Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಮಹಿಳೆಯರ ರಕ್ಷಣೆಗೆ ನಿಂತ ಚಾಮುಂಡಿ; ಚಾಮುಂಡಿ ಮಹಿಳಾ ಸುರಕ್ಷಾ ಪಡೆ ಗಸ್ತು ವಾಹನಕ್ಕೆ ಚಾಲನೆ

ಮೈಸೂರು ಅರಮನೆ ಕೋಟೆ ಆಂಜನೇಯ ದೇಗುಲ ಬಳಿ ಮೈಸೂರು ನಗರ ಪೊಲೀಸ್ ಇಲಾಖೆ ವಿನೂತನ ಕಾರ್ಯಕ್ರಮ ಆಯೋಜಿಸಿ ಮಹಿಳೆಯರ ಸುರಕ್ಷತೆಗಾಗಿ ಸುರಕ್ಷಾ ಪಡೆ ವಾಹನಗಳಿಗೆ ಚಾಲನೆ ನೀಡಿದೆ .ಮಹಿಳೆಯರ ಸುರಕ್ಷತೆ ಕಾಪಾಡಲು ಚಾಮುಂಡಿ ಮಹಿಳಾ ಸುರಕ್ಷಾ ಪಡೆ ಗಸ್ತು ವಾಹನ ರಸ್ತೆಗಿಳಿದಿದೆ.

ಮೈಸೂರಿನಲ್ಲಿ ಮಹಿಳೆಯರ ರಕ್ಷಣೆಗೆ ನಿಂತ ಚಾಮುಂಡಿ; ಚಾಮುಂಡಿ ಮಹಿಳಾ ಸುರಕ್ಷಾ ಪಡೆ ಗಸ್ತು ವಾಹನಕ್ಕೆ ಚಾಲನೆ
ಚಾಮುಂಡಿ ಮಹಿಳಾ ಸುರಕ್ಷಾ ಪಡೆ ಗಸ್ತು
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: Jan 06, 2024 | 1:09 PM

ಮೈಸೂರು, ಜ.06: ಮೈಸೂರಿನಲ್ಲಿ ಮಹಿಳೆಯರ ಸುರಕ್ಷತೆ (Women Safty) ಕಾಪಾಡಲು ಚಾಮುಂಡಿ ಮಹಿಳಾ ಸುರಕ್ಷಾ ಪಡೆ ಗಸ್ತು ವಾಹನಕ್ಕೆ ಚಾಲನೆ ನೀಡಲಾಗಿದೆ. ಅರಮನೆ ನಗರಿಯಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರ ಶೋಷಣೆಗಳನ್ನು ನಿಯಂತ್ರಿಸಿ ಅವರ ರಕ್ಷಣೆಗಾಗಿ ಚಾಮುಂಡಿ ಮಹಿಳಾ ಸುರಕ್ಷಾ ಪಡೆ ಗಸ್ತು ವಾಹನಕ್ಕೆ ನಗರ ಪೊಲೀಸ್​​​ ಆಯುಕ್ತ ರಮೇಶ್​​ ಬಾನೊತ್ (Ramesh Banoth)​​ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ DCP ಜಾಹ್ನವಿ, ಹಿರಿಯ ಪೊಲೀಸ್​​ ಅಧಿಕಾರಿಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಮೈಸೂರು ಅರಮನೆ ಕೋಟೆ ಆಂಜನೇಯ ದೇಗುಲ ಬಳಿ ಮೈಸೂರು ನಗರ ಪೊಲೀಸ್ ಇಲಾಖೆ ವಿನೂತನ ಕಾರ್ಯಕ್ರಮ ಆಯೋಜಿಸಿ ಮಹಿಳೆಯರ ಸುರಕ್ಷತೆಗಾಗಿ ಸುರಕ್ಷಾ ಪಡೆ ವಾಹನಗಳಿಗೆ ಚಾಲನೆ ನೀಡಿದೆ .ಮಹಿಳೆಯರ ಸುರಕ್ಷತೆ ಕಾಪಾಡಲು ಚಾಮುಂಡಿ ಮಹಿಳಾ ಸುರಕ್ಷಾ ಪಡೆ ಗಸ್ತು ವಾಹನ ರಸ್ತೆಗಿಳಿದಿದೆ.

ಈ ಹಿಂದೆ ಹೊಸ ವರ್ಷದ ಸಮಯದಲ್ಲಿ ಮಹಿಳೆಯರ ಹಿತದೃಷ್ಟಿಯಿಂದ ಮೈಸೂರು ನಗರದಲ್ಲಿ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಒಳಗೊಂಡ ಎಂಟು ಚಾಮುಂಡಿ ಪಡೆ (ಸುರಕ್ಷತಾ ಪಿಂಕ್‌ ಗರುಡಾ) ರಚಿಸಲಾಗಿತ್ತು. ಈ ಮೂಲಕ ಯುವತಿಯರಿಗೆ ಕೀಟಲೆ ಮಾಡುವ ಪುಂಡರ ಹೆಡೆಮುರಿ ಕಟ್ಟಲಾಗಿತ್ತು.

ಹೊಸ ವರ್ಷ ಆಚರಣೆ ವೇಳೆ ಮೈಸೂರು ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮಹಿಳೆಯರ ರಕ್ಷಣೆ ದೃಷ್ಟಿಯಿಂದ ಚಾಮುಂಡಿ ಪಡೆ ಕಾರ್ಯ ನಿರ್ವಹಿಸಿತ್ತು. ಇದೀಗ ಇದೇ ನಿಟ್ಟಿನಲ್ಲಿ ಮಹಿಳೆಯರ ರಕ್ಷಣೆಗಾಗಿ ಚಾಮುಂಡಿ ಮಹಿಳಾ ಸುರಕ್ಷಾ ಪಡೆ ಗಸ್ತು ವಾಹನಕ್ಕೆ ಚಾಲನೆ ನೀಡಲಾಗಿದೆ.

ಇದನ್ನೂ ಓದಿ: ಗದಗ: ತೆಪ್ಪದ ಮೂಲಕ ಮರಳು ಲೂಟಿ, ಕಾನೂನು ಸಚಿವರ ತವರಲ್ಲೇ ಮಂಗಮಾಯವಾದ ಕಾನೂನು!

ಮಾಡೆಲ್ ಹತ್ಯೆ ಪತ್ತೆಯಾಗದ ಶವ

ಗುರುಗ್ರಾಮದ ಹೋಟೆಲ್​ವೊಂದರಲ್ಲಿ ಹತ್ಯೆಯಾಗಿದ್ದ ಮಾಡೆಲ್ ಪಹುಜಾ ಪ್ರಕರಣದ ತನಿಖೆ ತೀವ್ರ ಗೊಂಡಿದೆ. ಆದ್ರೆ, ಕೊಲೆಯಾಗಿ ನಾಲ್ಕು ದಿನ ಕಳೆದರೂ ದಿವ್ಯಾ ಮೃತದೇಹ ಪತ್ತೆಯಾಗಿಲ್ಲ. ಗುರುಗ್ರಾಮ್ ಹೋಟೆಲ್​ನಲ್ಲಿ, ಹೋಟೆಲ್ ಮಾಲೀಕನಿಂದ್ಲೇ ಹತ್ಯೆಯಾದ ಮಾಡೆಲ್ ದಿವ್ಯಾ ಪಹುಜಾ ಮೃತ ದೇಹ ಇನ್ನೂ ಪತ್ತೆಯಾಗಿಲ್ಲ. ಪ್ರಕರಣದ ತನಿಖೆಗಾಗಿ ಡಿಸಿಪಿ ವಿಜಯ್ ಪ್ರತಾಪ್ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ದಿವ್ಯಾ ಪಹುಜಾ ಒಂದು ಕಾಲದ ಗ್ಯಾಂಗ್‌ಸ್ಟರ್ ಸಂದೀಪ್ ಗಡೋಲಿ ಅವರ ಮಾಜಿ ಪ್ರೇಯಸಿ. ಈಕೆಗೆ 18 ವರ್ಷ ಇದ್ದಾಗಲೇ ಅಂಡರ್​ವಲ್ಡ್​ ನಂಟು ಇತ್ತು.

2016ರಲ್ಲಿ ಕೇಸ್ ವೊಂದರ ಸಂಬಂಧ ದಿವ್ಯಾಳನ್ನ ಪೊಲೀಸರು ಬಂಧಿಸಿದ್ರು. ಈ ವೇಳೆ ದಿವ್ಯಾ ಸಂದೀಪ್ ಅಡಗುದಾಣವನ್ನ ತೋರಿಸಿದ್ಲು. ಬಳಿಕ ಪೊಲೀಸರು ಸಂದೀಪ್​ನನ್ನ ಎನ್​ಕೌಂಟರ್ ಮಾಡಿದ್ರು. ಜನವರಿ 2 ರಂದು ದಿವ್ಯಾಳನ್ನ ಗುರುಗ್ರಾಮದ ಹೋಟೆಲ್​ವೊಂದರ ಮಾಲೀಕ ಅಭಿಜಿತ್ ಸಿಂಗ್ ಗುಂಡಿಕ್ಕಿ ಹತ್ಯೆಗೈದು, ಶವವನ್ನ ಬಿಎಂಡಬ್ಲ್ಯು ಕಾರಿನಲ್ಲಿ ಒಯ್ದು ಸುಮಾರು 280 ಕಿಲೋ ಮೀಟರ್ ದೂರ ಸಾಗಿಸಿದ್ದ. ಪಟಿಯಾಲದ ಬಳಿ ನದಿಯಲ್ಲಿ ಎಸೆದಿದ್ದ. ದಿವ್ಯಾ, ಅಭಿಜಿತ್​ನ ಖಾಸಗಿ ಚಿತ್ರ& ವಿಡಿಯೋಗಳನ್ನ ತೋರಿಸಿ ಆತನಿಗೆ ಬೆದರಿಕೆ ಹಾಕಿದ್ದಳು. ಹಣ ಸುಲಿಗೆ ಮಾಡ್ತಿದ್ದಳು. ಹೀಗಾಗಿ ದಿವ್ಯಾಳನ್ನ ಹತ್ಯೆ ಮಾಡಿರೋದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ದಿವ್ಯಾಳ ಶವಕ್ಕಾಗಿ ಹುಡುಕಾಟ ನಡೆಸ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ