AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru News: ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿಗೆ ಮೂರನೇ ಬಲಿ

ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿ ಮುಂದುವರಿದಿದ್ದು, ಇದೀಗ ಮತ್ತೋರ್ವ ಮಹಿಳೆ ಚಿರತೆ ದಾಳಿಗೆ ಬಲಿಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Mysuru News: ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿಗೆ ಮೂರನೇ ಬಲಿ
ಸಾಂದರ್ಭಿಕ ಚಿತ್ರ
TV9 Web
| Updated By: Rakesh Nayak Manchi|

Updated on:Jan 20, 2023 | 8:45 PM

Share

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿ (Leopard Attack in T.Narasipura) ಮುಂದುವರಿದಿದ್ದು, ಮತ್ತೋರ್ವ ಮಹಿಳೆ ಜೀವ ಪಡೆದಿದೆ (Leopard killed women). ಆ ಮೂಲಕ ತಾಲೂಕಿನಲ್ಲಿ ಈವರೆಗೆ ಚಿರತೆ ದಾಳಿಗೆ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದಂತಾಗಿದೆ. ಕನ್ನನಾಯಕನಹಳ್ಳಿ ನಿವಾಸಿ ಸಿದ್ದಮ್ಮ (60) ಸಾವನ್ನಪ್ಪಿದ ಮಹಿಳೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮನೆಯ ಹೊರಗೆಯಿದ್ದ ಸೌದೆ ಎತ್ತಿಕೊಳ್ಳಲು ಹೋಗಿದ್ದ ವೇಳೆ ಸಿದ್ದಮ್ಮರ ಮೇಲೆ ದಾಳಿ ನಡೆಸಿದ ಚಿರತೆ ಅವರನ್ನು ಎಳೆದುಕೊಂಡು ಹೋಗಿದೆ. ಇದನ್ನು ನೋಡಿದ ಗ್ರಾಮಸ್ಥರು ಕಿರುಚಾಡಿದ್ದಾರೆ. ಈ ವೇಳೆ ಚಿರತೆ ಸಿದ್ದಮ್ಮರನ್ನು ಬಿಟ್ಟು ಓಡಿ ಹೋಗಿದ್ದು, ಜನರು ಬಂದು ನೋಡುವಷ್ಟರಲ್ಲಿ ಸಿದ್ದಮ್ಮ ಕೊನೆಯುಸಿರೆಳೆದಿದ್ದಾರೆ.

ನವೆಂಬರ್ ತಿಂಗಳಲ್ಲಿ ಟಿ.ನರಸಿಪುರ ತಾಲೂಕಿನಲ್ಲೇ ಚಿರತೆ ಓರ್ವ ಯುವಕನ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಈ ಘಟನೆ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಮನೆ ಮುಂದೆ ಕುಳಿತಿದ್ದ ಮೇಘನಾ ಎಂಬ ಯುವತಿಯನ್ನು ಚಿರತೆ ಕೊಂದು ಹಾಕಿತ್ತು. ಆ ಮೂಲಕ ಒಂದೇ ತಿಂಗಳ ಅಂತರದಲ್ಲಿ ಚಿರತೆ ಇಬ್ಬರನ್ನು ಕೊಂದು ಹಾಕಿತ್ತು. ಇದೀಗ ಸೌದೆ ಎತ್ತಿಕೊಳ್ಳಲು ಮನೆಯಿಂದ ಹೊರ ಬಂದ ಸಿದ್ದಮ್ಮರನ್ನು ಚಿರತೆ ಕೊಂದು ಹಾಕಿದೆ.

ಇದನ್ನೂ ಓದಿ: ಬೆಂಗಳೂರು ವಿವಿಯಲ್ಲಿ ಚಿರತೆ ಆತಂಕ: ನಾಗರಭಾವಿ ಸರ್ಕಲ್​ನಿಂದ ವಿವಿಗೆ ತೆರಳುವ ರಸ್ತೆ ರಾತ್ರಿ 8 ರಿಂದ ಬೆಳಗ್ಗೆ 6ರವರೆಗೆ ಬಂದ್​

ಟಿ. ನರಸೀಪುರ ತಾಲೂಕಿನ ಜನರಲ್ಲಿ ಚಿರತೆ ಹಾವಳಿಗೆ ಎರಡು ನರ ಬಲಿಯಾಗುತ್ತಿದ್ದಂತೆ ತಾಲೂಕಿನ ಜನಾಕ್ರೋಶ ಹೆಚ್ಚಾಗತೊಡಗಿತು. ಅದರಂತೆ ಚಿರತೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇರಿಸಿದ್ದರು. ಈ ಒಂದೇ ತಾಲೂಕಿನಲ್ಲಿ ಅಲ್ಲದೆ, ಮೈಸೂರು ಜಿಲ್ಲೆಯ ಕೆಲವೊಂದು ಜಿಲ್ಲೆಗಳಲ್ಲೂ ಚಿರತೆ ಹಾವಳಿ ಇದ್ದು, ಬೆರಳೆಣಿಕೆಯಷ್ಟು ಚಿರತೆ ಸೆರೆ ಸಿಕ್ಕಿವೆ. ಇದೀಗ ಮಹಿಳೆಯ ಸಾವಿನ ನಂತರ ಟಿ ನರಸೀಪುರ ತಾಲೂಕಿನ ಜನರಲ್ಲಿದ್ದ ಭಯ ಮತ್ತಷ್ಟು ಹೆಚ್ಚಾಗತೊಡಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:08 pm, Fri, 20 January 23

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!