AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುವ ಮುನ್ನ ಎಚ್ಚರ: ಗೋಡೆಯ ಮುಂದೆ ನಿಂತರೆ ಎಲ್ಲರಿಗೂ ಕಾಣುತ್ತದೆ! ಪಾಲಿಕೆಯಿಂದ ‘ಕನ್ನಡಿ’ ಭಾಗ್ಯ

ಮೈಸೂರು ಮಹಾನಗರ ಪಾಲಿಕೆಯು ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ತಡೆಯಲು ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಬಸ್ ನಿಲ್ದಾಣಗಳ ಬಳಿ ಸ್ಟೇನ್‌ಲೆಸ್ ಸ್ಟೀಲ್ ಶೀಟ್‌ಗಳನ್ನು ಅಳವಡಿಸಲಾಗಿದ್ದು, ಇದು ಕನ್ನಡಿಯಂತೆ ಕಾರ್ಯನಿರ್ವಹಿಸುತ್ತದೆ. ಮೂತ್ರ ವಿಸರ್ಜನೆಗೆ ಮುಂದಾಗುವ ವ್ಯಕ್ತಿಗಳ ಪ್ರತಿಬಿಂಬ ಸ್ಪಷ್ಟವಾಗಿ ಕಾಣಿಸುವುದರಿಂದ ಅವರಿಗೆ ಮುಜುಗರ ಉಂಟಾಗಿ, ಈ ಕೃತ್ಯದಿಂದ ವಿಮುಖರಾಗುತ್ತಾರೆ. 9.5 ಲಕ್ಷ ರೂ. ವೆಚ್ಚದ ಈ ಯೋಜನೆಯು ರಾಜ್ಯದಲ್ಲೇ ಮೊದಲಾಗಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ಗಳಿಸಿದೆ.

ಬೀದಿ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುವ ಮುನ್ನ ಎಚ್ಚರ: ಗೋಡೆಯ ಮುಂದೆ ನಿಂತರೆ ಎಲ್ಲರಿಗೂ ಕಾಣುತ್ತದೆ! ಪಾಲಿಕೆಯಿಂದ 'ಕನ್ನಡಿ' ಭಾಗ್ಯ
ಮೈಸೂರು ಮೂತ್ರ ವಿಸರ್ಜನೆ ತಡೆಗೆ ಹೊಸ ಪ್ಲಾನ್
ರಾಮು, ಆನೇಕಲ್​
| Edited By: |

Updated on: May 06, 2026 | 12:43 PM

Share

ಮೈಸೂರು, ಮೇ.6: ಸಾರ್ವಜನಿಕ ಸ್ಥಳಗಳಲ್ಲಿ, ಅದರಲ್ಲೂ ಮುಖ್ಯವಾಗಿ ಬಸ್ ನಿಲ್ದಾಣಗಳ ಬಳಿಯ ಖಾಲಿ ಕಾಂಪೌಂಡ್ ಗೋಡೆಗಳ ಬಳಿ ಮೂತ್ರ ವಿಸರ್ಜನೆ ಮಾಡುವುದು ಮತ್ತು ಅದರಿಂದ ಬರುವ ದುರ್ವಾಸನೆಯನ್ನು ಹೋಗಲಾಡಿಸಲು ಮೈಸೂರು ಮಹಾನಗರ ಪಾಲಿಕೆ (Mysore Metropolitan Corporation) ಒಂದು ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಈ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಪಾಲಿಕೆ ಮಾಡುತ್ತಿದೆ. ಸಾರ್ವಜನಿಕರೇ ಈ ಬಗ್ಗೆ ಕಾಳಜಿ ವಹಿಸಬೇಕಿತ್ತು. ಆದರೆ ದಂಡ ಎಲ್ಲ ರೀತಿಯ ಪ್ರಯೋ ಮಾಡಿದ್ರೂ ಪ್ರಯೋಜನ ಆಗಿರಲಿಲ್ಲ. ಇದೀಗ ಪಾಲಿಕೆ ಈ ಬಗ್ಗೆ ಗಂಭೀರವಾಗಿ ಚಿಂತೆ ನಡೆಸಿ, ಮಾಸ್ಟರ್​​ ಪ್ಲಾನ್​​ ಮಾಡಿದೆ.

ಮೈಸೂರು ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ಸುಮಾರು 80 ಮೀಟರ್ ಉದ್ದದ ಕಾಂಪೌಂಡ್ ಗೋಡೆಗೆ ಸ್ಟೇನ್ ಲೆಸ್ ಸ್ಟೀಲ್ (Stainless Steel) ಶೀಟ್‌ಗಳನ್ನು ಅಳವಡಿಸಲಾಗಿದೆ. ಇದು ಕನ್ನಡಿಯಂತೆ ಕೆಲಸ ಮಾಡುತ್ತದೆ. ಈ ಶೀಟ್‌ಗಳ ಮುಂದೆ ಯಾರಾದರೂ ನಿಂತರೆ, ಅವರ ಪ್ರತಿಬಿಂಬವು ಕನ್ನಡಿಯಂತೆ ಕಾಣಿಸುವುದಲ್ಲದೆ, ಅವರ ಹಿಂಭಾಗದಲ್ಲಿ ಚಲಿಸುವವರಿಗೆ ಇವರು ಏನು ಮಾಡುತ್ತಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣುತ್ತದೆ. ಇದು ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡುವವರಿಗೆ ಮುಜುಗರ ಉಂಟುಮಾಡುವ ಮೂಲಕ ಅಂತಹ ಕೆಲಸ ಮಾಡದಂತೆ ತಡೆಯುತ್ತದೆ.

ಇದನ್ನ ಓದಿ: 15 ದಿನದಲ್ಲಿ 65 ಕೋಟಿ ಮೌಲ್ಯದ ಡ್ರಗ್ಸ್ ಸೀಜ್!: ಬೆಂಗಳೂರಿಗೆ ಡ್ರಗ್ಸ್ ಹರಿದು ಬರುತ್ತಿರುವುದು ಏಕೆ? ಪೊಲೀಸರು ಪತ್ತೆಹಚ್ಚಿದ 11 ಶಾಕಿಂಗ್ ಕಾರಣಗಳು!

ಕನ್ನಡಿಯ ಸುತ್ತಲೂ ಆಕರ್ಷಕ ಎಲ್‌ಇಡಿ ಲೈಟ್‌ಗಳನ್ನು ಅಳವಡಿಸಲಾಗಿದ್ದು, ರಾತ್ರಿ ವೇಳೆ ಸ್ಟ್ರೀಟ್ ಲೈಟ್‌ಗಳ ಜೊತೆಗೆ ಇವು ಕೂಡ ಆನ್ ಆಗುತ್ತವೆ. ಇದು ಆ ಪ್ರದೇಶಕ್ಕೆ ಹೊಸ ಕಳೆ ನೀಡುತ್ತದೆ. ಸುಮಾರು 9.5 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಪ್ರಾಯೋಗಿಕವಾಗಿ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗದ ಗೋಡೆಗೆ ಅಳವಡಿಸಲಾಗಿರುವ ಈ ಯೋಜನೆಗೆ ಸಾರ್ವಜನಿಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಇದು ರಾಜ್ಯದಲ್ಲೇ ಜಾರಿಯಾದ ಇಂತಹ ಮೊದಲ ಯೋಜನೆಯಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ