AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿಗಳನ್ನು ಬಂದ್​ ಮಾಡಿ, ನಗರವನ್ನಲ್ಲ; ವೀಕೆಂಡ್​ ಕರ್ಫ್ಯೂ ಜಾರಿಗೆ ವರ್ತಕರು, ವಿವಿಧ ಸಂಘ ಸಂಸ್ಥೆಗಳ ವಿರೋಧ

ಸಾಂಸ್ಕೃತಿಕ ನಗರಿ ಮೈಸೂರಿನ ವಿವಿಧ ಸಂಘ ಸಂಸ್ಥೆಗಳು ಈ ಅಭಿಯಾನದಲ್ಲಿ ಕೈ ಜೋಡಿಸಿದ್ದು, ವೀಕೆಂಡ್ ಕರ್ಫ್ಯೂ ಪಾಲನೆಗೆ ಸಹಕಾರ ನೀಡದೇ ಇರಲು ನಿರ್ಧರಿಸಿದ್ದಾರೆ. ಸೋಂಕು ಹರಡದಂತೆ ಎಚ್ಚರಿಕೆ ವಹಿಸಲು ಗಡಿಗಳನ್ನು ಬಂದ್ ಮಾಡಿ‌ ಆದರೆ ನಗರವನ್ನು ಬಂದ್ ಮಾಡಬೇಡಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಗಡಿಗಳನ್ನು ಬಂದ್​ ಮಾಡಿ, ನಗರವನ್ನಲ್ಲ; ವೀಕೆಂಡ್​ ಕರ್ಫ್ಯೂ ಜಾರಿಗೆ ವರ್ತಕರು, ವಿವಿಧ ಸಂಘ ಸಂಸ್ಥೆಗಳ ವಿರೋಧ
ಮೈಸೂರಿನಲ್ಲಿ ಪೋಸ್ಟರ್ ಅಭಿಯಾನ
TV9 Web
| Edited By: |

Updated on: Aug 07, 2021 | 7:12 AM

Share

ಮೈಸೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗುತ್ತಿರುವುದರಿಂದ ಸೋಂಕು ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ಕೆಲ ಜಿಲ್ಲೆಗಳಿಗೆ ಅನ್ವಯವಾಗುವಂತೆ ವೀಕೆಂಡ್ ಕರ್ಫ್ಯೂ ಹಾಗೂ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ನೈಟ್ ಕರ್ಫ್ಯೂ ಘೋಷಿಸಿದೆ. ಆ ಪ್ರಕಾರವಾಗಿ ಇಂದಿನಿಂದಲೇ (ಆಗಸ್ಟ್ 07, ಶನಿವಾರ) ವೀಕೆಂಡ್ ಕರ್ಫ್ಯೂ ಪಾಲಿಸಬೇಕಾಗಿದೆ. ಆದರೆ, ಮೈಸೂರಿನಲ್ಲಿ ರಾಜ್ಯ ಸರ್ಕಾರದ ಸದರಿ ಆದೇಶದ ವಿರುದ್ಧ ವರ್ತಕರು, ಹೋಟೆಲ್ ಮಾಲೀಕರ ಸಂಘ ಹಾಗೂ ವಿವಿಧ ಸಂಘಸಂಸ್ಥೆಗಳು ಧ್ವನಿಯೆತ್ತಿದ್ದು, ಗಡಿಗಳನ್ನು ಬಂದ್ ಮಾಡಿ‌, ನಗರವನ್ನು ಬಂದ್ ಮಾಡಬೇಡಿ ಎಂದು ಪೋಸ್ಟರ್ ಅಭಿಯಾನ ಆರಂಭಿಸಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನ ವಿವಿಧ ಸಂಘ ಸಂಸ್ಥೆಗಳು ಈ ಅಭಿಯಾನದಲ್ಲಿ ಕೈ ಜೋಡಿಸಿದ್ದು, ವೀಕೆಂಡ್ ಕರ್ಫ್ಯೂ ಪಾಲನೆಗೆ ಸಹಕಾರ ನೀಡದೇ ಇರಲು ನಿರ್ಧರಿಸಿದ್ದಾರೆ. ಸೋಂಕು ಹರಡದಂತೆ ಎಚ್ಚರಿಕೆ ವಹಿಸಲು ಗಡಿಗಳನ್ನು ಬಂದ್ ಮಾಡಿ‌ ಆದರೆ ನಗರವನ್ನು ಬಂದ್ ಮಾಡಬೇಡಿ ಎಂದು ಅಭಿಪ್ರಾಯಪಟ್ಟಿರುವ ಅವರು ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ವ್ಯಾಪಾರ ವಹಿವಾಟು ಚಟುವಟಿಕೆಗಳನ್ನು ಬಂದ್​ ಮಾಡುವುದರ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ಕೊವಿಡ್‌ ವೀಕೆಂಡ್‌ ಕರ್ಫ್ಯೂ ಜಾರಿ ಬಗ್ಗೆ ಮಾಹಿತಿ ನೀಡಿರುವ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಮೈಸೂರು ಜಿಲ್ಲೆಯಲ್ಲಿ ಸರ್ಕಾರದ ಆದೇಶ ಯಥಾವತ್ತಾಗಿ ಜಾರಿಯಾಗುತ್ತಿದೆ ಎಂದು ಹೇಳಿದ್ದಾರೆ. ಜಿಲ್ಲೆಯಲ್ಲಿ ಇಂದಿನಿಂದ (ಶನಿವಾರ) ಸೋಮವಾರ ಮುಂಜಾನೆ 5ರವರೆಗೂ ಕರ್ಫ್ಯೂ ಇರಲಿದೆ. ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ‌ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗುವುದು. ತರಕಾರಿ ಮಾರಾಟಕ್ಕೆ ಬೆಳಗ್ಗೆ 5ರಿಂದ ಮಧ್ಯಾಹ್ನ 2ರವರೆಗೆ ಅವಕಾಶ ಇರುತ್ತದೆ. ಹೋಟೆಲ್‌ಗಳಲ್ಲಿ ಆಹಾರ ಪಾರ್ಸೆಲ್‌ಗೆ ಮಾತ್ರ ಅನುಮತಿ ನೀಡಲಾಗಿದೆ. ಉಳಿದಂತೆ ಜಿಲ್ಲೆಯಲ್ಲಿ ಎಲ್ಲಾ ವಾಣಿಜ್ಯ ಚಟುವಟಿಕೆ ಬಂದ್ ಆಗಿರಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾಸಿಗರಿಗೆ ಆರ್​ಟಿಪಿಸಿಆರ್​ ವರದಿ ಕಡ್ಡಾಯವಿಲ್ಲ; ಹೊಸ ಆದೇಶ ಹೊರಡಿಸಿದ ಕೊಡಗು ಡಿಸಿ ಚಾರುಲತಾ 

Bengaluru Metro: ರಾತ್ರಿ ಕರ್ಫ್ಯೂ ಹಿನ್ನೆಲೆ; ಮೆಟ್ರೋ ರೈಲು ಕಾರ್ಯನಿರ್ವಹಿಸುವ ಅವಧಿಯಲ್ಲಿ ಬದಲಾವಣೆ

(Mysuru Traders Sellers and many unions oppose imposing Covid 19 weekend curfew in Cities instead they demand to close state Borders)

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು