರು ರೈಲ್ವೆ ವಿಭಾಗದಿಂದ 15 ರೈಲು ನಿಲ್ದಾಣಗಳ ಉನ್ನತೀಕರಣ ಮಾಡಲಾಗುತ್ತಿದೆ.

ಮೂಲಸೌಕರ್ಯ, ನಿಲ್ದಾಣ ನವೀಕರಿಸಿ ಮೇಲ್ದರ್ಜೆಗೆರಿಸಲು ಭಾರತೀಯ ರೈಲ್ವೆ ಇಲಾಖೆ ಮುಂದಾಗಿದೆ. ಈ ವರ್ಷದ ಬಜೆಟ್ ನಲ್ಲಿ ರಾಜ್ಯಕ್ಕೆ 7,561ಕೋಟಿ ಬಿಡುಗಡೆ ಮಾಡಲಾಗಿದೆ. ಮೈಸೂರು ವಿಭಾಗದ ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ 347 ಕೋಟಿ ರೂ ಮಂಜೂರಾಗಿದೆ. ಮೈಸೂರು ರೈಲ್ವೆ ವಿಭಾಗದ 15 ರೈಲ್ವೆ ನಿಲ್ದಾಣಗಳನ್ನ ಅಭಿವೃದ್ಧಿ ಪಡಿಸಲಾಗುತ್ತಿದ್ದು ಆಗಸ್ಟ್ 6ರಂದು ಪ್ರಧಾನಿ ಮೋದಿ ಅವರು ಚಾಲನೆ ನೀಡಲಿದ್ದಾರೆ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮೈಸೂರು ವಿಭಾಗದ ರೈಲ್ವೆ ವ್ಯವಸ್ಥಾಪಕಿ ಶಿಲ್ಪಿ ಅಗರ್ ವಾಲ್ ಮಾಹಿತಿ ನೀಡಿದರು.

ಇದನ್ನೂ ಓದಿ: ತೆಲಂಗಾಣ: 21 ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಕಾಮಗಾರಿಗೆ ಆಗಸ್ಟ್ 6ರಂದು ಪ್ರಧಾನಿ ಮೋದಿ ಶಂಕುಸ್ಥಾಪನೆ

ಯಾವ ಯಾವ ನಿಲ್ದಾಣಗಳನ್ನು ಎಷ್ಟು ಕೋಟಿ ರೂ.ಗಳಲ್ಲಿ ಅಭಿವೃದ್ಧಿ ಮಾಡಬೇಕು ಎಂದು ನೈಋತ್ಯ ರೈಲ್ವೆ ಇಲಾಖೆ ಈಗಾಗಲೇ ಮಾಹಿತಿ ನೀಡಿದೆ. ಹುಬ್ಬಳ್ಳಿ ವಿಭಾಗದಲ್ಲಿ ಅಳ್ಳಾವರ ನಿಲ್ದಾಣ 17.2 ಕೋಟಿ, ಘಟಪ್ರಭಾ ನಿಲ್ದಾಣ 18.02 ಕೋಟಿ, ಗೋಕಾಕ್ ರೋಡ್ 17 ಕೋಟಿ, ಗದಗ 23.2 ಕೋಟಿ, ಕೊಪ್ಪಳ 21.1 ಕೋಟಿ ಮತ್ತು ಬಳ್ಳಾರಿ ನಿಲ್ದಾಣವನ್ನು 16.7 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುತ್ತದೆ. ಹಾಗೂ ಮೈಸೂರು ವಿಭಾಗದಲ್ಲಿ ಅರಸೀಕೆರೆ ನಿಲ್ದಾಣವನ್ನು 34.1 ಕೋಟಿ ಮತ್ತು ಹರಿಹರ ರೈಲು ನಿಲ್ದಾಣ 25.2 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗಲಿದೆ.

ಮೈಸೂರಿಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ