AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮೈಸೂರು ವಿವಿ ಹೆಸರು ಕೆಡುತ್ತಿದೆ; ಪ್ರಾಧ್ಯಾಪಕರಿಬ್ಬರಿಗೂ ನೊಟೀಸ್ ನೀಡಲು ಚಿಂತನೆ

ಮುಂದಿನ ತಿಂಗಳು ನ್ಯಾಕ್ ಕಮಿಟಿ ವಿವಿಗೆ ಭೇಟಿ ಕೊಡುತ್ತಿದೆ. ಈ ಇಬ್ಬರ ಪ್ರಕರಣ ವಿವಿಗೆ ಮುಜುಗರ ತಂದಿದೆ. ಈ ಸಂಬಂಧ ಇಬ್ಬರಿಗು ಕಾರಣ ಕೇಳಿ ನೋಟಿಸ್ ಕೊಡಲಾಗುವುದು ಎಂದು ಮೈಸೂರು ವಿವಿ ಕುಲಸಚಿವ ಶಿವಪ್ಪ ಹೇಳಿಕೆ ನೀಡಿದ್ದಾರೆ.

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮೈಸೂರು ವಿವಿ ಹೆಸರು ಕೆಡುತ್ತಿದೆ; ಪ್ರಾಧ್ಯಾಪಕರಿಬ್ಬರಿಗೂ ನೊಟೀಸ್ ನೀಡಲು ಚಿಂತನೆ
ಅತ್ಯಾಚಾರ ಆರೋಪ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 07, 2021 | 12:07 AM

Share

ಮೈಸೂರು: ಮೈಸೂರು ವಿಶ್ವವಿದ್ಯಾಲಯ ಪ್ರಾಧ್ಯಾಪಕನ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಬ್ಬರಿಗೂ ನೊಟೀಸ್ ನೀಡಲು ವಿವಿ ಚಿಂತನೆ ನಡೆಸಿದೆ. ಇಬ್ಬರ ವೈಯುಕ್ತಿಕ ವಿಚಾರದಲ್ಲಿ ಮೈಸೂರು ವಿಶ್ವವಿದ್ಯಾಲಯ ಹೆಸರು ಕೆಡುತ್ತಿದೆ ಎಂದು ವಿಶ್ವವಿದ್ಯಾಲಯ ಕುಲಸಚಿವ ಶಿವಪ್ಪ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳಲ್ಲಿ ವಿವಿ ಹೆಸರು ನೋಡಿ ಬೇಸರವಾಗುತ್ತಿದೆ. ಮುಂದಿನ ತಿಂಗಳು ನ್ಯಾಕ್ ಕಮಿಟಿ ವಿವಿಗೆ ಭೇಟಿ ಕೊಡುತ್ತಿದೆ. ಈ ಇಬ್ಬರ ಪ್ರಕರಣ ವಿವಿಗೆ ಮುಜುಗರ ತಂದಿದೆ. ಈ ಸಂಬಂಧ ಇಬ್ಬರಿಗು ಕಾರಣ ಕೇಳಿ ನೋಟಿಸ್ ಕೊಡಲಾಗುವುದು ಎಂದು ಮೈಸೂರು ವಿವಿ ಕುಲಸಚಿವ ಶಿವಪ್ಪ ಹೇಳಿಕೆ ನೀಡಿದ್ದಾರೆ.

ಪ್ರಖ್ಯಾತ ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರ ಮೇಲೆ ಸಂಶೋಧನಾ ವಿದ್ಯಾರ್ಥಿನಿ‌ ಮೇಲೆ‌ ಅತ್ಯಾಚಾರಗೈದ ಆರೋಪ ಕೇಳಿಬಂದಿದೆ. ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೋ. ರಾಮಚಂದ್ರ ವಿರುದ್ಧ ಆರೋಪ ಕೇಳಿಬಂದಿದೆ. ಸಂತ್ರಸ್ತೆ ಸಂಶೋಧನಾ ವಿದ್ಯಾರ್ಥಿನಿ ಜಯಲಕ್ಷ್ಮಿ ಪುರಂ ಠಾಣೆಗೆ ದೂರು ಸಲ್ಲಿಸಿದ್ದಾಳೆ. ಸಂತ್ರಸ್ತೆ ರಾಮಚಂದ್ರ ಬಳಿ ಪಿಎಚ್ ಡಿ ಮಾರ್ಗದರ್ಶನ ಪಡೆಯುತ್ತಿದ್ದರು. ವಿದ್ಯಾರ್ಥಿನಿಯನ್ನು ಮನೆಗೆ ಮನೆಗೆ ಪ್ರೊ. ರಾಮಚಂದ್ರ ಕರೆಸಿಕೊಂಡಿದ್ದ. ಈ ವೇಳೆ‌ ಸಂತ್ರಸ್ತೆ ಕೂಗಾಟ, ಚೀರಾಟ ನಡೆಸಿದ್ದಳು. ಇದೇ ಸಂಧರ್ಭಕ್ಕೆ ಮನೆಗೆ ಪ್ರಾಧ್ಯಾಪಕ ರಾಮಚಂದ್ರ ಪತ್ನಿ ಲೋಲಾಕ್ಷಿ ಆಗಮಿಸಿದ್ದರು. ಲೋಲಾಕ್ಷಿ ಅವರು ಸಹ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕಿಯಾಗಿದ್ದಾರೆ. ನಂತರ ಅವರು ಸಂತ್ರಸ್ತೆ ಯುವತಿಯನ್ನು ಹಾಗೂ ತನ್ನ ಪತಿಯನ್ನು ಠಾಣೆಗೆ ಕರೆತಂದು ಪೊಲೀಸರಿಗೆ ಒಪ್ಪಿಸಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ನಾನು ಇಂದು ಕಾಲೇಜಿಗೆ ಹೋಗಿದ್ದೆ. ಸ್ಟಡಿ ಮೆಟಿರಿಯಲ್ ತೆಗೆದುಕೊಳ್ಳುವ ಸಲುವಾಗಿ ಮನೆಗೆ ಬಂದೆ. ಆಗ ಮನೆಯಲ್ಲಿ ಕೂಗಾಟ ಕೇಳಿಸುತ್ತಿತ್ತು. ಬಾಗಿಲು ತೆಗೆಸಿದಾಗ ಸಂತ್ರಸ್ತೆ ನನ್ನ ಕಾಲು ಹಿಡಿದುಕೊಂಡಳು. ನನ್ನ ಮೇಲೆ ಅತ್ಯಾಚಾರವಾಗಿದೆ ಅಂತ ಹೇಳಿಕೊಂಡಳು. ಕೂಡಲೇ ಇಬ್ಬರನ್ನು ಪೋಲಿಸ್ ಠಾಣೆಗೆ ಕರೆದುಕೊಂಡು ಬಂದಿದ್ದೇನೆ. ನನ್ನ ಗಂಡ ಡಿಪಾರ್ಟ್ಮೆಂಟ್ ನಲ್ಲೇ ವಿದ್ಯಾರ್ಥಿನಿಯರ ಜೊತೆ ಸಂಬಂಧ ಇಟ್ಟುಕೊಂಡಿದ್ದ. ಇದೆಲ್ಲದರ ಬಗ್ಗೆ ಮೊದಲಿನಿಂದಲೂ ನನಗೆ ಅನುಮಾನವಿತ್ತು. ನನ್ನ ಪತಿ ಹಲವು ವಿದ್ಯಾರ್ಥಿನಿಯರನ್ನು ಬಳಸಿಕೊಂಡಿದ್ದಾನೆ. ಇವತ್ತು ಅದು ಸಾಬೀತಾಗಿದೆ. ಬೇರೆ ಯಾವ ಯುವತಿಯರ ಮೇಲು ಇಂತಹ ದಾಳಿ ನಡೆಯಬಾರದು. ಹೀಗಾಗಿ ನಾನೇ ಮುಂದೆ ನಿಂತು ದೂರು ದಾಖಲಿಸಿದ್ದೇನೆ. ವಿವಿಯ ಕುಲಪತಿ, ಕುಲಸಚಿವರ ಗಮನಕ್ಕೂ ತಂದಿದ್ದೇನೆ’ ಎಂದು ಆರೋಪಿ ಪತ್ನಿ, ಮೈಸೂರು ವಿವಿ ಪ್ರಾಧ್ಯಾಪಕಿ ಡಾ.ಲೋಲಾಕ್ಷಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಮಾರ್ಗದರ್ಶಕ ಪ್ರಾಧ್ಯಾಪಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ; ಪೊಲೀಸರ ವಿಚಾರಣೆ ವೇಳೆ ಉಲ್ಟಾ ಹೊಡೆದ ವಿದ್ಯಾರ್ಥಿನಿ

ಅತ್ಯಾಚಾರ ಸಂತ್ರಸ್ತೆಯ ಪೋಷಕರ ಫೋಟೊ ಶೇರ್ ಮಾಡಿದ ರಾಹುಲ್ ವಿರುದ್ಧ ಕ್ರಮಕ್ಕೆ ಎನ್​​​ಸಿಪಿಸಿಆರ್ ಒತ್ತಾಯ

(Mysuru VV Professor Sexual Assaiult on Student Case Notice will be given against Proffessors)

Published On - 4:05 pm, Fri, 6 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು