AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru: ಹಾಫ್ ಹೆಲ್ಮೆಟ್ ಧರಿಸಿ ಮೈಸೂರಿನಲ್ಲಿ ಸಂಚರಿಸುತ್ತಿದ್ದೀರಾ? ಕಾದಿದೆ 500 ರೂ. ದಂಡ

ಮೈಸೂರಿನ ಹಲವೆಡೆ ಮಿಂಚಿನ ಕಾರ್ಯಾಚರಣೆ ನಡೆಸಿರುವ ಪೊಲೀಸರು ಅರ್ಧ ಹೆಲ್ಮೆಟ್ ಧರಿಸಿ ಓಡಾಡುತ್ತಿದ್ದವರಿಗೆ ದಂಡ ವಿಧಿಸಿದ್ದಾರೆ.

Mysuru: ಹಾಫ್ ಹೆಲ್ಮೆಟ್ ಧರಿಸಿ ಮೈಸೂರಿನಲ್ಲಿ ಸಂಚರಿಸುತ್ತಿದ್ದೀರಾ? ಕಾದಿದೆ 500 ರೂ. ದಂಡ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Feb 21, 2023 | 10:17 AM

Share

ಮೈಸೂರು: ಸಂಚಾರ ಪೊಲೀಸರಿಂದ (Traffic Police) ದಂಡ ತಪ್ಪಿಸಿಕೊಳ್ಳುವುದಕ್ಕಾಗಿ ಹೇಗೋ ಒಂದು ಹೆಲ್ಮೆಟ್ (Helmet) ಧರಿಸಿಕೊಂಡು ಹೋದರಾಯಿತು ಎಂದು ಭಾವಿಸಿದ್ದೀರಾ? ಖಂಡಿತಾ ನಿಮ್ಮ ಊಹೆ ತಪ್ಪು. ಅರ್ಧ ಹೆಲ್ಮೆಟ್ ಅಥವಾ ಹಾಫ್ ಹೆಲ್ಮೆಟ್ ಧರಿಸಿಕೊಂಡು ನೀವಿನ್ನು ಮೈಸೂರು (Mysuru) ನಗರದಲ್ಲಿ ಸಂಚರಿಸಿದರೆ 500 ರೂ. ದಂಡ ಪಾವತಿಸಬೇಕಾದೀತು. ಐಎಸ್​ಐ ಚಿಹ್ನೆ ಇಲ್ಲದ ಅರ್ಧ ಹೆಲ್ಮೆಟ್ ಧರಿಸುವವರಿಗೆ 500 ರೂ. ದಂಡ ವಿಧಿಸಲು ಮೈಸೂರು ನಗರ ಸಂಚಾರ ಪೊಲೀಸರು ನಿರ್ಧರಿಸಿದ್ದಾರೆ. ಸೋಮವಾರ ಬೆಳಿಗ್ಗೆ ನಗರದ ಹಲವೆಡೆ ಮಿಂಚಿನ ಕಾರ್ಯಾಚರಣೆ ನಡೆಸಿರುವ ಪೊಲೀಸರು ಅರ್ಧ ಹೆಲ್ಮೆಟ್ ಧರಿಸಿ ಓಡಾಡುತ್ತಿದ್ದವರಿಗೆ ದಂಡ ವಿಧಿಸಿದ್ದಾರೆ. ನಗರದ ದೇವರಾಜ, ಕೃಷ್ಣರಾಜ, ನರಸಿಂಹರಾಜ, ವಿವಿ ಪುರಂ ಹಾಗೂ ಸಿದ್ಧಾರ್ಥನಗರದ ಸಂಚಾರ ಪೊಲೀಸ್ ವಿಭಾಗದ ಇನ್​ಸ್ಪೆಕ್ಟರ್​ಗಳು, ಸಬ್-ಇನ್​ಸ್ಪೆಕ್ಟರ್​​ಗಳು, ಸಹಾಯಕ ಎಸ್​ಐ ಹಾಗೂ ಇತರ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಎಲ್ಲ ಐದು ಠಾಣೆಗಳಲ್ಲಿ ತಲಾ 10 ಪ್ರಕರಣಗಳು ದಾಖಲಾಗಿವೆ.

ಅರ್ಧ ಹೆಲ್ಮೆಟ್​​ ಧರಿಸಿರುವುದನ್ನು ಹೆಲ್ಮೆಟ್​ ರಹಿತ ಚಾಲನೆ ಎಂದೇ ಪರಿಗಣಿಸಲಾಗುತ್ತದೆ. ಇದಕ್ಕೆ 500 ರೂ. ದಂಡ ವಿಧಿಸುತ್ತೇವೆ. ಹಿಂಬದಿ ಸವಾರರಿಗೂ ಇದು ಅನ್ವಯವಾಗುತ್ತದೆ ಎಂದು ಪೊಲೀಸರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಚಿಹ್ನೆ, ಬಿಜೆಪಿಯ ಭರವಸೆಗಳು ರಾರಾಜಿಸುತ್ತಿದ್ದ ಗೋಡೆ ಬರಹಕ್ಕೆ ಕೆಂಪು ಮಸಿ ಬಳಿದ ಮೈಸೂರು ಪಾಲಿಕೆ ಸಿಬ್ಬಂದಿ!

ನಗರ ಪೊಲೀಸ್ ಆಯುಕ್ತ ಬಿ ರಮೇಶ್ ಅವರ ನಿರ್ದೇಶನಕ್ಕೆ ಅನುಸಾರ ಈ ಕಾರ್ಯಾಚರಣೆ ನಡೆಸಲಾಗಿದೆ ಮತ್ತು ನಡೆಸಲಾಗುತ್ತಿದೆ. ಟ್ರಿಪಲ್ ರೈಡಿಂಗ್ ವಿರುದ್ಧವೂ ಕಾರ್ಯಾಚರಣೆ ನಡೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಂಡ ಮಾತ್ರವಲ್ಲದೆ, ಪುನರಾವರ್ತಿತ ಅಪರಾಧದ ಸಂದರ್ಭದಲ್ಲಿ ಸವಾರರ ಪರವಾನಗಿಯನ್ನು ವಶಪಡಿಸಿಕೊಳ್ಳಲಾಗುತ್ತದೆ ಮತ್ತು ಅಮಾನತುಗೊಳಿಸಲು ಶಿಫಾರಸು ಮಾಡಿ ಸಂಬಂಧಿತ ಆರ್​ಟಿಒಗೆ ಕಳುಹಿಸಲಾಗುತ್ತದೆ. ಕೇವಲ ಶೇ 44ರಷ್ಟು ದ್ವಿಚಕ್ರ ವಾಹನ ಸವಾರರು ಮಾತ್ರ ಐಎಸ್​ಐ ಗುರುತು ಹೊಂದಿರುವ ಹೆಲ್ಮೆಟ್‌ಗಳನ್ನು ಬಳಸುತ್ತಾರೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್