AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru News: ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿಗೆ ಮೂರನೇ ಬಲಿ

ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿ ಮುಂದುವರಿದಿದ್ದು, ಇದೀಗ ಮತ್ತೋರ್ವ ಮಹಿಳೆ ಚಿರತೆ ದಾಳಿಗೆ ಬಲಿಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Mysuru News: ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿಗೆ ಮೂರನೇ ಬಲಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 20, 2023 | 8:45 PM

Share

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿ (Leopard Attack in T.Narasipura) ಮುಂದುವರಿದಿದ್ದು, ಮತ್ತೋರ್ವ ಮಹಿಳೆ ಜೀವ ಪಡೆದಿದೆ (Leopard killed women). ಆ ಮೂಲಕ ತಾಲೂಕಿನಲ್ಲಿ ಈವರೆಗೆ ಚಿರತೆ ದಾಳಿಗೆ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದಂತಾಗಿದೆ. ಕನ್ನನಾಯಕನಹಳ್ಳಿ ನಿವಾಸಿ ಸಿದ್ದಮ್ಮ (60) ಸಾವನ್ನಪ್ಪಿದ ಮಹಿಳೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮನೆಯ ಹೊರಗೆಯಿದ್ದ ಸೌದೆ ಎತ್ತಿಕೊಳ್ಳಲು ಹೋಗಿದ್ದ ವೇಳೆ ಸಿದ್ದಮ್ಮರ ಮೇಲೆ ದಾಳಿ ನಡೆಸಿದ ಚಿರತೆ ಅವರನ್ನು ಎಳೆದುಕೊಂಡು ಹೋಗಿದೆ. ಇದನ್ನು ನೋಡಿದ ಗ್ರಾಮಸ್ಥರು ಕಿರುಚಾಡಿದ್ದಾರೆ. ಈ ವೇಳೆ ಚಿರತೆ ಸಿದ್ದಮ್ಮರನ್ನು ಬಿಟ್ಟು ಓಡಿ ಹೋಗಿದ್ದು, ಜನರು ಬಂದು ನೋಡುವಷ್ಟರಲ್ಲಿ ಸಿದ್ದಮ್ಮ ಕೊನೆಯುಸಿರೆಳೆದಿದ್ದಾರೆ.

ನವೆಂಬರ್ ತಿಂಗಳಲ್ಲಿ ಟಿ.ನರಸಿಪುರ ತಾಲೂಕಿನಲ್ಲೇ ಚಿರತೆ ಓರ್ವ ಯುವಕನ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಈ ಘಟನೆ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಮನೆ ಮುಂದೆ ಕುಳಿತಿದ್ದ ಮೇಘನಾ ಎಂಬ ಯುವತಿಯನ್ನು ಚಿರತೆ ಕೊಂದು ಹಾಕಿತ್ತು. ಆ ಮೂಲಕ ಒಂದೇ ತಿಂಗಳ ಅಂತರದಲ್ಲಿ ಚಿರತೆ ಇಬ್ಬರನ್ನು ಕೊಂದು ಹಾಕಿತ್ತು. ಇದೀಗ ಸೌದೆ ಎತ್ತಿಕೊಳ್ಳಲು ಮನೆಯಿಂದ ಹೊರ ಬಂದ ಸಿದ್ದಮ್ಮರನ್ನು ಚಿರತೆ ಕೊಂದು ಹಾಕಿದೆ.

ಇದನ್ನೂ ಓದಿ: ಬೆಂಗಳೂರು ವಿವಿಯಲ್ಲಿ ಚಿರತೆ ಆತಂಕ: ನಾಗರಭಾವಿ ಸರ್ಕಲ್​ನಿಂದ ವಿವಿಗೆ ತೆರಳುವ ರಸ್ತೆ ರಾತ್ರಿ 8 ರಿಂದ ಬೆಳಗ್ಗೆ 6ರವರೆಗೆ ಬಂದ್​

ಟಿ. ನರಸೀಪುರ ತಾಲೂಕಿನ ಜನರಲ್ಲಿ ಚಿರತೆ ಹಾವಳಿಗೆ ಎರಡು ನರ ಬಲಿಯಾಗುತ್ತಿದ್ದಂತೆ ತಾಲೂಕಿನ ಜನಾಕ್ರೋಶ ಹೆಚ್ಚಾಗತೊಡಗಿತು. ಅದರಂತೆ ಚಿರತೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇರಿಸಿದ್ದರು. ಈ ಒಂದೇ ತಾಲೂಕಿನಲ್ಲಿ ಅಲ್ಲದೆ, ಮೈಸೂರು ಜಿಲ್ಲೆಯ ಕೆಲವೊಂದು ಜಿಲ್ಲೆಗಳಲ್ಲೂ ಚಿರತೆ ಹಾವಳಿ ಇದ್ದು, ಬೆರಳೆಣಿಕೆಯಷ್ಟು ಚಿರತೆ ಸೆರೆ ಸಿಕ್ಕಿವೆ. ಇದೀಗ ಮಹಿಳೆಯ ಸಾವಿನ ನಂತರ ಟಿ ನರಸೀಪುರ ತಾಲೂಕಿನ ಜನರಲ್ಲಿದ್ದ ಭಯ ಮತ್ತಷ್ಟು ಹೆಚ್ಚಾಗತೊಡಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:08 pm, Fri, 20 January 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!