AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ನಕಲಿ ದಾಖಲೆ ಸೃಷ್ಟಿಸಿ ಮುಡಾ ನಿವೇಶನ ಅಡವಿಟ್ಟು 14 ಕೋಟಿ ಸಾಲ ಪಡೆದ ಭೂಗಳ್ಳರ ವಿರುದ್ಧ ಎಫ್​ಐಆರ್

ಹಾಸನದ ಬ್ಯಾಂಕ್ ಆಫ್ ಬರೋಡಾದಲ್ಲಿ ಮುಡಾ ನಿವೇಶನ ಅಡವಿಟ್ಟು ವಂಚಕರು 14 ಕೋಟಿ ಸಾಲ ಪಡೆದಿರುವ ಘಟನೆ ನಡೆದಿದೆ. ಈ ಸಂಬಂಧ M/S RJDJ ಪ್ರಾಪರ್ಟಿಸ್​​ ಮಾಲೀಕರಾದ ಲಕ್ಷ್ಮೇಗೌಡ, ಶಶಿ, ಜಗದೀಶ್​​​, ನಂಜಪ್ಪ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಮೈಸೂರು: ನಕಲಿ ದಾಖಲೆ ಸೃಷ್ಟಿಸಿ ಮುಡಾ ನಿವೇಶನ ಅಡವಿಟ್ಟು 14 ಕೋಟಿ ಸಾಲ ಪಡೆದ ಭೂಗಳ್ಳರ ವಿರುದ್ಧ ಎಫ್​ಐಆರ್
ಮುಡಾ ನಿವೇಶನ
TV9 Web
| Updated By: ಆಯೇಷಾ ಬಾನು|

Updated on:Nov 10, 2022 | 9:57 AM

Share

ಮೈಸೂರು: ಮುಡಾ(Mysuru Urban Development Authority) ನಿವೇಶನ ಅಡವಿಟ್ಟು ಭೂಗಳ್ಳರು ಹಾಸನದ ಬ್ಯಾಂಕ್ ಆಫ್ ಬರೋಡಾದಲ್ಲಿ(Bank Of Baroda) 14 ಕೋಟಿ ಸಾಲ ಪಡೆದಿರುವ ಘಟನೆಯೊಂದು ಬೆಳಕಿಗೆ ಬಂದಿದೆ. M/S RJDJ ಪ್ರಾಪರ್ಟಿಸ್​​ ಮಾಲೀಕರಾದ ಲಕ್ಷ್ಮೇಗೌಡ, ಶಶಿ, ಜಗದೀಶ್​​​, ನಂಜಪ್ಪ ವಿರುದ್ಧ $14 ಕೋಟಿ ವಂಚನೆ ಆರೋಪ ಕೇಳಿ ಬಂದಿದೆ.

ಮೈಸೂರಿನಲ್ಲಿರುವ ಇಂಡಸ್ಟ್ರಿಯಲ್ ಸಬರ್ಬ್​ 2ನೇ ಹಂತದಲ್ಲಿರುವ ಮುಡಾಗೆ ಸೇರಿದ ಸುಮಾರು 25 ಕೋಟಿ ಬೆಲೆ ಬಾಳುವ ನಿವೇಶನಕ್ಕೆ ನಕಲಿ ದಾಖಲೆ ಸೃಷ್ಟಿಸಿ ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಅಡವಿಟ್ಟ ಭೂಗಳ್ಳರು 14 ಕೋಟಿ ಸಾಲ ಪಡೆದಿದ್ದಾರೆ. ಇನ್ನು ಆರೋಪಿಗಳು ಸಾಲ ಪಡೆದ ಬಳಿಕ ದಾನಪತ್ರವನ್ನೂ ಮಾಡಿದ್ದಾರೆ. ಆರ್.ಟಿ.ಐ.ಕಾರ್ಯಕರ್ತ ನಾಗೇಂದ್ರ ಎಂಬುವವರು ಈ ಪ್ರಕರಣವನ್ನು ಬೆಳಕಿಗೆ ತಂದಿದ್ದು ಮುಡಾ ಆಯುಕ್ತ ದಿನೇಶ್​ ಕುಮಾರ್​ ದೂರು ಆಧರಿಸಿ ಸಾಲ ಪಡೆದವರ ವಿರುದ್ಧ ಮೈಸೂರಿನ ವಿದ್ಯಾರಣ್ಯಪುರಂ ಠಾಣೆಯಲ್ಲಿ FIR ದಾಖಲಾಗಿದೆ.

ಇದನ್ನೂ ಓದಿ: ಏಕಕಾಲದ ಚುನಾವಣೆಯ ಅಂತಿಮ ನಿರ್ಧಾರ ಶಾಸಕಾಂಗಕ್ಕೆ ಬಿಟ್ಟದ್ದು: ಕೇಂದ್ರ ಚುನಾವಣಾ ಆಯೋಗ

ಮೈಸೂರು ನಗರ ಇಂಡಸ್ಟ್ರಿಯಲ್ ಸಬರ್ಬ್ 2ನೇ ಹಂತ ವಿಶ್ವೇಶ್ವರನಗರದ ಶ್ರೀ ಜಯಚಾಮರಾಜೇಂದ್ರ ಪಿಯು ಕಾಲೇಜು, ಶಾರದಾ ವಿದ್ಯಾಮಂದಿರ ಮುಂಭಾಗವಿರುವ ಕೈಗಾರಿಕಾ ನಿವೇಶನ ಸಂಖ್ಯೆ 36/A 285 X 200 ಅಡಿ ವಿಸ್ತೀರ್ಣ (57,000 ಚದರಡಿ) ಅಳತೆಯ ನಿವೇಶನ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರಕ್ಕೆ ಸೇರಿದ ಆಸ್ತಿಯಾಗಿದೆ. ಪ್ರಾಧಿಕಾರದ ದಾಖಲೆಗಳ ಪ್ರಕಾರ ಈ ವರೆಗೆ ಈ ನಿವೇಶನ ಯಾರಿಗೂ ಮಂಜೂರಾಗಿಲ್ಲ. ಹಲವು ಬಾರಿ ಹರಾಜಿಗೆ ಆಹ್ವಾನಿಸಿದರೂ ಪ್ರಕ್ರಿಯೆ ಯಶಸ್ವಿಯಾಗಲಿಲ್ಲ.

ಇದನ್ನೇ ಬಂಡವಾಳ ಮಾಡಿಕೊಂಡ M/S RJDJ ಪ್ರಾಪರ್ಟೀಸ್ ನ ಮಾಲೀಕರಾದ ಲಕ್ಷ್ಮೇಗೌಡ, ಜಗದೀಶ್, ಶಶಿ ಹಾಗೂ ನಂಜಪ್ಪ ಇವರುಗಳು ಸದರಿ ನಿವೇಶನಕ್ಕೆ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಇದೇ ನಕಲಿ ದಾಖಲೆಗಳನ್ನು ಹಾಸನದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಬ್ರಾಂಚ್ ನಲ್ಲಿ ಅಡವಿಟ್ಟು ಬರೋಬರಿ 14 ಕೋಟಿ ಸಾಲ ಪಡೆದಿದ್ದಾರೆ. ದಾಖಲೆಗಳನ್ನು ನಿಯಮಾನುಸಾರ ಪರಿಶೀಲಿಸದ ಬ್ಯಾಂಕ್ ಅಧಿಕಾರಿಗಳು 20-10-2018 ರಲ್ಲಿ ಭಾರೀ ಮೊತ್ತದ ಹಣವನ್ನೇ ಸಾಲವಾಗಿ ಕೊಟ್ಟಿದ್ದಾರೆ.

Published On - 9:57 am, Thu, 10 November 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?