AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಮನೆ ನಗರಿಯಲ್ಲಿ ವ್ಹೀಲಿಂಗ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಕಮಿಷನರ್ ಸೂಚನೆ; ವಿದ್ಯಾರ್ಥಿ, ಪೋಷಕರಿಗೆ ಖಡಕ್ ವಾರ್ನಿಂಗ್

ಮಕ್ಕಳ ಬೈಕ್ ಚಾಲನೆ ಬಗ್ಗೆ ನಿಗಾ ಇಡಿ. ಎಫ್​ಐಆರ್ ದಾಖಲಾದರೆ ಭವಿಷ್ಯಕ್ಕೆ ಮಾರಕವಾಗಲಿದೆ. ಬೈಕ್ ವ್ಹೀಲಿಂಗ್ ವಿರುದ್ದ ಕಠಿಣ ಕ್ರಮ ಎಫ್​ಐಆರ್ ದಾಖಲಿಸುವುದಾಗಿ ವಿದ್ಯಾರ್ಥಿಗಳು, ಪೋಷಕರಿಗೂ ವಾರ್ನಿಂಗ್ ನೀಡಲಾಗಿದೆ.

ಅರಮನೆ ನಗರಿಯಲ್ಲಿ ವ್ಹೀಲಿಂಗ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಕಮಿಷನರ್ ಸೂಚನೆ; ವಿದ್ಯಾರ್ಥಿ, ಪೋಷಕರಿಗೆ ಖಡಕ್ ವಾರ್ನಿಂಗ್
ಬೈಕ್ ಸ್ಟಂಟ್‌
ರಾಮ್​, ಮೈಸೂರು
| Edited By: ಆಯೇಷಾ ಬಾನು|

Updated on:Jul 18, 2023 | 7:09 AM

Share

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ(Mysuru) ಬೈಕ್ ವ್ಹೀಲಿಂಗ್ (Bike Wheeling) ಪ್ರಕರಣಗಳು ಹೆಚ್ಚಾಗಿವೆ. ಒಂದು ವಾರದಲ್ಲಿ ಐದು ಪ್ರಕರಣಗಳು ದಾಖಲಾಗಿವೆ. ಸದ್ಯ ಬೈಕ್ ಸ್ಟಂಟ್‌ಗೆ(Bike Stunt) ಬ್ರೇಕ್ ಹಾಕಲು ಮೈಸೂರು ಪೊಲೀಸರು(Mysuru Police) ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪ್ರಮುಖ ರಸ್ತೆಗಳಲ್ಲಿ ಬೈಕ್ ಸ್ಟಂಟ್ ಮಾಡುತ್ತಿರುವ ಯುವಕರು ಹಾಗೂ ಸ್ಟಂಟ್‌ಗೆ ಬಳಸಿದ ಬೈಕ್​ಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ.

ವಾಹನಗಳ ಮಧ್ಯೆ ವ್ಹೀಲಿಂಗ್ ಮಾಡುತ್ತ ಅಪಾಯಕರ ಸಾಹಸ ಪ್ರದರ್ಶಿಸುತ್ತಿರುವ ದೃಶ್ಯಗಳು ಟಿವಿ9ಗೆ ಲಭ್ಯವಾಗಿವೆ. ಬನ್ನಿಮಂಟಪ ಎನ್​ಆರ್ ಮೊಹಲ್ಲಾ ರಿಂಗ್ ರಸ್ತೆಗಳಲ್ಲಿ ಬಿಂದಾಸ್ ವ್ಹೀಲಿಂಗ್ ಮಾಡುವ, ಐಶಾರಾಮಿ ಬೈಕ್‌ಗಳು ಟಿವಿಎಸ್ ಮೊಪೆಡ್‌ನಲ್ಲೂ ವ್ಹೀಲಿಂಗ್ ಮಾಡುವವರಿಗೆ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೈಕ್ ವ್ಹೀಲಿಂಗ್ ವಿರುದ್ದ ಕಠಿಣ ಕ್ರಮ ಎಫ್​ಐಆರ್ ದಾಖಲಿಸುವುದಾಗಿ ವಿದ್ಯಾರ್ಥಿಗಳು, ಪೋಷಕರಿಗೂ ವಾರ್ನಿಂಗ್ ನೀಡಲಾಗಿದೆ. ಮಕ್ಕಳ ಬೈಕ್ ಚಾಲನೆ ಬಗ್ಗೆ ನಿಗಾ ಇಡಿ. ಎಫ್​ಐಆರ್ ದಾಖಲಾದರೆ ಭವಿಷ್ಯಕ್ಕೆ ಮಾರಕವಾಗಲಿದೆ. ಬೈಕ್ ವೀಲಿಂಗ್ ಬೇರೆ ವಾಹನ ಸವಾರರಿಗೂ ಸಮಸ್ಯೆಯಾಗುತ್ತದೆ ಎಂದು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಅವರು ಎಚ್ಚರಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ: Bengaluru News: ಗಂಡನ ಮನೆಯಲ್ಲಿ ಪ್ರಾಣಬಿಟ್ಟ ಮಹಿಳಾ ಟೆಕ್ಕಿ, ಕಾರಣ ನಿಗೂಢ

ಬೈಕ್​ಗಳ ನಡುವೆ ಅಪಘಾತ; ತಾತ ಸಾವು, ಮೊಮ್ಮಗನಿಗೆ ಗಾಯ

ಮೈಸೂರು ಜಿಲ್ಲೆ ಹುಣಸೂರು ನಗರದ ಬ್ಯಾಂಕ್ ಆಫ್ ಬರೋಡಾ ಬಳಿ ಭೀಕರ ಅಪಘಾತ ಸಂಭವಿಸಿದೆ. ಬೈಕ್​ಗಳ ನಡುವೆ ಅಪಘಾತವಾಗಿದ್ದು ತಾತ ರಾಮಶೆಟ್ಟಿ(72) ಸಾವು, ಮೊಮ್ಮಗ ವಿನಯ್​ಗೆ ಗಾಯಗಳಾಗಿವೆ. ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಬುಲೆಟ್ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ. ಕೆಳಗೆ ಬಿದ್ದ ರಾಮಶೆಟ್ಟರ ತಲೆ, ಕೈಕಾಲುಗಳಿಗೆ ತೀವ್ರ ಪೆಟ್ಟು ಬಿದ್ದಿತ್ತು. ಮೈಸೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ರಾಮಶೆಟ್ಟಿ ಮೃತಪಟ್ಟಿದ್ದಾರೆ. ಹುಣಸೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:04 am, Tue, 18 July 23

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು