AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಕೆ’ ಗರ್ಭಿಣಿಯಾಗಲು ತಾನಲ್ಲ ಕಾರಣ ಎಂದು ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಯುವಕ!

ಶಾಲಾ ವಿದ್ಯಾರ್ಥಿನಿಯೊಬ್ಬಳನ್ನು ಗರ್ಭಿಣಿ ಮಾಡಿದ ಆರೋಪ ಎದುರಿಸುತ್ತಿದ್ದ ಯುವಕನೊಬ್ಬ, ಆಕೆಯನ್ನು ತಾನು ಬಸಿರು ಮಾಡಿಲ್ಲ ಎಂದು ಪ್ರತಿಪಾದಿಸಿ ವಾಯ್ಸ್ ನೋಟ್ ರೆಕಾರ್ಡ್ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ವಿಲಕ್ಷಣ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಆತನ, ಮೃತದೇಹ ಬೆಟ್ಟದ ತುಂಗಾ ನಾಲೆಯಲ್ಲಿ ಪತ್ತೆಯಾಗಿದೆ.

‘ಆಕೆ’ ಗರ್ಭಿಣಿಯಾಗಲು ತಾನಲ್ಲ ಕಾರಣ ಎಂದು ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಯುವಕ!
ರಾಮು
ರಾಮ್​, ಮೈಸೂರು
| Edited By: |

Updated on: Nov 03, 2025 | 8:59 AM

Share

ಮೈಸೂರು, ನವೆಂಬರ್ 3: ಶಾಲಾ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಆರೋಪ ಎದುರಿಸುತ್ತಿದ್ದ ರಾಮು ಎಂಬ 27 ವರ್ಷ ವಯಸ್ಸಿನ ಯುವಕ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು (Mysuru) ಜಿಲ್ಲೆಯ ಪಿರಿಯಾಪಟ್ಟಣ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ, ಸಾವಿಗೆ ಶರಣಾಗುವುದಕ್ಕೂ ಮುನ್ನ ವಾಯ್ಸ್ ನೋಟ್ ರೆಕಾರ್ಡ್ ಮಾಡಿಟ್ಟಿದ್ದು, ತನ್ನ ಮೇಲಿನ ಆರೋಪಗಳೆಲ್ಲ ಸುಳ್ಳು. ಎಲ್ಲದಕ್ಕೂ ಆ ಶಾಲೆಯ ಪಿಟಿ ಮಾಸ್ತರೇ ಕಾರಣ. ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು ಯಾರಿಂದ ಎಂಬುದನ್ನು ಡಿಎನ್​​ಎ ಟೆಸ್ಟ್ ಮೂಲಕ ಪತ್ತೆಹಚ್ಚಬೇಕು ಎಂದು ಹೇಳಿಕೊಂಡಿದ್ದಾನೆ.

ಯುವಕನ ವಾಯ್ಸ್ ನೋಟ್​ನಲ್ಲೇನಿದೆ?

ಆತ್ಮಹತ್ಯೆಗೂ ಮುನ್ನ ವಾಯ್ಸ್ ನೋಟ್ ಮಾಡಿಟ್ಟಿರುವ ಯುವಕ, ವಿದ್ಯಾರ್ಥಿನಿ ಗರ್ಭಿಣಿಯಾಗುವುದಕ್ಕೆ ನಾನು ಕಾರಣ ಅಲ್ಲ. ನನಗೂ ಆಕೆಗೂ ಯಾವುದೇ ಸಂಬಂಧ ಇಲ್ಲ. ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಇದರಿಂದಾಗಿ ನನಗೆ ತಲೆ ಎತ್ತಿ ನಡೆಯಲು ಸಾಧ್ಯವಾಗುತ್ತಿಲ್ಲ, ವೈದ್ಯರು ಬಂದು ಬಾಲಕಿಯ ಆರೋಗ್ಯ ತಪಾಸಣೆ ನಡೆಸಿದ್ದರು. ಆಗ ಬಾಲಕಿ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಶಾಲೆಗೆ ಕಳಂಕ ಬರುತ್ತದೆ ಎಂದು ಅಂತ ಪ್ರಕರಣ ಮುಚ್ಚಿ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾನೆ.

ಮುಂದುವರಿದು, ಹುಡುಗಿಯನ್ನು ಮಾತನಾಡಿಸಿದ್ದಕ್ಕೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಶಾಲೆಯ ಪಿಟಿ ಟೀಚರ್ ಇದಕ್ಕೆಲ್ಲಾ ಕಾರಣ. ಅವರು ಹೀಗೆ ಮಾಡಿದ್ದಕ್ಕೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ವಾಯ್ಸ್ ನೋಟ್​ನಲ್ಲಿ ಯುವಕ ಹೇಳಿದ್ದಾನೆ.

ಇದನ್ನೂ ಓದಿ: ಮೈಸೂರಿನ ಸರಗೂರಲ್ಲಿ ನಿಲ್ಲದ ವ್ಯಾಘ್ರನ ಆರ್ಭಟ: ಹುಲಿ ದಾಳಿಗೆ ದನಗಾಹಿ ಸಾವು

ಅಕ್ಟೋಬರ್ 31ರಂದು ವಾಯ್ಸ್ ನೋಟ್ ಹಾಕಿ ಯುವಕ ನಾಪತ್ತೆಯಾಗಿದ್ದ. ಇದೀಗ ಬೆಟ್ಟದ ತುಂಗಾ ನಾಲೆಯಲ್ಲಿ ಯುವಕನ ದೇಹ ಪತ್ತೆಯಾಗಿದೆ. ಬೆಟ್ಟದ ತುಂಗಾ ಗ್ರಾಮದ ನಾಲೆಯ ಬಳಿ ಬೈಕ್, ಚಪ್ಪಲಿ, ಮೊಬೈಲ್, ಜರ್ಕಿನ್ ಬಿಟ್ಟು ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅಲ್ಲದೆ, ಡಿಎನ್ಎ ಟೆಸ್ಟ್ ಮೂಲಕ ತಪ್ಪಿತಸ್ಥರ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಿ ಎಂದು ವಾಯ್ಸ್​ ನೋಟ್ ಮೂಲಕ ಒತ್ತಾಯಿಸಿದ್ದಾನೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ