AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರ ಗಮನಕ್ಕೆ: ಮೈಸೂರು ಮೃಗಾಲಯಕ್ಕೆ ಹೆಚ್ಚಿನ ಜನ ಬರುವ ನಿರೀಕ್ಷೆ; ಹೀಗಾಗಿ ನಾಳೆ ವಾರದ ರಜೆ ಇಲ್ಲ

Mysuru Zoo: ಮೃಗಾಲಯಕ್ಕೆ ಪ್ರತಿ ಮಂಗಳವಾರ ವಾರದ ರಜೆ ಇರುತ್ತಿತ್ತು. ಆದರೆ, ನಾಳೆ ಈದ್ ಮಿಲಾದ್ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಇದೆ. ಹೀಗಾಗಿ ನಾಳೆ ಮೃಗಾಲಯ ಪ್ರವಾಸಿಗರಿಗೆ ತೆರೆದಿರಲಿದೆ ಎಂದು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಮಹದೇವಸ್ವಾಮಿ ಮಾಹಿತಿ ನೀಡಿದ್ದಾರೆ.

ಪ್ರವಾಸಿಗರ ಗಮನಕ್ಕೆ: ಮೈಸೂರು ಮೃಗಾಲಯಕ್ಕೆ ಹೆಚ್ಚಿನ ಜನ ಬರುವ ನಿರೀಕ್ಷೆ; ಹೀಗಾಗಿ ನಾಳೆ ವಾರದ ರಜೆ ಇಲ್ಲ
ಮೈಸೂರು ಮೃಗಾಲಯ
TV9 Web
| Edited By: |

Updated on: Oct 18, 2021 | 3:09 PM

Share

ಮೈಸೂರು: ಮೈಸೂರು ಮೃಗಾಲಯಕ್ಕೆ ನಾಳೆ (ಅಕ್ಟೋಬರ್ 19) ವಾರದ ರಜೆ ಇಲ್ಲ ಎಂದು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಿಂದ ಮಾಹಿತಿ ಲಭ್ಯವಾಗಿದೆ. ಈದ್ ಮಿಲಾದ್‌ ಹಿನ್ನೆಲೆ ನಾಳೆ ಸರ್ಕಾರಿ ರಜೆ ಇದೆ. ಹೀಗಾಗಿ ಮೃಗಾಲಯಕ್ಕೆ ಹೆಚ್ಚಿನ ಜನ ಬರುವ ನಿರೀಕ್ಷೆ ಇದೆ. ಈ ಕಾರಣದಿಂದ ಮೃಗಾಲಯ ನಾಳೆಯೂ ತೆರೆದಿರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮೃಗಾಲಯಕ್ಕೆ ಪ್ರತಿ ಮಂಗಳವಾರ ವಾರದ ರಜೆ ಇರುತ್ತಿತ್ತು. ಆದರೆ, ನಾಳೆ ಈದ್ ಮಿಲಾದ್ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಇದೆ. ಹೀಗಾಗಿ ನಾಳೆ ಮೃಗಾಲಯ ಪ್ರವಾಸಿಗರಿಗೆ ತೆರೆದಿರಲಿದೆ ಎಂದು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಮಹದೇವಸ್ವಾಮಿ ಮಾಹಿತಿ ನೀಡಿದ್ದಾರೆ.

ದಸರಾ ದೀಪಾಲಂಕಾರ 9 ದಿನ ಮುಂದುವರಿಕೆ: ಬಸವರಾಜ ಬೊಮ್ಮಾಯಿ ವಿಜಯ ದಶಮಿ ದಿನದ ಬಳಿಕವೂ ನಂತರದ 9 ದಿನ ದಸರಾ ದೀಪಾಲಂಕಾರ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ​​ ಬೊಮ್ಮಾಯಿ  ಅಕ್ಟೋಬರ್ 15ರಂದು ಅಧಿಕೃತ ಘೋಷಣೆ ಮಾಡಿದ್ದರು. ಸುತ್ತೂರು ಶಾಖಾ ಮಠದಲ್ಲಿ ಸಿಎಂ ಬೊಮ್ಮಾಯಿ ಈ ಬಗ್ಗೆ ಹೇಳಿಕೆ ನೀಡಿದ್ದರು. ದಸರಾ ದೀಪಾಲಂಕಾರ ಮುಂದುವರಿಸಲು ಜನರ ಬೇಡಿಕೆ ಇದೆ. ಹಾಗಾಗಿ ವಿದ್ಯುತ್ ದೀಪಾಲಂಕಾರ ಮುಂದುವರಿಸಲಾಗುವುದು. ಇಂದಿನಿಂದ 9 ದಿನ ದೀಪಾಲಂಕಾರ ಮುಂದುವರಿಯಲಿದೆ ಎಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಬೊಮ್ಮಾಯಿ ಹೇಳಿದ್ದರು.

ಸಿಎಂ ಬೊಮ್ಮಾಯಿ ರಾಜ್ಯದ ಜನತೆಗೆ ನಾಡ ಹಬ್ಬ ದಸರಾದ ಶುಭಾಶಯ ಕೋರಿದ್ದರು. ರಾಜ್ಯ ಮತ್ತಷ್ಟು ಸುಭಿಕ್ಷವಾಗಲಿ. ತಾಯಿ ಚಾಮುಂಡೇಶ್ವರಿ ನಾಡಿನ ಜನತೆಗೆ ಹರಸಲಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ನಾಡಿಗೆ ಶುಭಹಾರೈಸಿದ್ದರು. ಸುತ್ತೂರು ಶಾಖಾ ಮಠಕ್ಕೆ ಸಿಎಂ ಬೊಮ್ಮಾಯಿ ಭೇಟಿ ಕೊಟ್ಟಿದ್ದರು. ಮಠದಲ್ಲಿ ಸಿಎಂ ಬೊಮ್ಮಾಯಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಗಿತ್ತು. ಮಠದ ಆವರಣದಲ್ಲಿ ಚಾಮುಂಡೇಶ್ವರಿ ದೇವಿಗೆ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಿದ್ದರು.

ಇದನ್ನೂ ಓದಿ: ತಕ್ಕಮಟ್ಟಿಗೆ ಚೇತರಿಕೆ ಕಂಡ ಮೈಸೂರು ಉದ್ಯಮ; ಟಿವಿ9 ಮಂಥನ ತಂಡಕ್ಕೆ ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟದಿಂದ ಕೃತಜ್ಞತೆ

ಇದನ್ನೂ ಓದಿ: ಮೈಸೂರು: ಪೀಪಿ ಊದುತ್ತ ಯುವಕರಿಂದ ಕಿರಿಕಿರಿ; ತುತ್ತೂರಿ ಬಳಸುವುದನ್ನು ನಿಷೇಧಿಸಿ ಕಮಿಷನರ್ ಆದೇಶ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ