AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಮಹಿಳೆಯರ ರಕ್ಷಣೆಗೆ ನಿಂತ ಚಾಮುಂಡಿ; ಚಾಮುಂಡಿ ಮಹಿಳಾ ಸುರಕ್ಷಾ ಪಡೆ ಗಸ್ತು ವಾಹನಕ್ಕೆ ಚಾಲನೆ

ಮೈಸೂರು ಅರಮನೆ ಕೋಟೆ ಆಂಜನೇಯ ದೇಗುಲ ಬಳಿ ಮೈಸೂರು ನಗರ ಪೊಲೀಸ್ ಇಲಾಖೆ ವಿನೂತನ ಕಾರ್ಯಕ್ರಮ ಆಯೋಜಿಸಿ ಮಹಿಳೆಯರ ಸುರಕ್ಷತೆಗಾಗಿ ಸುರಕ್ಷಾ ಪಡೆ ವಾಹನಗಳಿಗೆ ಚಾಲನೆ ನೀಡಿದೆ .ಮಹಿಳೆಯರ ಸುರಕ್ಷತೆ ಕಾಪಾಡಲು ಚಾಮುಂಡಿ ಮಹಿಳಾ ಸುರಕ್ಷಾ ಪಡೆ ಗಸ್ತು ವಾಹನ ರಸ್ತೆಗಿಳಿದಿದೆ.

ಮೈಸೂರಿನಲ್ಲಿ ಮಹಿಳೆಯರ ರಕ್ಷಣೆಗೆ ನಿಂತ ಚಾಮುಂಡಿ; ಚಾಮುಂಡಿ ಮಹಿಳಾ ಸುರಕ್ಷಾ ಪಡೆ ಗಸ್ತು ವಾಹನಕ್ಕೆ ಚಾಲನೆ
ಚಾಮುಂಡಿ ಮಹಿಳಾ ಸುರಕ್ಷಾ ಪಡೆ ಗಸ್ತು
ರಾಮ್​, ಮೈಸೂರು
| Edited By: ಆಯೇಷಾ ಬಾನು|

Updated on: Jan 06, 2024 | 1:09 PM

Share

ಮೈಸೂರು, ಜ.06: ಮೈಸೂರಿನಲ್ಲಿ ಮಹಿಳೆಯರ ಸುರಕ್ಷತೆ (Women Safty) ಕಾಪಾಡಲು ಚಾಮುಂಡಿ ಮಹಿಳಾ ಸುರಕ್ಷಾ ಪಡೆ ಗಸ್ತು ವಾಹನಕ್ಕೆ ಚಾಲನೆ ನೀಡಲಾಗಿದೆ. ಅರಮನೆ ನಗರಿಯಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರ ಶೋಷಣೆಗಳನ್ನು ನಿಯಂತ್ರಿಸಿ ಅವರ ರಕ್ಷಣೆಗಾಗಿ ಚಾಮುಂಡಿ ಮಹಿಳಾ ಸುರಕ್ಷಾ ಪಡೆ ಗಸ್ತು ವಾಹನಕ್ಕೆ ನಗರ ಪೊಲೀಸ್​​​ ಆಯುಕ್ತ ರಮೇಶ್​​ ಬಾನೊತ್ (Ramesh Banoth)​​ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ DCP ಜಾಹ್ನವಿ, ಹಿರಿಯ ಪೊಲೀಸ್​​ ಅಧಿಕಾರಿಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಮೈಸೂರು ಅರಮನೆ ಕೋಟೆ ಆಂಜನೇಯ ದೇಗುಲ ಬಳಿ ಮೈಸೂರು ನಗರ ಪೊಲೀಸ್ ಇಲಾಖೆ ವಿನೂತನ ಕಾರ್ಯಕ್ರಮ ಆಯೋಜಿಸಿ ಮಹಿಳೆಯರ ಸುರಕ್ಷತೆಗಾಗಿ ಸುರಕ್ಷಾ ಪಡೆ ವಾಹನಗಳಿಗೆ ಚಾಲನೆ ನೀಡಿದೆ .ಮಹಿಳೆಯರ ಸುರಕ್ಷತೆ ಕಾಪಾಡಲು ಚಾಮುಂಡಿ ಮಹಿಳಾ ಸುರಕ್ಷಾ ಪಡೆ ಗಸ್ತು ವಾಹನ ರಸ್ತೆಗಿಳಿದಿದೆ.

ಈ ಹಿಂದೆ ಹೊಸ ವರ್ಷದ ಸಮಯದಲ್ಲಿ ಮಹಿಳೆಯರ ಹಿತದೃಷ್ಟಿಯಿಂದ ಮೈಸೂರು ನಗರದಲ್ಲಿ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಒಳಗೊಂಡ ಎಂಟು ಚಾಮುಂಡಿ ಪಡೆ (ಸುರಕ್ಷತಾ ಪಿಂಕ್‌ ಗರುಡಾ) ರಚಿಸಲಾಗಿತ್ತು. ಈ ಮೂಲಕ ಯುವತಿಯರಿಗೆ ಕೀಟಲೆ ಮಾಡುವ ಪುಂಡರ ಹೆಡೆಮುರಿ ಕಟ್ಟಲಾಗಿತ್ತು.

ಹೊಸ ವರ್ಷ ಆಚರಣೆ ವೇಳೆ ಮೈಸೂರು ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮಹಿಳೆಯರ ರಕ್ಷಣೆ ದೃಷ್ಟಿಯಿಂದ ಚಾಮುಂಡಿ ಪಡೆ ಕಾರ್ಯ ನಿರ್ವಹಿಸಿತ್ತು. ಇದೀಗ ಇದೇ ನಿಟ್ಟಿನಲ್ಲಿ ಮಹಿಳೆಯರ ರಕ್ಷಣೆಗಾಗಿ ಚಾಮುಂಡಿ ಮಹಿಳಾ ಸುರಕ್ಷಾ ಪಡೆ ಗಸ್ತು ವಾಹನಕ್ಕೆ ಚಾಲನೆ ನೀಡಲಾಗಿದೆ.

ಇದನ್ನೂ ಓದಿ: ಗದಗ: ತೆಪ್ಪದ ಮೂಲಕ ಮರಳು ಲೂಟಿ, ಕಾನೂನು ಸಚಿವರ ತವರಲ್ಲೇ ಮಂಗಮಾಯವಾದ ಕಾನೂನು!

ಮಾಡೆಲ್ ಹತ್ಯೆ ಪತ್ತೆಯಾಗದ ಶವ

ಗುರುಗ್ರಾಮದ ಹೋಟೆಲ್​ವೊಂದರಲ್ಲಿ ಹತ್ಯೆಯಾಗಿದ್ದ ಮಾಡೆಲ್ ಪಹುಜಾ ಪ್ರಕರಣದ ತನಿಖೆ ತೀವ್ರ ಗೊಂಡಿದೆ. ಆದ್ರೆ, ಕೊಲೆಯಾಗಿ ನಾಲ್ಕು ದಿನ ಕಳೆದರೂ ದಿವ್ಯಾ ಮೃತದೇಹ ಪತ್ತೆಯಾಗಿಲ್ಲ. ಗುರುಗ್ರಾಮ್ ಹೋಟೆಲ್​ನಲ್ಲಿ, ಹೋಟೆಲ್ ಮಾಲೀಕನಿಂದ್ಲೇ ಹತ್ಯೆಯಾದ ಮಾಡೆಲ್ ದಿವ್ಯಾ ಪಹುಜಾ ಮೃತ ದೇಹ ಇನ್ನೂ ಪತ್ತೆಯಾಗಿಲ್ಲ. ಪ್ರಕರಣದ ತನಿಖೆಗಾಗಿ ಡಿಸಿಪಿ ವಿಜಯ್ ಪ್ರತಾಪ್ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ದಿವ್ಯಾ ಪಹುಜಾ ಒಂದು ಕಾಲದ ಗ್ಯಾಂಗ್‌ಸ್ಟರ್ ಸಂದೀಪ್ ಗಡೋಲಿ ಅವರ ಮಾಜಿ ಪ್ರೇಯಸಿ. ಈಕೆಗೆ 18 ವರ್ಷ ಇದ್ದಾಗಲೇ ಅಂಡರ್​ವಲ್ಡ್​ ನಂಟು ಇತ್ತು.

2016ರಲ್ಲಿ ಕೇಸ್ ವೊಂದರ ಸಂಬಂಧ ದಿವ್ಯಾಳನ್ನ ಪೊಲೀಸರು ಬಂಧಿಸಿದ್ರು. ಈ ವೇಳೆ ದಿವ್ಯಾ ಸಂದೀಪ್ ಅಡಗುದಾಣವನ್ನ ತೋರಿಸಿದ್ಲು. ಬಳಿಕ ಪೊಲೀಸರು ಸಂದೀಪ್​ನನ್ನ ಎನ್​ಕೌಂಟರ್ ಮಾಡಿದ್ರು. ಜನವರಿ 2 ರಂದು ದಿವ್ಯಾಳನ್ನ ಗುರುಗ್ರಾಮದ ಹೋಟೆಲ್​ವೊಂದರ ಮಾಲೀಕ ಅಭಿಜಿತ್ ಸಿಂಗ್ ಗುಂಡಿಕ್ಕಿ ಹತ್ಯೆಗೈದು, ಶವವನ್ನ ಬಿಎಂಡಬ್ಲ್ಯು ಕಾರಿನಲ್ಲಿ ಒಯ್ದು ಸುಮಾರು 280 ಕಿಲೋ ಮೀಟರ್ ದೂರ ಸಾಗಿಸಿದ್ದ. ಪಟಿಯಾಲದ ಬಳಿ ನದಿಯಲ್ಲಿ ಎಸೆದಿದ್ದ. ದಿವ್ಯಾ, ಅಭಿಜಿತ್​ನ ಖಾಸಗಿ ಚಿತ್ರ& ವಿಡಿಯೋಗಳನ್ನ ತೋರಿಸಿ ಆತನಿಗೆ ಬೆದರಿಕೆ ಹಾಕಿದ್ದಳು. ಹಣ ಸುಲಿಗೆ ಮಾಡ್ತಿದ್ದಳು. ಹೀಗಾಗಿ ದಿವ್ಯಾಳನ್ನ ಹತ್ಯೆ ಮಾಡಿರೋದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ದಿವ್ಯಾಳ ಶವಕ್ಕಾಗಿ ಹುಡುಕಾಟ ನಡೆಸ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್