AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಲ್ ಕಾನ್‌ಕಾರ್ಡ್ ಶಾಲೆ ಮಾರಾಮಾರಿ ವಿವಾದ: ಶಾಲೆ ಪ್ರಿನ್ಸಿಪಾಲ್, ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲು

16 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ ಎಂಬ ವಿಚಾರಕ್ಕೆ ರಾಯಲ್ ಕಾನ್‌ಕಾರ್ಡ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಪೋಷಕರು ಮತ್ತು ಶಿಕ್ಷಕರ ನಡುವೆ ಮಾರಾಮಾರಿಯಾಗಿತ್ತು. ಸದ್ಯ ಶಾಲೆ ವಿರುದ್ಧ ಕೇಸ್ ದಾಖಲಾಗಿದೆ.

ರಾಯಲ್ ಕಾನ್‌ಕಾರ್ಡ್ ಶಾಲೆ ಮಾರಾಮಾರಿ ವಿವಾದ: ಶಾಲೆ ಪ್ರಿನ್ಸಿಪಾಲ್, ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲು
ರಾಯಲ್ ಕಾನ್‌ಕಾರ್ಡ್ ಶಾಲೆ
TV9 Web
| Edited By: ಆಯೇಷಾ ಬಾನು|

Updated on: Mar 11, 2023 | 7:51 AM

Share

ಮೈಸೂರು: ರಾಯಲ್ ಕಾನ್‌ಕಾರ್ಡ್ ಇಂಟರ್‌ನ್ಯಾಷನಲ್ ಶಾಲೆ ವಿವಾದಕ್ಕೆ ಸಂಬಂಧಿಸಿ ಶಾಲಾ ಆಡಳಿತ ಮಂಡಳಿ ವಿರುದ್ದ ಜೆಜೆ ಆ್ಯಕ್ಟ್ (Juvenile Justice) ಅಡಿ ಪ್ರಕರಣ ದಾಖಲಾಗಿದೆ. ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಿನ್ಸಿಪಾಲ್ ಖುಷಿ, ಮ್ಯಾನೇಜರ್ ಹರೀಶ್, ಶಾಲಾ ನಿರ್ದೇಶಕ ರಾಕೇಶ್ ರಾಜೇ ಅರಸ್ ವಿರುದ್ದ ಪ್ರಕರಣ ದಾಖಲಾಗಿದೆ. ಶಾಲೆಯಲ್ಲಿ ಮಾರ್ಚ್ 6ರಂದು ನಡೆದ ಗಲಾಟೆಗೆ ಸಂಬಂಧಿಸಿ ಚೆಲುವೇಗೌಡ, ಸಿದ್ದೇಗೌಡ ಹಾಗೂ ಮೂವರು ವಿದ್ಯಾರ್ಥಿಗಳು ದೂರು ನೀಡಿದ್ದರು.

ಹಿನ್ನೆಲೆ

ಮೈಸೂರಿನ ಬೋಗಾದಿ ಎರಡನೇ ಹಂತದಲ್ಲಿರುವ ರಾಯಲ್ ಕಾನ್ ಕಾರ್ಡ್ ಅಂತರಾಷ್ಟ್ರೀಯ ಶಾಲೆಯಲ್ಲಿ ಮಾರ್ಚ್ 6ರಂದು ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿಯ ನಡುವೆ ಗಲಾಟೆಯಾಗಿತ್ತು. ಶಾಲೆಯ ಆಡಳಿತ ಮಂಡಳಿ ಶಾಲೆಯ 16 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ. ಈ ವಿಚಾರ ತಿಳಿದು ಪೋಷಕರು ಶಾಲೆಯ ಆಡಳಿತ ಮಂಡಳಿ ಜೊತೆ ಜಗಳವಾಡಿದ್ದರು. ಈ ವೇಳೆ ಶಾಲೆಯ ಮ್ಯಾನೇಜರ್ ಹರೀಶ್ ಅವರಿಗೆ ಹಿಗ್ಗಾಮುಗ್ಗ ಥಳಿಸಲಾಗಿತ್ತು. ಮತ್ತೊಂದು ಕಡೆ ಮಕ್ಕಳಿಗೆ ಪರೀಕ್ಷೆ ಕೊಡದೆ ಇರುವುದನ್ನು ಪೋಷಕ ಸಿದ್ದೇಗೌಡ ಪ್ರಶ್ನಿಸಿದ್ದರು. ಇದಕ್ಕೆ ಕೆಂಡಾಮಂಡಲರಾದ ಶಾಲೆಯ ಪ್ರಾಂಶುಪಾಲರಾದ ಖುಷಿ ಸಿದ್ದೇಗೌಡ ಕೊರಳಪಟ್ಟಿ ಹಿಡಿದು ಎಳೆದಾಡಿದ್ದರು.

ಇದನ್ನೂ ಓದಿ: ಶುಲ್ಕ ಕಟ್ಟಿಲ್ಲವೆಂದು ಪರೀಕ್ಷೆಗೆ ಕೂರಿಸಿಲ್ಲ; ರಾಯಲ್ ಕಾನ್ ಕಾರ್ಡ್ ಶಾಲೆಯಲ್ಲಿ ಪೋಷಕರು-ಶಿಕ್ಷಕರ ಮಾರಾಮಾರಿ 

ಅಷ್ಟರಲ್ಲಿ ಸ್ಥಳಕ್ಕೆ ಆಗಮಿಸಿದ ಸರಸ್ವತಿ ಪುರಂ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದರು. ಶಾಲಾ ಆಡಳಿತ ಮಂಡಳಿ ಹಾಗೂ 16 ವಿದ್ಯಾರ್ಥಿಗಳ ಪೋಷಕರ ನಡುವೆ ಶಾಲಾ ಶುಲ್ಕದ ವಿಚಾರವಾಗಿ ಗೊಂದಲ ಉಂಟಾಗಿದೆ. ಶಾಲಾ ಆಡಳಿಯ ಪ್ರಕಾರ 1 ಲಕ್ಷದ 10 ಸಾವಿರ ಕಟ್ಟಬೇಕು. ಆದರೆ ಪೋಷಕರ ಪ್ರಕಾರ 82 ಸಾವಿರ ಫೀಸು ಕಟ್ಟಬೇಕು. ಇದೇ ವಿಚಾರ ಹೈ ಕೋರ್ಟ್ ಮೆಟ್ಟಿಲೇರಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು