AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾ ಬಲೆಯಲ್ಲಿರುವ ಉಪನ್ಯಾಸಕ ಮಹದೇವಸ್ವಾಮಿ ವಿರುದ್ಧ ಮತ್ತೊಂದು ಆರೋಪ: ಶಿಕ್ಷಕರಿಗೆ 70 ಕೋಟಿ ರೂ. ವಂಚನೆ

ಕಳೆದ ಕೆಲ ದಿನಗಳ ಹಿಂದೆ ಲೋಕಾಯುಕ್ತ ಅಧಿಕಾರಿಗಳು ನಂಜನಗೂಡಿನ ಸರ್ಕಾರಿ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮನೆ ಮೇಲೆ ದಾಳಿ ಮಾಡಿದ್ದರು. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿತ್ತು. ಇದೀಗ ಉಪನ್ಯಾಸಕ ಮಹದೇವಸ್ವಾಮಿ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ.

ಲೋಕಾ ಬಲೆಯಲ್ಲಿರುವ ಉಪನ್ಯಾಸಕ ಮಹದೇವಸ್ವಾಮಿ ವಿರುದ್ಧ ಮತ್ತೊಂದು ಆರೋಪ: ಶಿಕ್ಷಕರಿಗೆ 70 ಕೋಟಿ ರೂ. ವಂಚನೆ
ವಂಚನೆ ಎಸಗಿದ ಮಾಧುಸ್ವಾಮಿ
ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on: Dec 12, 2023 | 1:10 PM

Share

ಮೈಸೂರು, ಡಿಸೆಂಬರ್​​ 11: ಕಳೆದ ಕೆಲ ದಿನಗಳ ಹಿಂದೆ ಲೋಕಾಯುಕ್ತ (Lokayukta) ಅಧಿಕಾರಿಗಳು ನಂಜನಗೂಡಿನ (Nanjangudu) ಸರ್ಕಾರಿ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮನೆ ಮೇಲೆ ದಾಳಿ ಮಾಡಿದ್ದರು. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿತ್ತು. ಇದೀಗ ಉಪನ್ಯಾಸಕ ಮಹದೇವಸ್ವಾಮಿ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ನಿವೇಶನ ಕೊಡಿಸುವುದಾಗಿ 70 ಕೋಟಿ ರೂ. ಹಣ ಪಡೆದು ವಂಚಿಸಿದ್ದಾರೆ ಎಂದು ಶಿಕ್ಷಕರು ಆರೋಪಿಸಿದ್ದಾರೆ.

ಕರ್ನಾಟಕ ರಾಜ್ಯ ಕಾಲೇಜು ಅಧ್ಯಾಪಕರು ಹಾಗೂ ಶಾಲಾ ಶಿಕ್ಷಕರ ಗೃಹನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಮಹದೇವಸ್ವಾಮಿ ಮೈಸೂರಿನ ಗುರುಕುಲ ಬಡಾವಣೆಯಲ್ಲಿ 40 ಲಕ್ಷ ರೂ. ಮೌಲ್ಯದ 70 ನಿವೇಶ ಕೊಡಿಸುವುದಾಗಿ ಶಿಕ್ಷಕರಿಂದ 28 ಕೋಟಿ ರೂ. ಹಣ ಪಡೆದಿದ್ದಾನೆ. ಆದರೆ ಶಿಕ್ಷಕರಿಗೆ ನಿವೇಶನ ನೀಡದೆ, ಹೆಂಡತಿ ಮಕ್ಕಳು ಸಂಬಂಧಿಕರಿಗೆ ಹೆಸರಿಗೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ವಿದ್ಯುತ್​ ತಂತಿ ತುಳಿದು ತಾಯಿ-ಮಗು ಸಾವು: ಜನರ ಕಣ್ಣಿಗೆ ಮಂಕು ಬೂದಿ ಎರಚಿತೆ ಬೆಸ್ಕಾಂ? ಲೋಕಾಯುಕ್ತ ತನಿಖೆಯಲ್ಲಿ ಸತ್ಯಾಂಶ ಬಯಲು

ಅದಲ್ಲದೆ ಮತ್ತೊಂದು ಬಡಾವಣೆ ನಿರ್ಮಾಣಕ್ಕೆ ಶಿಕ್ಷಕರಿಂದ 2014 ರಿಂದ 40 ಕೋಟಿ ಹಣ ವಸೂಲಿ ಮಾಡಿದ್ದಾನೆ. ಆದರೆ ಬಡಾವಣೆ ನಿರ್ಮಾಣಕ್ಕೆ ಮಹದೇವಸ್ವಾಮಿ ಭೂಮಿಯನ್ನೇ ಖರೀದಿ ಮಾಡಿಲ್ಲ. ಈ ಬಗ್ಗೆ ಪೊಲೀಸರು, ಸಹಕಾರ ಇಲಾಖೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಮಹದೇವಸ್ವಾಮಿ ಸಂಬಂಧಿಕರಿಗೆ ಸೈಟ್ ಮಾರಿ ತನ್ನ ಹೆಸರಿಗೆ ದಾನವಾಗಿ ಮಾಡಿಕೊಂಡಿದ್ದಾನೆ ಎಂಬ ಆರೋಪಿದೆ.

ಲೋಕಾಯುಕ್ತ ದಾಳಿ

ಲೋಕಾಯುಕ್ತ ಅಧಿಕಾರಿಗಳು ಒಂದು ವಾರದ ಹಿಂದೆ ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮೇಲೆ ದಾಳಿ ಮಾಡಿದ್ದರು. ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ಪರಿಶೀಲನೆ ನಡೆಸಿದ್ದರು. ಕುಟುಂಬದ ಹೆಸರಿನಲ್ಲಿ ಎಂ ಎಸ್ ಗ್ರೂಪ್ ಕಂಪನಿ, ಆದಾಯಕ್ಕೂ ಮೀರಿ ಅಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಹಾಗೂ ಐ ಜಿ ಪಿ, ಸುಬ್ರಮಣ್ಣೀಶ್ವರ ರಾವ್ ಎಸ್. ಪಿ ಸುರೇಶ್ ಬಾಬು ಮಾರ್ಗದರ್ಶ‌ನದಲ್ಲಿ ಡಿಎಸ್‌ಪಿ, ಕೃಷ್ಣಯ್ಯ ನೇತೃತ್ವದಲ್ಲಿ 12 ತಂಡಗಳು ವಿವಿಧ ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದರು. ದಾಳಿ ಬಳಿಕ 8 ಕೋಟಿ ಅಕ್ರಮ ಆಸ್ತಿ ಇದೆ ಎಂದು ಲೋಕಾ ಪೊಲೀಸರು ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ