AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಆ್ಯಕ್ಸಿಡೆಂಟ್ ಆದವನಿಗೆ ಸಹಾಯ ಮಾಡುತ್ತೇವೆಂದು ಬಂದು ಮೊಬೈಲ್ ಜೊತೆ 80 ಸಾವಿರ ದೋಚಿದ್ರು!

ಮೈಸೂರಿನ ಕಡಕೊಳದಲ್ಲಿ ಅಪಘಾತಕ್ಕೀಡಾದ ಯುವಕನಿಗೆ ಸಹಾಯ ಮಾಡುವ ನೆಪದಲ್ಲಿ ಇಬ್ಬರು ದುಷ್ಕರ್ಮಿಗಳು ಆತನ ಮೊಬೈಲ್‌ನಿಂದ 80,000 ರೂ. ಕದ್ದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಹಣ ಸಿಕ್ಕ ಕೂಡಲೇ ವ್ಯಕ್ತಿಯನ್ನು ಆಸ್ಪತ್ರೆಗಗೂ ದಾಖಲಿಸದೆ ಪರಾರಿಯಾಗಿದ್ದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಕದ್ದ ಹಣ ಮತ್ತು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಮೈಸೂರು: ಆ್ಯಕ್ಸಿಡೆಂಟ್ ಆದವನಿಗೆ ಸಹಾಯ ಮಾಡುತ್ತೇವೆಂದು ಬಂದು ಮೊಬೈಲ್ ಜೊತೆ 80 ಸಾವಿರ ದೋಚಿದ್ರು!
ಅಪಘಾತಕ್ಕೊಳಗಾವನಿಂದ ಹಣ ದೋಚಿದ ರಮೇಶ್ ಮತ್ತು ಮನು
ರಾಮ್​, ಮೈಸೂರು
| Edited By: |

Updated on: Dec 23, 2025 | 10:31 AM

Share

ಮೈಸೂರು, ಡಿಸೆಂಬರ್ 23: ರಸ್ತೆ ಅಪಘಾತಗಳು ಸಂಭವಿಸಿದಾಗ ಸಹಾಯ ಹಸ್ತ ಚಾಚುವುದು ಮಾನವೀಯತೆ. ಹಿಂದೆ ಅಕ್ಷರಸ್ಥರು ಕಡಿಮೆಯಿದ್ದಾಗ ನಡುರಸ್ತೆಯಲ್ಲಿ ಬಿದ್ದವನನ್ನು ಎತ್ತಲೂ ಜನ ಹಿಂದೆ ಮುಂದೆ ನೋಡುತ್ತಿದ್ದರು. ಆದರೀಗ ಕಾಲ ಬದಲಾಗಿದೆ. ಅಪಘಾತಕ್ಕೊಳಗಾದವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುಲು ಸಾಕಷ್ಟು ಜನ ಮುಂದೆ ಬರುತ್ತಾರೆ. ಹೀಗೆ ಸಹಾಯಕ್ಕೆ ಬರುವವರನ್ನೂ ನಂಬಬಾರದೇನೋ ಎಂದೆನಿಸುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ. ಸಹಾಯ ಮಾಡಲು ಮುಂದೆ ಬಂದವರು ಅಪಘಾತವಾಗಿ ಬಿದ್ದವನಿಂದಲೇ ಸಾವಿರಾರು ರೂ. ದೋಚಿದ್ದು, ಮಾಹಿತಿ ತಿಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಆಸ್ಪತ್ರೆಗೆ ಸೇರಿಸುವ ನೆಪದಲ್ಲಿ ಯುಪಿಐನಿಂದ ಹಣ ಟ್ರಾನ್ಸಫರ್

ಮೈಸೂರು ತಾಲೂಕಿನ ಕಡಕೊಳದ ಬಳಿ ನಡೆದ ಅಪಘಾತವೊಂದು ನಡೆದಿದ್ದು, ಮಾನವೀಯತೆಯ ಮುಖವಾಡದ ಹಿಂದಿನ ಕರಾಳ ಮನಸ್ಥಿತಿಯನ್ನು ಬಿಚ್ಚಿಟ್ಟಿದೆ. ಡಿಸೆಂಬರ್ 19ರ ಮಧ್ಯರಾತ್ರಿ, ಕಡಕೋಳದ ಕಾರ್ಖಾನೆಯಲ್ಲಿ ಕೆಲಸ ಮುಗಿಸಿದ ಗಣೇಶ್ ಎಂಬ ಯುವಕ ಮನೆಗೆ ತೆರಳುತ್ತಿದ್ದ ವೇಳೆ ರಸ್ತೆ ಅಪಘಾತಕ್ಕೆ ಒಳಗಾಗಿದ್ದ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಈತನ ಸಹಾಯಕ್ಕೆಂದು ಮಹದೇವಪುರ ನಿವಾಸಿಗಳಾದ ರಮೇಶ್ ಮತ್ತು ಮನು ಬಂದಿದ್ದರು. ಗಣೇಶ್‌ನನ್ನು ಆಸ್ಪತ್ರೆಗೆ ಸೇರಿಸುವ ನೆಪದಲ್ಲಿ ಆತನ ಮೊಬೈಲ್ ವಶಪಡಿಸಿಕೊಂಡ ಪಾಪಿಗಳು, ಆತನ ಅಸಹಾಯಕತೆಯನ್ನೂ ಲೆಕ್ಕಿಸದೆ ಆತನ ಖಾತೆಯಿಂದ ಬರೋಬ್ಬರಿ 80 ಸಾವಿರ ರೂ.ಗಳನ್ನು ವರ್ಗಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ ಮಾನವೀಯತೆ ಮರೆತ ಬೆಂಗಳೂರಿನ ಜನ: ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ

ಆರೋಪಿಗಳನ್ನು ಬಂಧಿಸಿ, ಹಣ ವಸೂಲಿ ಮಾಡಿದ ಪೊಲೀಸರು

ಗಾಯಗೊಂಡ ಸ್ಥಿತಿಯಲ್ಲಿದ್ದ ಗಣೇಶ್‌ನ ಮೊಬೈಲ್ ತೆಗೆದುಕೊಂಡ ಪಾಪಿಗಳು, ಆತನ ಫಿಂಗರ್​ಪ್ರಿಂಟ್ ಬಳಸಿ ಯುಪಿಐ ಮೂಲಕ ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದರು. ಹಣ ವರ್ಗಾವಣೆ ಮುಗಿದ ಕೂಡಲೇ ಗಣೇಶ್‌ನನ್ನು ಆಸ್ಪತ್ರೆಗೂ ಸೇರಿಸದೆ ಅಸಹಯಕ ಸ್ಥಿತಿಯಲ್ಲಿಯೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ವಿಷಯ ತಿಳಿದ ಗಣೇಶ್​ನ ಸಹೋದರ ಅಂಕನಾಯಕ ಸ್ಥಳಕ್ಕೆ ಆಗಮಿಸಿ, ಆತನನ್ನು ಆಸ್ಪತ್ರೆಗೆ ದಾಖಲಿಸಿದ ನಂತರ ಘಟನೆಯ ಕುರಿತು ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ತ್ವರಿತವಾಗಿ ಹಣ ವರ್ಗಾವಣೆ ಮಾಹಿತಿಗಳನ್ನು ಸಂಗ್ರಹಿಸಿ, ರಮೇಶ್ ಮತ್ತು ಮನು ಅವರನ್ನು ಬಂಧಿಸಿದ್ದಾರೆ. ಬಂಧಿತರಿಂದ 80 ಸಾವಿರ ರೂ. ನಗದು ಹಾಗೂ ಎರಡು ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ