AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಪ್ರಲ್ಹಾದ್ ಜೋಶಿಗೂ ಒಂದು ಕುರ್ತಾ ಹೊಲಿದುಕೊಡಿ; ಮೈಸೂರಿನಲ್ಲಿ ತಮಾಷೆ ಮಾಡಿದ ಪ್ರಧಾನಿ ಮೋದಿ

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಶ್ರೇಷ್ಠತಾ ಕೇಂದ್ರದ ಉದ್ಘಾಟನೆ ಮಾಡಿದ ಮೋದಿ ಕೇಂದ್ರ ಸರ್ಕಾರದ ಹಲವು ಯೋಜನೆಗಳ 20 ಫಲಾನುಭವಿಗಳ ಜೊತೆ ಸಂವಾದ ನಡೆಸಿದರು.

Narendra Modi: ಪ್ರಲ್ಹಾದ್ ಜೋಶಿಗೂ ಒಂದು ಕುರ್ತಾ ಹೊಲಿದುಕೊಡಿ; ಮೈಸೂರಿನಲ್ಲಿ ತಮಾಷೆ ಮಾಡಿದ ಪ್ರಧಾನಿ ಮೋದಿ
ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿImage Credit source: ANI
TV9 Web
| Updated By: ಸುಷ್ಮಾ ಚಕ್ರೆ|

Updated on:Jun 21, 2022 | 11:32 AM

Share

ಮೈಸೂರು: ನಿನ್ನೆ ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ನಿನ್ನೆ ಸಂಜೆಯ ಬಳಿಕ ಮೈಸೂರಿಗೆ ಭೇಟಿ ನೀಡಿದ್ದರು. ಈ ವೇಳೆ ಮೈಸೂರಿನಲ್ಲಿ ಸರ್ಕಾರದ ಯೋಜನೆಗಳ ಫಲಾನುಭವಿಗಳೊಂದಿಗೆ ಮೋದಿ ಸಂವಾದ ನಡೆಸಿದ್ದರು. ಪ್ರಧಾನ ಮಂತ್ರಿ ಆವಾಸ್ ಯೋಜನೆ, ಪ್ರಧಾನ ಮಂತ್ರಿ ಮುದ್ರಾ ಯೋಜನೆ ಮತ್ತು ಆಯುಷ್ಮಾನ್ ಭಾರತ್ ಯೋಜನೆಯಂತಹ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದ್ದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಶ್ರೇಷ್ಠತಾ ಕೇಂದ್ರದ ಉದ್ಘಾಟನೆ ಮಾಡಿದ ಮೋದಿ ಕೇಂದ್ರ ಸರ್ಕಾರದ ಹಲವು ಯೋಜನೆಗಳ 20 ಫಲಾನುಭವಿಗಳ ಜೊತೆ ಸಂವಾದ ನಡೆಸಿದರು. ಈ ವೇಳೆ ಪ್ರಧಾನಮಂತ್ರಿ ಮುದ್ರಾ ಯೋಜನೆಯ ಫಲಾನುಭವಿಯಾದ ಚಾಮರಾಜನಗರದ ಅಂಬಿಕಾ ಎಂಬ ಮಹಿಳೆಯ ಜೊತೆ ಮಾತುಕತೆ ನಡೆಸುವಾಗ ಆ ಮಹಿಳೆ, ನಾನು ಟೈಲರ್ ಕೆಲಸ ಮಾಡುತ್ತೇನೆ. ಪಿಯುಸಿವರೆಗೆ ಓದಿದ್ದೇನೆ. ನಂತರ ನನ್ನ ಹಳ್ಳಿಯಲ್ಲಿ ಟೈಲರಿಂಗ್ ಕಲಿತಿದ್ದೇನೆ. ನಾನು ಕೇಂದ್ರ ಸರ್ಕಾರದ ಹಲವು ಯೋಜನೆಗಳ ಪ್ರಯೋಜನ ಪಡೆದಿದ್ದೇನೆ. ನಾನು ಮತ್ತು ನನ್ನ ಗಂಡ ಸೇರಿ ಹೊಲಿಗೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: PM Modi Speech: ನನ್ನ ಪ್ರೀತಿಯ ಕರುನಾಡಿನ ಜನತೆಗೆ ನಮಸ್ಕಾರಗಳು; ಕನ್ನಡದಲ್ಲೇ ಭಾಷಣ ಆರಂಭಿಸಿ, ಕರುನಾಡನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

ಇದನ್ನೂ ಓದಿ
Image
International Yoga Day 2022: ದೇಶದ ವಿವಿಧ ಪ್ರದೇಶಗಳಲ್ಲಿ ಯೋಗ ದಿನಾಚರಣೆಯ ಸಂಗ್ರಹ ಚಿತ್ರಗಳು ಇಲ್ಲಿದೆ
Image
PM Modi Speech: ಯೋಗ ಶಾಂತಿ ತಂದುಕೊಡುತ್ತದೆ; ಶಾಂತಿ ವ್ಯಕ್ತಿಗೆ ಸೀಮಿತವಾಗಿಲ್ಲ, ಇಡೀ ಜಗತ್ತಿಗೆ ಅನ್ವಯ ಆಗುತ್ತೆ
Image
ಕೇಂದ್ರದ ಯೋಜನೆಯ ಫಲಾನುಭವಿಗಳ ಜೊತೆ ಸಂವಾದ ನಡೆಸಿದ ಪ್ರಧಾನಿ ಮೋದಿ

ಆಗ ಆ ಮಹಿಳೆಯ ಜೊತೆ ತಮಾಷೆಯಾಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಾನು ಹಾಕುವ ರೀತಿಯ ಕುರ್ತಾವನ್ನು ನೀವು ಹೊಲಿಯುತ್ತೀರಾ? ಎಂದು ಕೇಳಿದರು. ಅದಕ್ಕೆ ಆಕೆ ಹೊಲಿಯುತ್ತೇನೆ ಸರ್ ಎಂದು ಹೇಳಿದರು. ಆಗ ತಮ್ಮ ಪಕ್ಕದಲ್ಲೇ ಕುಳಿತಿದ್ದ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿಯವರನ್ನು ತೋರಿಸಿ, ಹಾಗಾದರೆ ಪ್ರಲ್ಹಾದ್​ ಜೀಗೂ ಒಂದು ಕುರ್ತಾ ಹೊಲಿದುಕೊಡಿ ಎಂದು ಹೇಳಿದರು. ಆಗ ಏನು ಹೇಳಬೇಕೆಂದು ತೋಚದೆ ಆ ಮಹಿಳೆ ಸುಮ್ಮನೆ ಕುಳಿತಿದ್ದನ್ನು ನೋಡಿ ಮೋದಿ ನಸುನಕ್ಕರು.

ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಯೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ, ಮನೆಗೆ ವಿದ್ಯುತ್ ಮತ್ತು ಶೌಚಾಲಯದಂತಹ ಮೂಲಭೂತ ಸೌಕರ್ಯಗಳಿವೆಯೇ ಎಂದು ಕೇಳಿದರು. ನಾನು ನಿಮ್ಮ ಮನೆಗೆ ಭೇಟಿ ನೀಡಿದರೆ ನನಗೆ ಆಹಾರವನ್ನು ನೀಡುತ್ತೀರಾ? ಎಂದು ಕೇಳಿದರು. ಅದಕ್ಕೆ ಫಲಾನುಭವಿ ಖಂಡಿತ ಸ್ವಾಮಿ ಎಂದು ಹೇಳಿದರು.

ಇದನ್ನೂ ಓದಿ: PM Modi in Mysore: 45 ನಿಮಿಷದಲ್ಲಿ 19 ಆಸನ; ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗಾಭ್ಯಾಸ

ಶುದ್ಧ ಕುಡಿಯುವ ನೀರು ಸಿಗುತ್ತಿದ್ದು, ಪ್ರತಿನಿತ್ಯ ನೀರು ಸಿಗುತ್ತಿರುವುದು ಗ್ರಾಮಸ್ಥರಲ್ಲಿ ಸಂತಸ ತಂದಿದೆ ಎಂದು ಜಲ ಜೀವನ್ ಮಿಷನ್ ಫಲಾನುಭವಿ ಪ್ರಧಾನಿ ಮೋದಿಗೆ ತಿಳಿಸಿದರು. ಫಲಾನುಭವಿಗಳು ಗ್ರಾಮಸ್ಥರೊಂದಿಗೆ ಸಂವಾದ ನಡೆಸಬೇಕು. ಸರ್ಕಾರದ ಯೋಜನೆಗಳ ಬಗ್ಗೆ ತಿಳಿದಿಲ್ಲದವರಿಗೆ ಅದರ ಬಗ್ಗೆ ತಿಳಿಸುವಂತೆ ಪ್ರಧಾನಿ ಮೋದಿ ಒತ್ತಾಯಿಸಿದರು.

ಇಂತಹ ಯೋಜನೆಗಳ ಬಗ್ಗೆ ಅರಿವಿಲ್ಲದ ಇತರ ಗ್ರಾಮಸ್ಥರಿಗೆ ತಿಳಿಸುವಂತೆ ನಾನು ನಿಮ್ಮೆಲ್ಲರಲ್ಲಿ ವಿನಂತಿಸುತ್ತೇನೆ, ಹೆಚ್ಚಿನ ಬಡವರು ಇದರ ಪ್ರಯೋಜನ ಪಡೆಯಬೇಕು ಎಂದು ಆ ಫಲಾನುಭವಿಗಳಿಗೆ ಮೋದಿ ಹೇಳಿದರು. ಎಲ್ಲ ಫಲಾನುಭವಿಗಳು ಕನ್ನಡದಲ್ಲೇ ತಮ್ಮ ಅನುಭವ ಹಂಚಿಕೊಂಡಿದ್ದು, ಅದನ್ನು ಹಿಂದಿಗೆ ಟ್ರಾನ್ಸ್​ಲೇಟ್ ಮಾಡಿ ಪ್ರಧಾನಿ ಮೋದಿಗೆ ತಿಳಿಸಲಾಯಿತು. ನಂತರ ಮೋದಿ ಹೇಳಿದ್ದನ್ನು ಆ ಫಲಾನುಭವಿಗಳಿಗೆ ಕನ್ನಡದಲ್ಲಿ ಹೇಳಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:26 am, Tue, 21 June 22

Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ತಿಳಿಯಿರಿ
ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​