AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಗಾಯಣದ ಅಂಗಳದಲ್ಲಿ ಹಸಿರು ಕ್ರಾಂತಿ: ಮಣ್ಣಿನೊಂದಿಗೆ ಬೆರೆತು ಪರಿಸರ ಪಾಠ ಕಲಿತ ಚಿಣ್ಣರು!

ಮೈಸೂರಿನ ರಂಗಾಯಣದ ಚಿಣ್ಣರ ಮೇಳದಲ್ಲಿ ಈ ಬಾರಿ ‘ಕೈತೋಟ’ ಎಂಬ ವಿಶೇಷ ಕಾರ್ಯಕ್ರಮದ ಮೂಲಕ ಮಕ್ಕಳು ಮಣ್ಣಿನ ಒಡನಾಟ ಬೆಳೆಸಿಕೊಳ್ಳುವಂತೆ ಮಾಡಲಾಗಿದೆ. ಪರಿಸರದ ಕುರಿತ ಕಾಳಜಿಯ ಕಾರ್ಯಕ್ರಮಕ್ಕೆ ಈಗ ವಿದ್ಯಾರ್ಥಿಗಳು, ಪೋಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ವಿದ್ಯಾರ್ಥಿಯೊಬ್ಬರು ವಿಶಿಷ್ಟ ಅನುಭವವನ್ನು ಹಂಚಿಕೊಂಡಿದ್ದು, ಆ ಮಾಹಿತಿ ಇಲ್ಲಿದೆ.

ರಂಗಾಯಣದ ಅಂಗಳದಲ್ಲಿ ಹಸಿರು ಕ್ರಾಂತಿ: ಮಣ್ಣಿನೊಂದಿಗೆ ಬೆರೆತು ಪರಿಸರ ಪಾಠ ಕಲಿತ ಚಿಣ್ಣರು!
ರಂಗಾಯಣದ ‘ಚಿಣ್ಣರ ಮೇಳ’ದಲ್ಲಿ ‘ಕೈತೋಟ’ ಕಾರ್ಯಕ್ರಮImage Credit source: tv9
ರಾಮ್​, ಮೈಸೂರು
| Edited By: |

Updated on: Apr 24, 2026 | 12:06 PM

Share

ಮೈಸೂರು, ಏಪ್ರಿಲ್ 24: ಸಾಂಸ್ಕೃತಿಕ ನಗರಿ ಮೈಸೂರಿನ (Mysuru) ಕಿರೀಟಪ್ರಾಯವಾದ ರಂಗಾಯಣದ ಅಂಗಳದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ‘ಚಿಣ್ಣರ ಮೇಳ’ ಸಂಭ್ರಮದಿಂದ ಜರುಗುತ್ತಿದೆ. ಆದರೆ, ಈ ಬಾರಿಯ ಮೇಳ ಕೇವಲ ರಂಗಭೂಮಿ, ನಾಟಕ ಮತ್ತು ನೃತ್ಯಕ್ಕೆ ಸೀಮಿತವಾಗದೆ, ಮಕ್ಕಳಿಗೆ ಬದುಕಿನ ಪಾಠವನ್ನು ಕಲಿಸುವ ಮೂಲಕ ಹೊಸ ಆಯಾಮ ಪಡೆದುಕೊಂಡಿದೆ. ವಿಶೇಷವಾಗಿ ‘ಕೈತೋಟ’ ಕಾರ್ಯಕ್ರಮದ ಮೂಲಕ ಮಕ್ಕಳು ಮಣ್ಣಿನ ಒಡನಾಟ ಬೆಳೆಸಿಕೊಂಡಿರುವುದು ವಿಶೇಷವಾಗಿ ಮೂಡಿಬಂದಿದೆ.

ಮಕ್ಕಳ ಮನದಲ್ಲಿ ಹಸಿರು ಬೀಜ

ರಂಗಾಯಣದಲ್ಲಿ ಮಕ್ಕಳಿಗೆ ಕೇವಲ ಪುಸ್ತಕದ ಬದನೆಕಾಯಿಯಂತೆ ಪರಿಸರದ ಬಗ್ಗೆ ಪಾಠ ಮಾಡದೆ, ಅವರನ್ನು ನೇರವಾಗಿ ಮಣ್ಣಿನ ಜೊತೆ ಬೆರೆಸುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಗಿದೆ. ಇದು ಮಕ್ಕಳಿಗೆ ಕೇವಲ ಆಟ ಮತ್ತು ಮನರಂಜನೆ ಮಾತ್ರವಲ್ಲದೆ, ಭವಿಷ್ಯದ ಭೂಮಿಯನ್ನು ರಕ್ಷಿಸುವ ಬೀಜಗಳನ್ನು ಬಿತ್ತುವ ಮಹತ್ವದ ಕಾರ್ಯವಾಗಿದೆ ಎಂದು ಜೇನುಮನೆ ತಂಡ-5ರ ವಿದ್ಯಾರ್ಥಿ ನಿಲಯ್ ನಂದನ್ ತನ್ನ ಅನುಭವವನ್ನು ಹಂಚಿಕೊಂಡಿದ್ದಾನೆ.

ಕೈ ಕೆಸರಾದರೆ ಬಾಯಿ ಮೊಸರು – ಪ್ರಾಯೋಗಿಕ ಪಾಠ

‘ರಂಗಾಯಣದ ಆವರಣದಲ್ಲಿ ಚಿಣ್ಣರು ಬರಿಗೈಯಲ್ಲಿ ಮಣ್ಣು ಅಗೆದು, ಗಿಡಗಳನ್ನು ನೆಟ್ಟು, ಅದಕ್ಕೆ ನೀರೆರೆಯುವ ಮೂಲಕ ಪ್ರಕೃತಿಯ ಜೊತೆ ಒಂದು ಅವಿನಾಭಾವ ಸಂಬಂಧವನ್ನು ಬೆಳೆಸಿಕೊಂಡಿದ್ದಾರೆ. ಬೀಜ ಬಿತ್ತನೆಯಿಂದ ಹಿಡಿದು ಗಿಡದ ಆರೈಕೆಯವರೆಗೆ ನಮಗೆ ಸಂಪೂರ್ಣ ಮಾಹಿತಿ ನೀಡಲಾಯಿತು’ ಎಂದು ನಿಲಯ್ ನಂದನ್ ವಿವರಿಸಿದ್ದಾನೆ. ‘ಹಸಿರೇ ಉಸಿರು’ ಎಂಬ ಮಾತನ್ನು ಮಕ್ಕಳು ಕೃತಿಯಲ್ಲಿ ಮಾಡಿ ತೋರಿಸಿದ್ದು ನಮಗೂ ಖುಷಿ ಕೊಟ್ಟಿದೆ ಎಂದು ಅವನು ಅಭಿಪ್ರಾಯಪಟ್ಟಿದ್ದಾನೆ. ಪ್ರತಿ ಗಿಡವೂ ನಮ್ಮ ಉಸಿರಿನ ಸಹಚರ ಎಂಬ ಅರಿವು ಈ ಕಾರ್ಯಕ್ರಮದ ಮೂಲಕ ಮಕ್ಕಳಲ್ಲಿ ಮೂಡಿದೆ.

ಜವಾಬ್ದಾರಿಯುತ ನಾಗರಿಕರತ್ತ ಹೆಜ್ಜೆ

ಮಕ್ಕಳಲ್ಲಿ ಕಂಡ ಸಂತೋಷ, ಕೈಗಳಲ್ಲಿ ಕಂಡ ಶ್ರಮ ಮತ್ತು ಮನದಲ್ಲಿ ಮೂಡಿದ ಜಾಗೃತಿ ‘All These Together Painted A Beautiful Picture Of Hope’. ಇಂತಹ ಅನುಭವಗಳು ಮಕ್ಕಳನ್ನು ಕೇವಲ ವಿದ್ಯಾರ್ಥಿಗಳನ್ನಾಗಿಸದೆ, ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಸಂಘಟಕರಿಗೆ ಮೆಚ್ಚುಗೆ

ಇಂತಹ ಒಂದು ದೂರದೃಷ್ಟಿಯ ಕಾರ್ಯಕ್ರಮವನ್ನು ರೂಪಿಸಿದ ರಂಗಾಯಣದ ನಿರ್ದೇಶಕರಾದ ಸತೀಶ್ ಅವರ ನಾಯಕತ್ವ ಸ್ತುತ್ಯಾರ್ಹ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಜೇನುಮನೆ ತಂಡದ ಮೆಂಟರ್ ಕೌಶಿಕ್ ಅವರ ಕಾರ್ಯವೈಖರಿಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಕೈತೋಟ ಕಾರ್ಯಕ್ರಮವು ಕೇವಲ ಒಂದು ಚಟುವಟಿಕೆಯಾಗದೆ ಪರಿಸರ ಪ್ರೇಮದ ಸುಂದರ ಆರಂಭವಾಗಿತ್ತು. ರಂಗಾಯಣದ ಈ ಪರಿಸರ ಪೂರಕ ಹೆಜ್ಜೆ ಇಡೀ ಸಮಾಜಕ್ಕೆ ಮಾದರಿಯಾಗಲಿ ಎಂಬ ಆಶಯ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!