AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ರಸ್ತೆ ರಾದ್ಧಾಂತ: ರಸ್ತೆಗೆ ಸಿದ್ದರಾಮಯ್ಯ ಹೆಸರಿಡಲು ಸಂಸದ ಯದುವೀರ್ ವಿರೋಧ

ಮೈಸೂರಿನಲ್ಲಿ ರಸ್ತೆ ರಾದ್ಧಾಂತ ಮುಂದುವರಿದೆ. ಮೈಸೂರಿನ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ಪ್ರಸ್ತಾವಕ್ಕೆ ಬಿಜೆಪಿ ಸಂಸದ ಯದುವೀರ್ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ರಸ್ತೆಗೆ ಐತಿಹಾಸಿಕವಾಗಿ ಪ್ರಿನ್ಸೆಸ್ ರಸ್ತೆ ಎಂಬ ಹೆಸರಿದೆ ಎಂದು ಯದುವೀರ್ ಟ್ವೀಟ್ ಮಾಡುವ ಮೂಲಕ ದಾಖಲೆಗಳನ್ನು ಹಂಚಿಕೊಂಡಿದ್ದಾರೆ.

ಮೈಸೂರಿನಲ್ಲಿ ರಸ್ತೆ ರಾದ್ಧಾಂತ: ರಸ್ತೆಗೆ ಸಿದ್ದರಾಮಯ್ಯ ಹೆಸರಿಡಲು ಸಂಸದ ಯದುವೀರ್ ವಿರೋಧ
ಮೈಸೂರಿನಲ್ಲಿ ರಸ್ತೆ ರಾದ್ಧಾಂತ: ರಸ್ತೆಗೆ ಸಿದ್ದರಾಮಯ್ಯ ಹೆಸರಿಡಲು ಸಂಸದ ಯದುವೀರ್ ವಿರೋಧ
ರಾಮ್​, ಮೈಸೂರು
| Edited By: |

Updated on: Jan 02, 2025 | 4:04 PM

Share

ಮೈಸೂರು, ಜನವರಿ 02: ಮುಡಾ ನಿವೇಶನ ಪ್ರಕರಣ ಮರೆಯಾಗುತ್ತಿದ್ದಂತೆ ಸಿದ್ದರಾಮಯ್ಯ (Siddaramaiah) ಆರೋಗ್ಯ ಮಾರ್ಗ  ರಸ್ತೆ ನಾಮಕರಣ ವಿವಾದ ಮುನ್ನಲೆಗೆ ಬಂದಿದೆ. ಪ್ರಿನ್ಸಸ್ ರಸ್ತೆಗೆ ದಾಖಲೆ ಇಲ್ಲವೆಂದು ಕಾಂಗ್ರೆಸ್ ಮುಖಂಡರು ವಾದಿಸುತ್ತಿದ್ದಾರೆ. ಆದರೆ ಇದೀಗ ಪ್ರಿನ್ಸೆಸ್ ರಸ್ತೆ ಎಂಬುದಕ್ಕೆ ದಾಖಲೆಗಳಿವೆ ಎಂದು ಮ್ಯಾಪ್, ಪತ್ರ ವ್ಯವಹಾರದ ದಾಖಲೆಗಳನ್ನು ಹಂಚಿಕೊಳ್ಳುವ ಮೂಲಕ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವುದನ್ನು ಬಿಜೆಪಿ ಸಂಸದ ಯದುವೀರ್ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಯದುವೀರ್, ಕೆಆರ್‌ಎಸ್ ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖಗಳಿಲ್ಲ ಎಂದು ಹೇಳುತ್ತಿರುವ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರೇ, ಈ ದಾಖಲೆಗಳನ್ನೊಮ್ಮೆ ನೋಡಿ ಎಂದಿದ್ದಾರೆ.

ಯದುವೀರ್ ಟ್ವೀಟ್​

  • ಮೈಸೂರು ಸಂಸ್ಥಾನದ ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್​ರವರ ದೂರದ ಸಂಬಂಧಿಯೊಬ್ಬರು ಪ್ರಿನ್ಸೆಸ್ ರಸ್ತೆಯಲ್ಲಿ ವಾಸವಿದ್ದರು, ಅವರು ಬರೆದಿರುವಂತಹ at post ಪತ್ರಗಳ ವಿಳಾಸದಲ್ಲಿ ‘ಪ್ರಿನ್ಸೆಸ್ ರಸ್ತೆ’ಯ ಹೆಸರು ಬಳಸಲಾಗಿದೆ.
  • ಕೇಂದ್ರ ಸರ್ಕಾರದ ಭಾರತದ ಮ್ಯಾಪಿಂಗ್ ಮತ್ತು ಸಮೀಕ್ಷೆಯ ಉಸ್ತುವಾರಿ ಹೊಂದಿರುವ ಸರ್ಕಾರಿ ಇಲಾಖೆಯವರ ಮೈಸೂರು ಟೂರ್ ಮ್ಯಾಪ್, ಗೈಡ್​ನಲ್ಲಿರುವ ಮೈಸೂರಿನ ನಕ್ಷೆಯಲ್ಲಿ ‘ಪ್ರಿನ್ಸೆಸ್ ರಸ್ತೆ’ಯನ್ನು ಗುರುತಿಸಿ ಹೆಸರಿಸಲಾಗಿದೆ.
  • ಅಧಿಕೃತವಾಗಿ 1921ರಲ್ಲಿ ಮೈಸೂರು ನಗರಾಭಿವೃದ್ಧಿ ವಿಶ್ವಸ್ಥ ಮಂಡಳಿಯು ಇದೇ ರಸ್ತೆಗೆ ಪ್ರಿನ್ಸೆಸ್ ರಸ್ತೆ’ ಎಂದು ನಾಮಕರಣ ಮಾಡಿರುವುದಕ್ಕೆ ದಾಖಲೆ ಇದೆ.

ಈ ರಸ್ತೆಗೆ ಮರುನಾಮಕರಣದ ಹೆಸರಿನಲ್ಲಿ ಗೊಂದಲ ಸೃಷ್ಟಿಸುವ ಬದಲು, ಅದರ ಮೂಲಗಳನ್ನು ಪರಿಶೀಲಿಸಿ. ಅಂದಿನ ರಾಜಮನೆತನ ಸಮಾಜಕ್ಕೆ ಕೊಡುಗೆ ನೀಡಿರುವುದನ್ನು ಗುರುತಿಸಿ ಗೌರವಿಸಬೇಕು. ಕಾಲಕಾಲಕ್ಕೂ ಅವರ ಸೇವೆಗಳು ಶಾಶ್ವತವಾಗಿಡುವುದು ಮತ್ತು ಮುಂದಿನ ಪೀಳಿಗೆಗೆ ಅದನ್ನು ಪರಿಚಯಿಸುವುದು ಪಾಲಿಕೆ ಮತ್ತು ಸರ್ಕಾರಗಳ ಜವಾಬ್ದಾರಿ ಎಂದು ಕಿಡಿಕಾರಿದ್ದಾರೆ.

ಕೋರ್ಟ್ ಇದ್ದೇ ಇದೆ, ಅಲ್ಲೇ ತೀರ್ಮಾನ ಆಗಲಿ: ಪ್ರೊ.ನಂಜರಾಜೇ ಅರಸ್

ಇನ್ನು ಈ ಬಗ್ಗೆ ಪಾಲಿಕೆ ಆಯುಕ್ತರ ಭೇಟಿ ಬಳಿಕ ಪ್ರೊ.ನಂಜರಾಜೇ ಅರಸ್ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ನನ್ನ ಹೆಸರು ಆ ರಸ್ತೆಗೆ ಬೇಡ ಅನ್ನೋ ನಂಬಿಕೆ ಇದೆ. ಸಿದ್ದರಾಮಯ್ಯ ಹೆಸರನ್ನು ಕೆಲ ದನಗಳು ಬೀದಿಗೆ ತಂದಿದ್ದಾರೆ. ಹಾದಿ ಬೀದಿಯಲ್ಲಿ ಸಿದ್ದರಾಮಯ್ಯರ ಹೆಸರು ಹಾಳು ಮಾಡುತ್ತಿದ್ದಾರೆ. ಇಲ್ಲದಿದ್ದರೆ ಕೋರ್ಟ್ ಇದ್ದೇ ಇದೆ, ಅಲ್ಲೇ ತೀರ್ಮಾನ ಆಗಲಿ ಎಂದಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಮುಂದುವರಿದ ರಸ್ತೆ ರಾದ್ಧಾಂತ: ರಾತ್ರೋರಾತ್ರಿ ಪ್ರಿನ್ಸಸ್ ರಸ್ತೆಯ ಸ್ಟಿಕ್ಕರ್ ತೆರವು

ಪ್ರಿನ್ಸೆಸ್ ರಸ್ತೆ ಕುರಿತು ಪಾಲಿಕೆ ಆಯುಕ್ತರಿಗೆ ದಾಖಲೆ ಕೊಟ್ಟಿದ್ದೇವೆ. ಪಾಲಿಕೆ ಅಧಿಕಾರಿಗಳು ಅವರ ವ್ಯಾಪ್ತಿಯಲ್ಲಿ ಕೆಲಸ ಮಾಡಬೇಕು. ಯಾರನ್ನೋ ಮೆಚ್ಚಿಸಲು ಕೆಲಸ ಮಾಡಬಾರದು. ಹಿಂದಿನಿಂದಲೂ ಪ್ರಿನ್ಸೆಸ್ ರಸ್ತೆ ಅಂತಾ ಇದೆ, ಇದಕ್ಕೆ ದಾಖಲೆಗಳಿವೆ. ಈ ಬಗ್ಗೆ ಆಯುಕ್ತರ ಗಮನಕ್ಕೂ ತಂದಿದ್ದೇವೆ ಎಂದು ಹೇಳಿದ್ದಾರೆ.

ಉಸ್ತುವಾರಿ ಸಚಿವ ಡಾ.ಮಹದೇವಪ್ಪ ಜೊತೆಗೂ ಮಾತನಾಡಿದ್ದೇನೆ. ಅಭಿಮಾನಿಗಳೆಂದು ಹೇಳಿಕೊಂಡು ಸಿಎಂ ಹೆಸರು ಹಾಳು ಮಾಡಬೇಡಿ. ಖುದ್ದು ಸಿದ್ದರಾಮಯ್ಯ ಜೊತೆಗೆ ಈ ರಸ್ತೆ ಬಗ್ಗೆ ಮಾತನಾಡುತ್ತೇನೆ. ಆಕ್ಷೇಪಣೆ ಸಲ್ಲಿಸಲು ಮೈಸೂರು ಪಾಲಿಕೆ ದಿನಾಂಕ ನಿಗದಿ ಮಾಡಿದೆ. ಅವಧಿ ಮುಗಿದ ಬಳಿಕ ಮೀಟಿಂಗ್ ಮಾಡುತ್ತೇವೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ