AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಇಳಿಕೆ! ಕಾರಣ ಇಲ್ಲಿದೆ

ಪ್ರತಿ ವರ್ಷ ಬೇಸಗೆ ಬರುತ್ತಿದ್ದಂತೆಯೇ ಪ್ರವಾಸಿಗರಿಂದ ಗಿಜಿಗಿಡುತ್ತಿದ್ದ ಮೈಸೂರಿನ ಪ್ರವಾಸಿ ತಾಣಗಳು ಈ ಬಾರಿ ಖಾಲಿ ಖಾಲಿಯಾಗಿವೆ. ಬೇಸಗೆಯ ತಾಪ ಹೆಚ್ಚಾಗಿರುವುದು, ಪರೀಕ್ಷೆಗಳು ಇನ್ನೂ ಮುಗಿಯದಿರುವುದು ಸೇರಿದಂತೆ ಹಲವು ಕಾರಣಗಳು ಮೈಸೂರಿನ ಪ್ರವಾಸಿಗರ ಸಂಖ್ಯೆ ಇಳಿಕೆಗೆ ಕಾರಣವಾಗಿದೆ. ಪ್ರವಾಸಿಗರ ಕುಸಿತಕ್ಕೆ ಇನ್ನೂ ಏನೇನು ಅಂಶಗಳು ಕಾರಣವಾಗಿವೆ ಎಂಬುದು ಇಲ್ಲಿದೆ.

ಮೈಸೂರಿನಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಇಳಿಕೆ! ಕಾರಣ ಇಲ್ಲಿದೆ
ಮೈಸೂರು ಅರಮನೆ
ಗಣಪತಿ ಶರ್ಮಾ
|

Updated on: Mar 25, 2024 | 8:14 AM

Share

ಮೈಸೂರು, ಮಾರ್ಚ್ 25: ಸಾಮಾನ್ಯವಾಗಿ ಏಪ್ರಿಲ್ – ಮೇ ತಿಂಗಳಲ್ಲಿ ಶಾಲೆ ಮಕ್ಕಳ ಬೇಸಗೆ ರಜೆ ಮತ್ತು ಇತರ ರಜೆಗಳ ಕಾರಣಗಳಿಂದ ಮೈಸೂರಿಗೆ (Mysuru) ಹರಿದು ಬರುತ್ತಿದ್ದ ಪ್ರವಾಸಿಗರ (Tourists) ಪ್ರವಾಹ ಈ ವರ್ಷ ಕಡಿಮೆಯಾಗಿದೆ. ಈ ವರ್ಷ ಪ್ರವಾಸಿಗರ ಸಂಖ್ಯೆಯಲ್ಲಿ ಶೇ 50ರಷ್ಟು ಕುಸಿತವಾಗಿರುವ ಬಗ್ಗೆ ವರದಿಯಾಗಿದೆ. ಸಾಮಾನ್ಯವಾಗಿ ಮಾರ್ಚ್‌ನಲ್ಲಿ ಮಕ್ಕಳ ಬೋರ್ಡ್ ಪರೀಕ್ಷೆಗಳು ಮುಗಿದ ತಕ್ಷಣ ಪ್ರವಾಸಿಗರು ಮೈಸೂರು ಮತ್ತು ಹತ್ತಿರದ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಆದಾಗ್ಯೂ, ಹಿಂದಿನ ವರ್ಷಗಳಿಗೆ ಹೋಲಿಸಿದರೆ ಮೈಸೂರಿಗೆ ಮತ್ತು ಸಮೀಪದ ಪ್ರವಾಸಿ ತಾಣಗಳಿಗೆ ಬುಕಿಂಗ್​ಗಳು ಗಣನೀಯವಾಗಿ ಕುಸಿತ ಕಂಡಿದೆ ಎಂದು ಟೂರ್ ಆಪರೇಟರ್‌ಗಳು ತಿಳಿಸಿದ್ದಾರೆ.

ಪ್ರವಾಸಿಗರ ಸಂಖ್ಯೆ ಇಳಿಕೆಗೆ ಕಾರಣವೇನು?

ಬೇಸಗೆಯ ತಾಪ ಹೆಚ್ಚಾಗಿರುವುದು ಮತ್ತು ಮುಂಬರುವ ಲೋಕಸಭೆ ಚುನಾವಣೆಯೇ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆಗೆ ಕಾರಣ ಎಂದು ಟೂರ್ ಆಪರೇಟರ್​ಗಳು ಅಭಿಪ್ರಾಯಪಟ್ಟಿದ್ದಾರೆ. ಅಷ್ಟೇ ಅಲ್ಲದೆ ಈ ವರ್ಷ ಬೋರ್ಡ್​ ಪರೀಕ್ಷೆ ಸಂಬಂಧ ಉಂಟಾಗಿದ್ದ ಗೊಂದಲದ ಕಾರಣ ತಡವಾಗಿ ಈಗ ಪರೀಕ್ಷೆಗಳು ನಡೆಯುತ್ತಿವೆ. ಹಾಗಾಗಿ, ಪೋಷಕರು ಪ್ರವಾಸದ ಯೋಜನೆಗಳನ್ನು ಮುಂದೂಡುತ್ತಿದ್ದಾರೆ.

ಮತ್ತೊಂದೆಡೆ, ಪರೀಕ್ಷೆಗಳು ಮುಗಿದ ನಂತರವೂ ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯೋಗಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ. ಜಿಲ್ಲಾ ಚುನಾವಣಾ ಕಚೇರಿಯ ಅನುಮತಿಯಿಲ್ಲದೆ ಅವರು ಭಾನುವಾರವೂ ತಮ್ಮ ಕೇಂದ್ರ ಕಚೇರಿಯನ್ನು ಬಿಡುವಂತಿಲ್ಲ. ಅಲ್ಲದೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆ ತಡೆಯಲು ಚುನಾವಣಾ ಅಧಿಕಾರಿಗಳು ಎಲ್ಲೆಡೆ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿರುವ ಕಾರಣ ಪ್ರವಾಸಿಗರು ಭೇಟಿ ನೀಡಲು ನಿರಾಕರಿಸುತ್ತಿದ್ದಾರೆ.

ಚಾಮುಂಡಿ ಬೆಟ್ಟಕ್ಕಿಲ್ಲ ಸಮಸ್ಯೆ

ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆಯಾದರೂ ಚಾಮುಂಡಿ ಬೆಟ್ಟಕ್ಕೆ ಬರುವವರ ಸಂಖ್ಯೆಯಲ್ಲಿ ಇಳಿಕೆಯಾಗಿಲ್ಲ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಆದರೆ, ಇತರ ಪ್ರವಾಸಿ ಕೇಂದ್ರಗಳಾದ ಮೃಗಾಲಯ, ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟು, ಕಾರಂಜಿ ಕೆರೆ, ರಂಗನತಿಟ್ಟು ಪಕ್ಷಿಧಾಮ, ಶ್ರೀರಂಗಪಟ್ಟಣ, ಮೇಲುಕೋಟೆ, ಟಿಪ್ಪು ಅರಮನೆ, ನಿಮಿಷಾಂಬ ಸೇರಿದಂತೆ ಮೈಸೂರಿನ ಎಲ್ಲಾ ಪ್ರವಾಸಿ ತಾಣಗಳ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿದೆ.

ಇದನ್ನೂ ಓದಿ: ಕಬಿನಿ ಜಲಾಶಯದಿಂದ ನದಿಗೆ 1000 ಕ್ಯೂಸೆಕ್ ನೀರು ಬಿಡುಗಡೆ: ಎಲ್ಲಿಗೆ ಹರಿಯುತ್ತಿದ್ದಾಳೆ ಕಪಿಲೆ?

ಮೈಸೂರು ಅರಮನೆಗೆ ಸಾಮಾನ್ಯವಾಗಿ ಪ್ರತಿನಿತ್ಯ 5,000 ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ, ಈ ವಾರಾಂತ್ಯದಲ್ಲಿ ಭೇಟಿ ನೀಡಿದವರ ಸಂಖ್ಯೆ ಕೇವಲ 2,500 ಇತ್ತು. ಈಗ ಕೇವಲ ಶೇ 30 ರಷ್ಟು ಹೋಟೆಲ್ ಕೊಠಡಿಗಳು ಮಾತ್ರ ಬುಕ್ ಆಗಿವೆ. ಶೇ 70 ರಷ್ಟು ಕೊಠಡಿಗಳು ಖಾಲಿ ಇವೆ ಎಂದು ಪ್ರವಾಸೋದ್ಯಮ ಕ್ಷೇತ್ರದ ಮೂಲಗಳನ್ನು ವರದಿ ಉಲ್ಲೇಖಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!