AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ರೈಲ್ವೆ ದಾಖಲೆ: ಸರಕು ಸಾಗಣೆ-ಪಾರ್ಸೆಲ್, ಟಿಕೆಟ್ ಪರಿಶೀಲನೆಯಲ್ಲಿ ಕೋಟ್ಯಂತರ ರೂ ಆದಾಯ

2025-26ನೇ ಹಣಕಾಸು ಸಾಲಿನಲ್ಲಿ ಮೈಸೂರು ರೈಲ್ವೆ ವಿಭಾಗವು ಸಮಗ್ರ ಬೆಳವಣಿಗೆ ಕಾಣುವ ಮೂಲಕ ಕಾರ್ಯಚರಣೆ ವಿಭಾಗದಲ್ಲಿ ಭರ್ಜರಿ ಸಾಧನೆ ಮಾಡಿದೆ. ಪ್ರಯಾಣಿಕ ಮತ್ತು ಸರಕು ಸಾಗಣೆ ಆದಾಯದಲ್ಲಿ ಮಹತ್ವದ ದಾಖಲೆ ಮಾಡಿದೆ. ಜೊತೆಗೆ ಭದ್ರತೆ, ಮೂಲಸೌಕರ್ಯ ಸುಧಾರಣೆ ಸೇರಿದಂತೆ ಇತರೆ ಸೇವೆಗಳಲ್ಲೂ ಉತ್ತಮ ಸಾಧನೆ ಮಾಡಿದೆ.

ಮೈಸೂರು ರೈಲ್ವೆ ದಾಖಲೆ: ಸರಕು ಸಾಗಣೆ-ಪಾರ್ಸೆಲ್, ಟಿಕೆಟ್ ಪರಿಶೀಲನೆಯಲ್ಲಿ ಕೋಟ್ಯಂತರ ರೂ ಆದಾಯ
ವಿಭಾಗೀಯ ಮುಖ್ಯಸ್ಥ ಮುದಿತ್​ ಮಿತ್ತಲ್Image Credit source: tv9 kannada
ರಾಮ್​, ಮೈಸೂರು
| Edited By: |

Updated on: Apr 03, 2026 | 4:24 PM

Share

ಮೈಸೂರು, ಏಪ್ರಿಲ್​ 03: ನೈರುತ್ಯ ರೈಲ್ವೆ ಮೈಸೂರು ವಿಭಾಗವು (mysuru railway division) 2025-26ನೇ ಸಾಲಿನ ಹಣಕಾಸು ವರ್ಷದಲ್ಲಿ ಭರ್ಜರಿ ಸಾಧನೆ ಮಾಡಿದೆ. 449.13 ಕೋಟಿ ರೂ ಪ್ರಯಾಣಿಕ ಆದಾಯ ಗಳಿಸುವ ಮೂಲಕ ಈ ಹಿಂದಿನ ದಾಖಲೆಯನ್ನು ಮೀರಿಸಿದೆ. ಜೊತೆಗೆ ಸರಕ ಸಾಗಾಣೆಯಲ್ಲೂ ವಿಭಾಗ ಉತ್ತಮ ಸಾಧನೆ ಮಾಡಿದ್ದು, ಇತಿಹಾಸದಲ್ಲೇ ಹೆಚ್ಚು ಸರಕು ಸಾಗಾಣೆ ಮಾಡಿದ ಎರಡನೇ ಅತ್ಯುನ್ನತ ಸಾಧನೆ ಆಗಿದೆ ಎಂದು ವಿಭಾಗೀಯ ಮುಖ್ಯಸ್ಥ ಮುದಿತ್​ ಮಿತ್ತಲ್ ಮಾಹಿತಿ ನೀಡಿದ್ದಾರೆ.

ಮುದಿತ್​ ಮಿತ್ತಲ್ ಹೇಳಿದ್ದಿಷ್ಟು 

ಇಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುದಿತ್​ ಮಿತ್ತಲ್, ಟಿಕೆಟ್ ಪರಿಶೀಲನೆ ಮೂಲಕ 9.75 ಕೋಟಿ ರೂ ಆದಾಯ ಗಳಿಸಲಾಗಿದೆ. 11.81 ಕೋಟಿ ರೂ ಪಾರ್ಸೆಲ್ ಆದಾಯ, ಲೀಸ್ ಮೂಲಕ 5.85 ಕೋಟಿ ರೂ ಗಳಿಕೆ ಮಾಡಲಾಗಿದೆ ಎಂದರು.

ಇದನ್ನೂ ಓದಿ: ಈ ವಂದೇ ಭಾರತ್ ರೈಲಿನಲ್ಲಿ ಪುರುಷ ಸಿಬ್ಬಂದಿಯೇ ಇರ್ಲಿಲ್ಲ, ಎಲ್ಲರೂ ಮಹಿಳೆಯರೇ!

ಇನ್ನು ಸರಕು ಚಾಲನೆ ವಿಭಾಗದಿಂದ 900.19 ಕೋಟಿ ಆದಾಯ ಗಳಿಸಲಾಗಿದ್ದು, 10.586 ಮಿಲಿಯನ್ ಟನ್ ಸರಕು ಸಾಗಣೆ ಮಾಡಲಾಗಿದೆ. ಆ ಮೂಲಕ ಇತಿಹಾಸದಲ್ಲೇ ಅತೀ ಹೆಚ್ಚು ಸಾಗಾಟ ಮಾಡುವ ಮೂಲಕ ರೆಲ್ವೆ ವಿಭಾಗದ ಎರಡನೇ ಸಾಧನೆ ಆಗಿದೆ.

ಡಿಜಿಟಲ್ ಟಿಕೆಟ್ ವ್ಯವಸ್ಥೆ

ಕುವೆಂಪುನಗರದಲ್ಲಿ ಹೊಸ ಪಿಆರ್​ಎಸ್​ ಸೌಲಭ್ಯ, ಡಿಜಿಟಲ್ ಟಿಕೆಟ್ ವ್ಯವಸ್ಥೆ ಆರಂಭಿಸಲಾಗಿದೆ. ನಗದು ರಹಿತ ಸೇವೆ ಸೇರಿದಂತೆ ಸ್ಥಳೀಯ ಪ್ರಯಾಣಿಕರಿಗೆ ಸೌಲಭ್ಯ ಹೆಚ್ಚಿಸಲಾಗಿದೆ. ಟ್ರ್ಯಾಕ್, ಸೇತುವೆ, ಪ್ಲಾಟ್‌ಫಾರ್ಮ್ ಅಭಿವೃದ್ಧಿ ಪಡಿಸಲಾಗಿದೆ. ದಾಹಕ, ನಿಷಿದ್ಧ ವಸ್ತು ಪತ್ತೆ ಇಲ್ಲ ಆಗಿಲ್ಲ ಆ ಮೂಲಕ ಭದ್ರತೆಯಲ್ಲಿ ಉತ್ತಮ ದಾಖಲೆ ಮಾಡಿದೆ. 69 ಸಿಬ್ಬಂದಿಗೆ ಅಗ್ನಿಶಾಮಕ ತರಬೇತಿ ನೀಡುವ ಮೂಲಕ ಸುರಕ್ಷತೆಗೆ ಒತ್ತು ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ವಿದ್ಯುತ್ ಕಾಮಗಾರಿಯಲ್ಲಿ ಮಹತ್ವದ ಸಾಧನೆ

91.34 MUರಿಂದ 90.53 MUಗೆ ವಿದ್ಯುತ್ ಬಳಕೆಯಲ್ಲಿ ಇಳಿಕೆ ಆಗಿದೆ. ಸೌರ ಶಕ್ತಿ ಸಾಮರ್ಥ್ಯ 160% ಏರಿಕೆ ಆಗಿದ್ದು, ವಾರ್ಷಿಕ 29 ಲಕ್ಷ ರೂ ಉಳಿತಾಯ ಮಾಡಲಾಗುತ್ತಿದೆ. ಮೂಲ ಸೌಕರ್ಯದಲ್ಲಿ ದೊಡ್ಡ ಸುಧಾರಣೆ ವೈಫಲ್ಯದ ಅಂಕಿಅಂಶ 176ರಿಂದ 75ಕ್ಕೆ ಇಳಿಕೆ ಆಗಿದೆ. ಆ ಮೂಲಕ ಸಕಲೇಶಪುರ-ಸುಬ್ರಮಣ್ಯ ಘಾಟ್ ವಿದ್ಯುತ್ ಕಾಮಗಾರಿಯಲ್ಲಿ ಮಹತ್ವದ ಸಾಧನೆ ಮಾಡಲಾಗಿದೆ. ಪ್ರಯಾಣಿಕ ಸೌಲಭ್ಯಗಳಾದ ಲಿಫ್ಟ್, ಸ್ಟೇಷನ್ ಅಭಿವೃದ್ಧಿ ಪಡಿಸಲಾಗಿದೆ. ಶೂನ್ಯ ವಿದ್ಯುತ್, ಅಪಘಾತ ಶೂನ್ಯ ಅಗ್ನಿ ಅವಘಡಗಳ ಭದ್ರತೆಗೆ ಆದ್ಯತೆ ನೀಡಲಾಗಿದೆ.

ಇದನ್ನೂ ಓದಿ: ಪ್ರಯಾಣಿಕರೇ ಗಮನಿಸಿ: ಫೆಬ್ರವರಿ 16ರಂದು ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ; ಇಲ್ಲಿದೆ ಮಾಹಿತಿ

ಇನ್ನು ನೂರಾರು ಶಸ್ತ್ರಚಿಕಿತ್ಸೆ ಯಶಸ್ವಿಗೊಳಿಸುವ ಮೂಲಕ ಆರೋಗ್ಯ ಸೇವೆಗಳಲ್ಲಿ ಸಾಧನೆ ಮಾಡಲಾಗಿದೆ. 132 ಮಕ್ಕಳ ರಕ್ಷಣೆ, 1.17 ಕೋಟಿ ರೂ ಮೌಲ್ಯದ ವಸ್ತುಗಳನ್ನು ಪ್ರಯಾಣಿಕರಿಗೆ ಹಿಂದಿರುಗಿಸಲಾಗಿದೆ. 88.92 ಕೋಟಿ ರೂ ಹಣಕಾಸು ಉಳಿತಾಯದಿಂದ 53.55% ಏರಿಕೆ ಆಗಿದೆ. QR ಕೋಡ್ ಪಾವತಿ ವ್ಯವಸ್ಥೆ ಪರಿಚಯಿಸಲಾಗಿದೆ. ಸರಕು ಮತ್ತು ಪ್ರಯಾಣಿಕ ಸೇವೆಯಲ್ಲಿ ವಿಶ್ವಾಸಾರ್ಹತೆ ಹೆಚ್ಚಿಸಲಾಗಿದೆ ಎಂದು ಮುದಿತ್​ ಮಿತ್ತಲ್ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ