AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru News: ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿಗೆ ಮೂರನೇ ಬಲಿ

ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿ ಮುಂದುವರಿದಿದ್ದು, ಇದೀಗ ಮತ್ತೋರ್ವ ಮಹಿಳೆ ಚಿರತೆ ದಾಳಿಗೆ ಬಲಿಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Mysuru News: ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿಗೆ ಮೂರನೇ ಬಲಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 20, 2023 | 8:45 PM

Share

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿ (Leopard Attack in T.Narasipura) ಮುಂದುವರಿದಿದ್ದು, ಮತ್ತೋರ್ವ ಮಹಿಳೆ ಜೀವ ಪಡೆದಿದೆ (Leopard killed women). ಆ ಮೂಲಕ ತಾಲೂಕಿನಲ್ಲಿ ಈವರೆಗೆ ಚಿರತೆ ದಾಳಿಗೆ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದಂತಾಗಿದೆ. ಕನ್ನನಾಯಕನಹಳ್ಳಿ ನಿವಾಸಿ ಸಿದ್ದಮ್ಮ (60) ಸಾವನ್ನಪ್ಪಿದ ಮಹಿಳೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮನೆಯ ಹೊರಗೆಯಿದ್ದ ಸೌದೆ ಎತ್ತಿಕೊಳ್ಳಲು ಹೋಗಿದ್ದ ವೇಳೆ ಸಿದ್ದಮ್ಮರ ಮೇಲೆ ದಾಳಿ ನಡೆಸಿದ ಚಿರತೆ ಅವರನ್ನು ಎಳೆದುಕೊಂಡು ಹೋಗಿದೆ. ಇದನ್ನು ನೋಡಿದ ಗ್ರಾಮಸ್ಥರು ಕಿರುಚಾಡಿದ್ದಾರೆ. ಈ ವೇಳೆ ಚಿರತೆ ಸಿದ್ದಮ್ಮರನ್ನು ಬಿಟ್ಟು ಓಡಿ ಹೋಗಿದ್ದು, ಜನರು ಬಂದು ನೋಡುವಷ್ಟರಲ್ಲಿ ಸಿದ್ದಮ್ಮ ಕೊನೆಯುಸಿರೆಳೆದಿದ್ದಾರೆ.

ನವೆಂಬರ್ ತಿಂಗಳಲ್ಲಿ ಟಿ.ನರಸಿಪುರ ತಾಲೂಕಿನಲ್ಲೇ ಚಿರತೆ ಓರ್ವ ಯುವಕನ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಈ ಘಟನೆ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಮನೆ ಮುಂದೆ ಕುಳಿತಿದ್ದ ಮೇಘನಾ ಎಂಬ ಯುವತಿಯನ್ನು ಚಿರತೆ ಕೊಂದು ಹಾಕಿತ್ತು. ಆ ಮೂಲಕ ಒಂದೇ ತಿಂಗಳ ಅಂತರದಲ್ಲಿ ಚಿರತೆ ಇಬ್ಬರನ್ನು ಕೊಂದು ಹಾಕಿತ್ತು. ಇದೀಗ ಸೌದೆ ಎತ್ತಿಕೊಳ್ಳಲು ಮನೆಯಿಂದ ಹೊರ ಬಂದ ಸಿದ್ದಮ್ಮರನ್ನು ಚಿರತೆ ಕೊಂದು ಹಾಕಿದೆ.

ಇದನ್ನೂ ಓದಿ: ಬೆಂಗಳೂರು ವಿವಿಯಲ್ಲಿ ಚಿರತೆ ಆತಂಕ: ನಾಗರಭಾವಿ ಸರ್ಕಲ್​ನಿಂದ ವಿವಿಗೆ ತೆರಳುವ ರಸ್ತೆ ರಾತ್ರಿ 8 ರಿಂದ ಬೆಳಗ್ಗೆ 6ರವರೆಗೆ ಬಂದ್​

ಟಿ. ನರಸೀಪುರ ತಾಲೂಕಿನ ಜನರಲ್ಲಿ ಚಿರತೆ ಹಾವಳಿಗೆ ಎರಡು ನರ ಬಲಿಯಾಗುತ್ತಿದ್ದಂತೆ ತಾಲೂಕಿನ ಜನಾಕ್ರೋಶ ಹೆಚ್ಚಾಗತೊಡಗಿತು. ಅದರಂತೆ ಚಿರತೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇರಿಸಿದ್ದರು. ಈ ಒಂದೇ ತಾಲೂಕಿನಲ್ಲಿ ಅಲ್ಲದೆ, ಮೈಸೂರು ಜಿಲ್ಲೆಯ ಕೆಲವೊಂದು ಜಿಲ್ಲೆಗಳಲ್ಲೂ ಚಿರತೆ ಹಾವಳಿ ಇದ್ದು, ಬೆರಳೆಣಿಕೆಯಷ್ಟು ಚಿರತೆ ಸೆರೆ ಸಿಕ್ಕಿವೆ. ಇದೀಗ ಮಹಿಳೆಯ ಸಾವಿನ ನಂತರ ಟಿ ನರಸೀಪುರ ತಾಲೂಕಿನ ಜನರಲ್ಲಿದ್ದ ಭಯ ಮತ್ತಷ್ಟು ಹೆಚ್ಚಾಗತೊಡಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:08 pm, Fri, 20 January 23

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ