AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಅರುಣ್ ಯೋಗಿರಾಜ್ ಕುಟುಂಬಸ್ಥರನ್ನು ಸನ್ಮಾನಿಸಿದ ಕಾಂಗ್ರೆಸ್ ಮುಖಂಡರು

ಮೈಸೂರಿನ ಪಾಠಶಾಲಾ ಬಳಿ ಇರುವ ಅರುಣ್ ಯೋಗಿರಾಜ್ ನಿವಾಸಕ್ಕೆ ಕಾಂಗ್ರೆಸ್ ಶಾಸಕ ಹರೀಶ್ ಗೌಡ, ಮಾಜಿ ಶಾಸಕ ಎಂಕೆ ಸೋಮಶೇಖರ್ ತೆರಳಿ ಸನ್ಮಾನಿಸಿದ್ದಾರೆ. ಈ ವೇಳೆ ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಡಾ. ಸುಶೃತ್ ಗೌಡ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಮೈಸೂರು: ಅರುಣ್ ಯೋಗಿರಾಜ್ ಕುಟುಂಬಸ್ಥರನ್ನು ಸನ್ಮಾನಿಸಿದ ಕಾಂಗ್ರೆಸ್ ಮುಖಂಡರು
ಅರುಣ್ ಯೋಗಿರಾಜ್ ಕುಟುಂಬಸ್ಥರನ್ನು ಸನ್ಮಾನಿಸಿದ ಕಾಂಗ್ರೆಸ್ ಮುಖಂಡರು
ದಿಲೀಪ್​, ಚೌಡಹಳ್ಳಿ
| Updated By: Ganapathi Sharma|

Updated on: Jan 02, 2024 | 12:22 PM

Share

ಮೈಸೂರು, ಜನವರಿ 2: ಅಯೋಧ್ಯೆಯ ರಾಮ ಮಂದಿರದಲ್ಲಿ (Ayodhya Ram Mandir) ಪ್ರತಿಷ್ಠಾಪನೆಗೆ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್​​ (Arun Yogiraj) ನಿರ್ಮಿಸಿರುವ ವಿಗ್ರಹ ಆಯ್ಕೆಯಾಗಿರುವ ಬೆನ್ನಲ್ಲೇ ಅವರ ಮನೆಯವರನ್ನು ಕಾಂಗ್ರೆಸ್ ಮುಖಂಡರು ಸನ್ಮಾನಿಸಿದ್ದಾರೆ. ಅರುಣ್ ಯೋಗಿರಾಜ್ ನಿರ್ಮಿಸಿರುವ ವಿಗ್ರಹ ಆಯ್ಕೆಯಾಗಿರುವುದರಿಂದ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರುಣ್ ರಾಷ್ಟ್ರದ ಗಮನ ಸೆಳೆದಿರುವುದು ಅವರ ಕುಟುಂಬದವರು, ಸ್ಥಳೀಯರನ್ನು ಹರ್ಷಚಿತ್ತರಾನ್ನಾಗಿಸಿದೆ.

ಜನವರಿ 22 ರಂದು ಅಯೋದ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಅನಾವರಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಅರುಣ್ ಯೋಗಿ ಮನೆಗೆ ಭೇಟಿ ನೀಡಿರುವ ಕಾಂಗ್ರೆಸ್ಸಿಗರು ರಾಜ್ ಕುಟುಂಬಸ್ಥರನ್ನು ಸನ್ಮಾನಿಸಿದ್ದಾರೆ. ಅರುಣ್ ಯೋಗಿ ರಾಜ್ ಪತ್ನಿ ವಿಜೇತ ಹಾಗೂ ತಾಯಿ ಸರಸ್ವತಿ ಅವರನ್ನು ಸನ್ಮಾನಿಸಿದ್ದಾರೆ.

ಮೈಸೂರಿನ ಪಾಠಶಾಲಾ ಬಳಿ ಇರುವ ಅರುಣ್ ಯೋಗಿರಾಜ್ ನಿವಾಸಕ್ಕೆ ಕಾಂಗ್ರೆಸ್ ಶಾಸಕ ಹರೀಶ್ ಗೌಡ, ಮಾಜಿ ಶಾಸಕ ಎಂಕೆ ಸೋಮಶೇಖರ್ ತೆರಳಿ ಸನ್ಮಾನಿಸಿದ್ದಾರೆ. ಈ ವೇಳೆ ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಡಾ. ಸುಶೃತ್ ಗೌಡ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಮಧ್ಯೆ, ರಾಮ ಮಂದಿರ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ರಾಜಕೀಯ ಲಾಭಕ್ಕಾಗಿ ಪೈಪೋಟಿಯೂ ನಡೆಯುತ್ತಿದೆ. ಒಂದೆಡೆ, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ಕೊಟ್ಟಿಲ್ಲ ಎಂದು ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದರೆ, ಮತ್ತೊಂದೆಡೆ ಆಹ್ವಾನ ನೀಡುವುದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ಗೆ ಬಿಟ್ಟ ವಿಚಾರ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

‘ಯಾವ ರಾಜ್ಯದ ಬಿಜೆಪಿ ಸಿಎಂ ಅನ್ನೂ ಸಮಾರಂಭಕ್ಕೆ‌ ಕರೆದಿಲ್ಲ. ನಾನು ಕೇಂದ್ರ ಸರ್ಕಾರ ಸಚಿವ, ನನಗೇ ಆಹ್ವಾನವಿಲ್ಲ. ನನಗೆ, ಕರೆಯೋದಲ್ಲ ಬರಬೇಡಿ ಎಂದು ಹೇಳಿದ್ದಾರೆ. ಅಲ್ಲಿ ಜಾಗ ಇಲ್ಲ, ಅಲ್ಲಿನ ವ್ಯವಸ್ಥೆ ಸೀಮಿತವಾಗಿದೆ. ಯಾರನ್ನು ಕರೆಯಬೇಕು, ಕರೆಯಬಾರದು ಅನ್ನೋದು ಟ್ರಸ್ಟ್​​​ನ ಸ್ವತಂತ್ರ ನಿರ್ಧಾರವಾಗಿರುತ್ತದೆ’ ಎಂದು ಜೋಶಿ ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ಮೈಸೂರಿನ ಶಿಲ್ಪಿ ಕೆತ್ತಿದ ವಿಗ್ರಹ, ಯಾರು ಅರುಣ್ ಯೋಗಿರಾಜ್?

ಈ ಮಧ್ಯೆ, ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ವಿಚಾರವಾಗಿ ಪ್ರತಿಪಕ್ಷಗಳು ಹೇಗೆ ಅಡ್ಡಗಾಲು ಹಾಕುತ್ತಾ ಬಂದಿದ್ದವು ಎಂಬ ಬಗ್ಗೆ ಕಿರುಪುಸ್ತಕ ಬಿಡುಗಡೆ ಮಾಡಲು ಬಿಜೆಪಿ ಮುಂದಾಗಿದೆ ಎಂದು ವರದಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಸೆಲ್ಫಿ, ಆಟೋಗ್ರಾಫ್​ಗಾಗಿ ಸಿರಾಜ್ ಹಿಂದೆ ಬಿದ್ದ ಫ್ಯಾನ್ಸ್
ಸೆಲ್ಫಿ, ಆಟೋಗ್ರಾಫ್​ಗಾಗಿ ಸಿರಾಜ್ ಹಿಂದೆ ಬಿದ್ದ ಫ್ಯಾನ್ಸ್