AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru: ಹಾಫ್ ಹೆಲ್ಮೆಟ್ ಧರಿಸಿ ಮೈಸೂರಿನಲ್ಲಿ ಸಂಚರಿಸುತ್ತಿದ್ದೀರಾ? ಕಾದಿದೆ 500 ರೂ. ದಂಡ

ಮೈಸೂರಿನ ಹಲವೆಡೆ ಮಿಂಚಿನ ಕಾರ್ಯಾಚರಣೆ ನಡೆಸಿರುವ ಪೊಲೀಸರು ಅರ್ಧ ಹೆಲ್ಮೆಟ್ ಧರಿಸಿ ಓಡಾಡುತ್ತಿದ್ದವರಿಗೆ ದಂಡ ವಿಧಿಸಿದ್ದಾರೆ.

Mysuru: ಹಾಫ್ ಹೆಲ್ಮೆಟ್ ಧರಿಸಿ ಮೈಸೂರಿನಲ್ಲಿ ಸಂಚರಿಸುತ್ತಿದ್ದೀರಾ? ಕಾದಿದೆ 500 ರೂ. ದಂಡ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Feb 21, 2023 | 10:17 AM

Share

ಮೈಸೂರು: ಸಂಚಾರ ಪೊಲೀಸರಿಂದ (Traffic Police) ದಂಡ ತಪ್ಪಿಸಿಕೊಳ್ಳುವುದಕ್ಕಾಗಿ ಹೇಗೋ ಒಂದು ಹೆಲ್ಮೆಟ್ (Helmet) ಧರಿಸಿಕೊಂಡು ಹೋದರಾಯಿತು ಎಂದು ಭಾವಿಸಿದ್ದೀರಾ? ಖಂಡಿತಾ ನಿಮ್ಮ ಊಹೆ ತಪ್ಪು. ಅರ್ಧ ಹೆಲ್ಮೆಟ್ ಅಥವಾ ಹಾಫ್ ಹೆಲ್ಮೆಟ್ ಧರಿಸಿಕೊಂಡು ನೀವಿನ್ನು ಮೈಸೂರು (Mysuru) ನಗರದಲ್ಲಿ ಸಂಚರಿಸಿದರೆ 500 ರೂ. ದಂಡ ಪಾವತಿಸಬೇಕಾದೀತು. ಐಎಸ್​ಐ ಚಿಹ್ನೆ ಇಲ್ಲದ ಅರ್ಧ ಹೆಲ್ಮೆಟ್ ಧರಿಸುವವರಿಗೆ 500 ರೂ. ದಂಡ ವಿಧಿಸಲು ಮೈಸೂರು ನಗರ ಸಂಚಾರ ಪೊಲೀಸರು ನಿರ್ಧರಿಸಿದ್ದಾರೆ. ಸೋಮವಾರ ಬೆಳಿಗ್ಗೆ ನಗರದ ಹಲವೆಡೆ ಮಿಂಚಿನ ಕಾರ್ಯಾಚರಣೆ ನಡೆಸಿರುವ ಪೊಲೀಸರು ಅರ್ಧ ಹೆಲ್ಮೆಟ್ ಧರಿಸಿ ಓಡಾಡುತ್ತಿದ್ದವರಿಗೆ ದಂಡ ವಿಧಿಸಿದ್ದಾರೆ. ನಗರದ ದೇವರಾಜ, ಕೃಷ್ಣರಾಜ, ನರಸಿಂಹರಾಜ, ವಿವಿ ಪುರಂ ಹಾಗೂ ಸಿದ್ಧಾರ್ಥನಗರದ ಸಂಚಾರ ಪೊಲೀಸ್ ವಿಭಾಗದ ಇನ್​ಸ್ಪೆಕ್ಟರ್​ಗಳು, ಸಬ್-ಇನ್​ಸ್ಪೆಕ್ಟರ್​​ಗಳು, ಸಹಾಯಕ ಎಸ್​ಐ ಹಾಗೂ ಇತರ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಎಲ್ಲ ಐದು ಠಾಣೆಗಳಲ್ಲಿ ತಲಾ 10 ಪ್ರಕರಣಗಳು ದಾಖಲಾಗಿವೆ.

ಅರ್ಧ ಹೆಲ್ಮೆಟ್​​ ಧರಿಸಿರುವುದನ್ನು ಹೆಲ್ಮೆಟ್​ ರಹಿತ ಚಾಲನೆ ಎಂದೇ ಪರಿಗಣಿಸಲಾಗುತ್ತದೆ. ಇದಕ್ಕೆ 500 ರೂ. ದಂಡ ವಿಧಿಸುತ್ತೇವೆ. ಹಿಂಬದಿ ಸವಾರರಿಗೂ ಇದು ಅನ್ವಯವಾಗುತ್ತದೆ ಎಂದು ಪೊಲೀಸರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಚಿಹ್ನೆ, ಬಿಜೆಪಿಯ ಭರವಸೆಗಳು ರಾರಾಜಿಸುತ್ತಿದ್ದ ಗೋಡೆ ಬರಹಕ್ಕೆ ಕೆಂಪು ಮಸಿ ಬಳಿದ ಮೈಸೂರು ಪಾಲಿಕೆ ಸಿಬ್ಬಂದಿ!

ನಗರ ಪೊಲೀಸ್ ಆಯುಕ್ತ ಬಿ ರಮೇಶ್ ಅವರ ನಿರ್ದೇಶನಕ್ಕೆ ಅನುಸಾರ ಈ ಕಾರ್ಯಾಚರಣೆ ನಡೆಸಲಾಗಿದೆ ಮತ್ತು ನಡೆಸಲಾಗುತ್ತಿದೆ. ಟ್ರಿಪಲ್ ರೈಡಿಂಗ್ ವಿರುದ್ಧವೂ ಕಾರ್ಯಾಚರಣೆ ನಡೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಂಡ ಮಾತ್ರವಲ್ಲದೆ, ಪುನರಾವರ್ತಿತ ಅಪರಾಧದ ಸಂದರ್ಭದಲ್ಲಿ ಸವಾರರ ಪರವಾನಗಿಯನ್ನು ವಶಪಡಿಸಿಕೊಳ್ಳಲಾಗುತ್ತದೆ ಮತ್ತು ಅಮಾನತುಗೊಳಿಸಲು ಶಿಫಾರಸು ಮಾಡಿ ಸಂಬಂಧಿತ ಆರ್​ಟಿಒಗೆ ಕಳುಹಿಸಲಾಗುತ್ತದೆ. ಕೇವಲ ಶೇ 44ರಷ್ಟು ದ್ವಿಚಕ್ರ ವಾಹನ ಸವಾರರು ಮಾತ್ರ ಐಎಸ್​ಐ ಗುರುತು ಹೊಂದಿರುವ ಹೆಲ್ಮೆಟ್‌ಗಳನ್ನು ಬಳಸುತ್ತಾರೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ