AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರ ಗಮನಕ್ಕೆ: ಮೈಸೂರು ಮೃಗಾಲಯಕ್ಕೆ ಹೆಚ್ಚಿನ ಜನ ಬರುವ ನಿರೀಕ್ಷೆ; ಹೀಗಾಗಿ ನಾಳೆ ವಾರದ ರಜೆ ಇಲ್ಲ

Mysuru Zoo: ಮೃಗಾಲಯಕ್ಕೆ ಪ್ರತಿ ಮಂಗಳವಾರ ವಾರದ ರಜೆ ಇರುತ್ತಿತ್ತು. ಆದರೆ, ನಾಳೆ ಈದ್ ಮಿಲಾದ್ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಇದೆ. ಹೀಗಾಗಿ ನಾಳೆ ಮೃಗಾಲಯ ಪ್ರವಾಸಿಗರಿಗೆ ತೆರೆದಿರಲಿದೆ ಎಂದು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಮಹದೇವಸ್ವಾಮಿ ಮಾಹಿತಿ ನೀಡಿದ್ದಾರೆ.

ಪ್ರವಾಸಿಗರ ಗಮನಕ್ಕೆ: ಮೈಸೂರು ಮೃಗಾಲಯಕ್ಕೆ ಹೆಚ್ಚಿನ ಜನ ಬರುವ ನಿರೀಕ್ಷೆ; ಹೀಗಾಗಿ ನಾಳೆ ವಾರದ ರಜೆ ಇಲ್ಲ
ಮೈಸೂರು ಮೃಗಾಲಯ
TV9 Web
| Updated By: ganapathi bhat|

Updated on: Oct 18, 2021 | 3:09 PM

Share

ಮೈಸೂರು: ಮೈಸೂರು ಮೃಗಾಲಯಕ್ಕೆ ನಾಳೆ (ಅಕ್ಟೋಬರ್ 19) ವಾರದ ರಜೆ ಇಲ್ಲ ಎಂದು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಿಂದ ಮಾಹಿತಿ ಲಭ್ಯವಾಗಿದೆ. ಈದ್ ಮಿಲಾದ್‌ ಹಿನ್ನೆಲೆ ನಾಳೆ ಸರ್ಕಾರಿ ರಜೆ ಇದೆ. ಹೀಗಾಗಿ ಮೃಗಾಲಯಕ್ಕೆ ಹೆಚ್ಚಿನ ಜನ ಬರುವ ನಿರೀಕ್ಷೆ ಇದೆ. ಈ ಕಾರಣದಿಂದ ಮೃಗಾಲಯ ನಾಳೆಯೂ ತೆರೆದಿರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮೃಗಾಲಯಕ್ಕೆ ಪ್ರತಿ ಮಂಗಳವಾರ ವಾರದ ರಜೆ ಇರುತ್ತಿತ್ತು. ಆದರೆ, ನಾಳೆ ಈದ್ ಮಿಲಾದ್ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಇದೆ. ಹೀಗಾಗಿ ನಾಳೆ ಮೃಗಾಲಯ ಪ್ರವಾಸಿಗರಿಗೆ ತೆರೆದಿರಲಿದೆ ಎಂದು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಮಹದೇವಸ್ವಾಮಿ ಮಾಹಿತಿ ನೀಡಿದ್ದಾರೆ.

ದಸರಾ ದೀಪಾಲಂಕಾರ 9 ದಿನ ಮುಂದುವರಿಕೆ: ಬಸವರಾಜ ಬೊಮ್ಮಾಯಿ ವಿಜಯ ದಶಮಿ ದಿನದ ಬಳಿಕವೂ ನಂತರದ 9 ದಿನ ದಸರಾ ದೀಪಾಲಂಕಾರ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ​​ ಬೊಮ್ಮಾಯಿ  ಅಕ್ಟೋಬರ್ 15ರಂದು ಅಧಿಕೃತ ಘೋಷಣೆ ಮಾಡಿದ್ದರು. ಸುತ್ತೂರು ಶಾಖಾ ಮಠದಲ್ಲಿ ಸಿಎಂ ಬೊಮ್ಮಾಯಿ ಈ ಬಗ್ಗೆ ಹೇಳಿಕೆ ನೀಡಿದ್ದರು. ದಸರಾ ದೀಪಾಲಂಕಾರ ಮುಂದುವರಿಸಲು ಜನರ ಬೇಡಿಕೆ ಇದೆ. ಹಾಗಾಗಿ ವಿದ್ಯುತ್ ದೀಪಾಲಂಕಾರ ಮುಂದುವರಿಸಲಾಗುವುದು. ಇಂದಿನಿಂದ 9 ದಿನ ದೀಪಾಲಂಕಾರ ಮುಂದುವರಿಯಲಿದೆ ಎಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಬೊಮ್ಮಾಯಿ ಹೇಳಿದ್ದರು.

ಸಿಎಂ ಬೊಮ್ಮಾಯಿ ರಾಜ್ಯದ ಜನತೆಗೆ ನಾಡ ಹಬ್ಬ ದಸರಾದ ಶುಭಾಶಯ ಕೋರಿದ್ದರು. ರಾಜ್ಯ ಮತ್ತಷ್ಟು ಸುಭಿಕ್ಷವಾಗಲಿ. ತಾಯಿ ಚಾಮುಂಡೇಶ್ವರಿ ನಾಡಿನ ಜನತೆಗೆ ಹರಸಲಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ನಾಡಿಗೆ ಶುಭಹಾರೈಸಿದ್ದರು. ಸುತ್ತೂರು ಶಾಖಾ ಮಠಕ್ಕೆ ಸಿಎಂ ಬೊಮ್ಮಾಯಿ ಭೇಟಿ ಕೊಟ್ಟಿದ್ದರು. ಮಠದಲ್ಲಿ ಸಿಎಂ ಬೊಮ್ಮಾಯಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಗಿತ್ತು. ಮಠದ ಆವರಣದಲ್ಲಿ ಚಾಮುಂಡೇಶ್ವರಿ ದೇವಿಗೆ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಿದ್ದರು.

ಇದನ್ನೂ ಓದಿ: ತಕ್ಕಮಟ್ಟಿಗೆ ಚೇತರಿಕೆ ಕಂಡ ಮೈಸೂರು ಉದ್ಯಮ; ಟಿವಿ9 ಮಂಥನ ತಂಡಕ್ಕೆ ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟದಿಂದ ಕೃತಜ್ಞತೆ

ಇದನ್ನೂ ಓದಿ: ಮೈಸೂರು: ಪೀಪಿ ಊದುತ್ತ ಯುವಕರಿಂದ ಕಿರಿಕಿರಿ; ತುತ್ತೂರಿ ಬಳಸುವುದನ್ನು ನಿಷೇಧಿಸಿ ಕಮಿಷನರ್ ಆದೇಶ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ