AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಬೆಳ್ಳಿ ಆಸೆಗೆ ಕೆಲಸ ಕೊಟ್ಟವನನ್ನೇ ಕೊಲೆಗೈದಿದ್ದ ಆರೋಪಿ ಬಂಧನ! ರಾಮನಗರದಲ್ಲಿ ಅಪಘಾತದಿಂದ ಯುವತಿಯ ಕೊಲೆ ರಹಸ್ಯ ಬಯಲು

ಮೈಸೂರಿನ ಹಳ್ಳದಕೇರಿ ಬಡಾವಣೆಯಲ್ಲಿ ಉಳಿದುಕೊಂಡಿದ್ದರು. ಜೈನಮಂದಿರದ ಕೆಲಸಕ್ಕಾಗಿ 14 ಕೆಜಿ ಬೆಳ್ಳಿ ಗಟ್ಟಿ ನೀಡಲಾಗಿತ್ತು. ಈ ಬೆಳ್ಳಿ ಮೇಲೆ ಕಣ್ಣಿಟ್ಟಿದ್ದ ಆರೋಪಿ ಗೋವಿಂದನನ್ನು ಕೊಂದು ಬೆಳ್ಳಿ ಗಟ್ಟಿ ಜತೆ ಪರಾರಿಯಾಗಿದ್ದ.

ಮೈಸೂರಿನಲ್ಲಿ ಬೆಳ್ಳಿ ಆಸೆಗೆ ಕೆಲಸ ಕೊಟ್ಟವನನ್ನೇ ಕೊಲೆಗೈದಿದ್ದ ಆರೋಪಿ ಬಂಧನ! ರಾಮನಗರದಲ್ಲಿ ಅಪಘಾತದಿಂದ ಯುವತಿಯ ಕೊಲೆ ರಹಸ್ಯ ಬಯಲು
ಬಂಧಿತ ಆರೋಪಿ ಅರ್ಜುನ್, ಕೊಲೆಯಾದ ಗೋವಿಂದ
TV9 Web
| Edited By: sandhya thejappa|

Updated on:May 11, 2022 | 9:01 AM

Share

ಮೈಸೂರು: ಬೆಳ್ಳಿ (Silver) ಆಸೆಗಾಗಿ ಕೆಲಸ ಕೊಟ್ಟವನನ್ನೇ ಕೊಲೆ (Murder) ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅರ್ಜುನ್ ಕುಮಾರ(28), ಗೋವಿಂದ(30)ನನ್ನು ಕೊಲೆ ಮಾಡಿ ನಂತರ ರಾಜಸ್ಥಾನಕ್ಕೆ ಪರಾರಿಯಾಗಿದ್ದ. ಮೈಸೂರಿನ ಲಷ್ಕರ್ ಠಾಣೆ ಪೊಲೀಸರು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ಗಟ್ಟಿಯನ್ನು ವಶಕ್ಕೆ ಪಡೆದಿದ್ದಾರೆ. ಅರ್ಜುನ್ ಕುಮಾರ್, ಗೋವಿಂದ ಮೂಲತಃ ರಾಜಸ್ಥಾನದವರು. ಮೈಸೂರಿನ ಸುಮತಿನಾಥ ಜೈನಮಂದಿರದ ಬೆಳ್ಳಿ ಕೆಲಸಕ್ಕೆ ಬಂದಿದ್ರು. ಸಹಾಯಕ್ಕಾಗಿ ಗೋವಿಂದ ಅರ್ಜುನ್ ಕುಮಾರ್ನ ಕರೆತಂದಿದ್ದ.

ಮೈಸೂರಿನ ಹಳ್ಳದಕೇರಿ ಬಡಾವಣೆಯಲ್ಲಿ ಉಳಿದುಕೊಂಡಿದ್ದರು. ಜೈನಮಂದಿರದ ಕೆಲಸಕ್ಕಾಗಿ 14 ಕೆಜಿ ಬೆಳ್ಳಿ ಗಟ್ಟಿ ನೀಡಲಾಗಿತ್ತು. ಈ ಬೆಳ್ಳಿ ಮೇಲೆ ಕಣ್ಣಿಟ್ಟಿದ್ದ ಆರೋಪಿ ಗೋವಿಂದನನ್ನು ಕೊಂದು ಬೆಳ್ಳಿ ಗಟ್ಟಿ ಜತೆ ಪರಾರಿಯಾಗಿದ್ದ. 8 ಲಕ್ಷ ಮೌಲ್ಯದ 12 ಕೆಜಿ ಬೆಳ್ಳಿ ಗಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಅಪಘಾತದಿಂದ ಯುವತಿಯ ಕೊಲೆ ರಹಸ್ಯ ಬಯಲು: ರಾಮನಗರ: ಅಪಘಾತದಿಂದ ಕೊಲೆ ರಹಸ್ಯ ಬಯಲಾಗಿದೆ. ಕೊಲೆಗೈದು ಮೃತದೇಹ ಸಾಗಿಸುವ ವೇಳೆ ಅಪಘಾತ ನಡೆದಿದೆ. ರಾಮನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಈ ಘಟನೆ ನಡೆದಿದೆ. ಹಮ್ಸ್ ಹಾರಿಸುವ ವೇಳೆ ಆರೋಪಿಗಳು ಹಾಗೂ ಮೃತದೇಹ ಕೆಳಗೆ ಬಿದ್ದಿದೆ. ತಕ್ಷಣ ಆಸ್ಪತ್ರೆಗೆ ದಾಖಲು‌ ಮಾಡಿದಾಗ ವೈದ್ಯರು ಮೃತದೇಹವನ್ನು ಗಮನಿಸಿದ್ದಾರೆ.

ಮಹಿಳೆ ಸಾವನ್ನಪ್ಪಿ ಬಹಳ ಸಮಯವಾಗಿದೆ. ಅಪಘಾತದಿಂದ ಸಾವು‌ ಸಂಭವಿಸಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅನುಮಾನದಿಂದ ಪೊಲೀಸರು ತಪಾಸಣೆಗೆ ಮುಂದಾಗಿದ್ದಾರೆ. ಈ ವೇಳೆ ಕೊಲೆ ರಹಸ್ಯ ಬಯಲಾಗಿದೆ. ಆರೋಪಿಗಳು ಬೆಂಗಳೂರಿನ ಕೆಂಚೇನಹಳ್ಳಿಯ ಬಾಡಿಗೆ ಮನೆಯಲ್ಲಿ ‌ ಸೌಮ್ಯ ಎಂಬ ಯುವತಿಯನ್ನು ಕೊಲೆ ಮಾಡಿದ್ದಾರೆ. ಹಣಕಾಸಿನ‌ ವಿಚಾರವಾಗಿ ಕೊಲೆ ನಡೆದಿದೆ. ರಘು ಹಾಗೂ ಆತನ‌ ಪತ್ನಿ ದುರ್ಗಾ ಎಂಬಾಕೆ ಹತ್ಯೆ ಮಾಡಿದ್ದಾರೆ. ಮೃತದೇಹವನ್ನ ಮಧ್ಯದಲ್ಲಿ ಇಟ್ಟುಕೊಂಡು ನಾಗರಾಜ್ ಹಾಗೂ ವಿನೋದ್ ಹೋಗುತ್ತಿದ್ದರು.  ಅಪಘಾತದಿಂದ ವಿನೋದ್‌ಗೆ ಗಂಭೀರ ಗಾಯವಾಗಿದೆ.

ಇದನ್ನೂ ಓದಿ

Pooja Bedi Birthday: ಪೂಜಾ ಬೇಡಿ ಜನ್ಮದಿನ: ವ್ಯಾಕ್ಸಿನ್​ ಬೇಡವೇ ಬೇಡ ಎಂದು ವಿವಾದ ಎಬ್ಬಿಸಿದ್ದ ಈ ನಟಿಯ ವಯಸ್ಸು ಎಷ್ಟು?

National Technology Day 2022: ಇದನ್ನು ಏಕೆ ಆಚರಿಸಲಾಗುತ್ತದೆ? ಅದರ ಮಹತ್ವ ಮತ್ತು ಈ ವರ್ಷದ ಥೀಮ್​: ಇಲ್ಲಿದೆ ಮಾಹಿತಿ

Published On - 8:33 am, Wed, 11 May 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ