AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಮೃಗಾಲಯದಿಂದ ನೂತನ ಪ್ರಯೋಗ; ಆನೆಗಳಿಗಾಗಿ ಈಜುಕೊಳ ನಿರ್ಮಾಣ!

Mysuru Zoo: ರಾಜ್ಯದಲ್ಲೇ ಮೊದಲ ಪ್ರಯತ್ನ ಎಂದು ಹೇಳಬಹುದಾದ ಈಜುಕೊಳ, ಮೈಸೂರು ಮೃಗಾಲಯದ ವ್ಯಾಪ್ತಿಯ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ನಿರ್ಮಾಣ ಆಗುತ್ತಿದೆ. ಪ್ರಾಯೋಗಿಕವಾಗಿ ಯಶಸ್ವಿಯಾಗಿ ಕಾರ್ಯನಿರ್ವಹಣೆ ಮಾಡಲಾಗುತ್ತಿದೆ.

ಮೈಸೂರು ಮೃಗಾಲಯದಿಂದ ನೂತನ ಪ್ರಯೋಗ; ಆನೆಗಳಿಗಾಗಿ ಈಜುಕೊಳ ನಿರ್ಮಾಣ!
ಆನೆಗಳಿಗೆ ಈಜುಕೊಳ
TV9 Web
| Updated By: ganapathi bhat|

Updated on:Aug 03, 2021 | 5:54 PM

Share

ಮೈಸೂರು: ಆನೆಗಳ ಆರೋಗ್ಯದ ದೃಷ್ಟಿಯಿಂದ ಆನೆಗಳಿಗಾಗಿಯೇ ಈಜುಕೊಳ ನಿರ್ಮಾಣ. ಮೈಸೂರು ಮೃಗಾಲಯದಿಂದ ಇಂತಹದೊಂದು ನೂತನ ಪ್ರಯೋಗ ಆರಂಭಿಸಲಾಗಿದೆ. ವಯಸ್ಸಾದ ಆನೆಗಳಿಗೆ ಸಾಮಾನ್ಯವಾಗಿ ಸಂದಿವಾತ ನೋವು ಕಂಡುಬರುತ್ತದೆ. ನೋವು ನಿವಾರಣೆ ಚಿಕಿತ್ಸೆಗಾಗಿ ಈಜುಕೊಳ ನಿರ್ಮಾಣ ಮಾಡಲಾಗಿದೆ. ಮೈಸೂರು ಮೃಗಾಲಯದಿಂದ ನೂತನ ಪ್ರಯೋಗ ಇದಾಗಿದೆ.

ರಾಜ್ಯದಲ್ಲೇ ಮೊದಲ ಪ್ರಯತ್ನ ಎಂದು ಹೇಳಬಹುದಾದ ಈಜುಕೊಳ, ಮೈಸೂರು ಮೃಗಾಲಯದ ವ್ಯಾಪ್ತಿಯ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ನಿರ್ಮಾಣ ಆಗುತ್ತಿದೆ. ಪ್ರಾಯೋಗಿಕವಾಗಿ ಯಶಸ್ವಿಯಾಗಿ ಕಾರ್ಯನಿರ್ವಹಣೆ ಮಾಡಲಾಗುತ್ತಿದೆ. ಮೈಸೂರು ಮೃಗಾಲಯ ಈಗ ವಿನೂತನ ಪ್ರಯತ್ನಕ್ಕೆ ಸಾಕ್ಷಿಯಾಗಿದೆ.

ಕೂರ್ಗಳ್ಳಿ ಪುನರ್ವಸತಿ ಕೇಂದ್ರವು ಬಹಳ ವಿಸ್ತಾರವಾದ ಪ್ರದೇಶದವನ್ನು ಹೊಂದಿದೆ. ಕರ್ನಾಟಕದ 9 ಮೃಗಾಲಯಗಳ ಪೈಕಿ ವಿಶೇಷವಾದ ಮೃಗಾಲಯ ಹಾಗೂ ಪುನರ್ವಸತಿ ಪ್ರದೇಶವು ಮೈಸೂರಿನಲ್ಲಿ ಇದೆ ಎಂದರೆ ತಪ್ಪಾಗದು. ಈ ಮೃಗಾಲಯದಲ್ಲಿ ಇದೀಗ ಹೊಸ ಪ್ರಯೋಗ ಮಾಡಲಾಗಿದೆ. ಇಲ್ಲಿ ಗಾಯಗೊಂಡ ಚಿರತೆ, ಹುಲಿ ಇತ್ಯಾದಿ ವನ್ಯಜೀವಿಗಳಿಗೆ ಪುನರ್ವಸತಿ ಕಲ್ಪಿಸಲಾಗುತ್ತದೆ.

ವಯಸ್ಸಾದ ಆನೆಗಳಿಗೆ ಉಂಟಾಗುವ ಸಮಸ್ಯೆ ಪರಿಹಾರಕ್ಕಾಗಿ ಈಗ ಈ ಕ್ರಮ ಕೈಗೊಳ್ಳಲಾಗಿದೆ. ಆನೆಗಳಿಗೆ ವಿಶೇಷವಾಗಿ ಈಜುಕೊಳ ನಿರ್ಮಾಣ ಮಾಡಲಾಗಿದೆ. ಆ ಮೂಲಕ ಆನೆಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದಂತಾಗಿದೆ.

Mysuru Zoo Elephant Swimming Pool

ಈಜುಕೊಳದಲ್ಲಿ ಆನೆಗಳ ನೀರಾಟ

ಇದನ್ನೂ ಓದಿ: ಮೈಸೂರು ಮೃಗಾಲಯದ ಈ ಚಿರತೆ ವೀಕ್ಷಕಲ್ಲಿ ಟೋಕಿಯೋ ಒಲಂಪಿಕ್ಸ್ ಚಿತ್ರಣ ಮೂಡಿಸುತ್ತಿದೆ!

ವಿದ್ಯುತ್ ದೀಪಾಲಂಕಾರದಿಂದ ಜಗಮಗಿಸುತ್ತಿರುವ ಮೈಸೂರು ಅರಮನೆ; ವಾರಾಂತ್ಯದಲ್ಲಿ ಪ್ರವಾಸಿಗರ ದಂಡು

(Mysuru Zoo new Swimming Pool for Elephants for Animals Health Purpose)

Published On - 5:29 pm, Tue, 3 August 21

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ