AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ಮತ್ತು ಬಿಜೆಪಿಯ ಮಧ್ಯೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ

ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಾಸಕರಾದ ರಾಮ್‍ದಾಸ್, ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ಮೈಸೂರಿನ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಎಲ್ಲಾ ನಗರಸಭಾ ಸದಸ್ಯರು ಒಗ್ಗಟ್ಟಿನಿಂದ ಚುನಾವಣೆಗೆ ಶ್ರಮಿಸಿದ್ದಾರೆ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಜೆಡಿಎಸ್ ಮತ್ತು ಬಿಜೆಪಿಯ ಮಧ್ಯೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ
ಜೆಡಿಎಸ್ ಮತ್ತು ಬಿಜೆಪಿಯ ಮಧ್ಯೆ ಹೊಂದಾಣಿಯ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ
TV9 Web
| Edited By: |

Updated on:Sep 06, 2022 | 7:39 PM

Share

ಮೈಸೂರು: ‘ಜೆ.ಡಿ.ಎಸ್ ಮತ್ತು ಬಿಜೆಪಿಯ ಹೊಂದಾಣಿಕೆ ಪ್ರಶ್ನೆ ಇಲ್ಲ. ಮೇಯರ್ ಹಾಗೂ ಉಪಮೇಯರ್‍ಗಳ ಗೆಲುವಿಗೆ ಒಗ್ಗಟ್ಟಿನ ಪ್ರದರ್ಶನವಾಗಿದ್ದರಿಂದ ಇದು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಾಸಕರಾದ ರಾಮ್‍ದಾಸ್, ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ಮೈಸೂರಿನ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಎಲ್ಲಾ ನಗರಸಭಾ ಸದಸ್ಯರು ಒಗ್ಗಟ್ಟಿನಿಂದ ಚುನಾವಣೆಗೆ ಶ್ರಮಿಸಿದ್ದಾರೆ. ಸ್ಥಳೀಯವಾಗಿ ಅವರಿಗೆ ಹಿಂದಿನ ಅನುಭವಗಳು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಮೈಸೂರಿಗೆ ಯಾವ ರೀತಿ ಹಿನ್ನಡೆಯಾಗಿ ಎಂದು ಅವರು ನಮಗಿಂತ ಚೆನ್ನಾಗಿ ಅರ್ಥ ಮಾಡಿಕೊಂಡು ಈ ಒಂದು ನಿರ್ಣಯಕ್ಕೆ ಬರಲು ಕಾರಣವಾಗಿದೆ.

ನಾವು ಸ್ಪರ್ಧಿಸುತ್ತಿದ್ದೇವೆ… ಬೇರೆ ಯಾರು ಬೇಕಾದರೂ ಸ್ಪರ್ಧಿಸಬಹುದು ಎಂದು ನಾವು ಮುಕ್ತವಾಗಿ ಹೇಳಿದ್ದೆವು. ನಾವು ನಮ್ಮ ಶಕ್ತಿಯ ಬಲದಿಂದ ಸ್ಪರ್ಧಿಸುವ ತೀರ್ಮಾನವನ್ನು ಮುಂಚೆ ಮಾಡಿದ್ದೆವು. ಅದರಂತೆ ಸ್ಪರ್ಧೆಯನ್ನೂ ಮಾಡಿದೆವು. ಜೆ.ಡಿ.ಎಸ್ ಉಪಮೇಯರ್‍ಗೆ ಅವರೂ ಪ್ರಯತ್ನಿಸಿದರು. ಆದರೆ ತಾಂತ್ರಿಕ ಕಾರಣದಿಂದ ಪ್ರಮಾಣಪತ್ರ ಸಿಗಲಿಲ್ಲವಾದ್ದರಿಂದ ತೊಂದರೆಯಾಯಿತು. ಚುನಾವಣೆಯಾದ ನಂತರ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮೈಸೂರಿನ ಸಮಗ್ರ ಅಭಿವೃದ್ಧಿ ಮಾಡುವುದು ನಮ್ಮ ಗುರಿ ಎಂದರು.

ಮೈಸೂರಿಗೆ ಇಂದು ಶುಭದಿನ:

ಮೈಸೂರಿಗೆ ಇಂದು ಶುಭದಿನ. ನಮ್ಮ ಪಕ್ಷದ ಮಹಾಪೌರರಾಗಿ ಶಿವಕುಮಾರ್ ಹಾಗೂ ಉಪಮಹಾಪೌರರಾಗಿ ರೂಪಾ ಅವರು ಆಯ್ಕೆಯಾಗಿದ್ದಾರೆ. ಕಳೆದ ಬಾರಿ ಕೇವಲ ಮೇಯರ್ ಆಗಿದ್ದರು, ಈ ಬಾರಿ ಮೇಯರ್ ಹಾಗೂ ಉಪಮೇಯರ್ ಇಬ್ಬರೂ ನಮ್ಮ ಪಕ್ಷದಿಂದ ಆಯ್ಕೆ ಆಗಿದ್ದಾರೆ. ಶಿವಕುಮಾರ್ ಹಾಗೂ ರೂಪಾ ಅವರಿಗೆ ಅಭಿನಂದನೆಗಳನ್ನು ತಿಳಿಸಿದರು. ಅವರ ಕಾಲದಲ್ಲಿ ಮೈಸೂರಿನ ಸಮಗ್ರ ಅಭಿವೃದ್ಧಿ ಆಗಲಿ. ಮೈಸೂರಿನ ಖ್ಯಾತಿ ಹೆಚ್ಚಲಿ. ಇಬ್ಬರೂ ಹೊಸಬರಿದ್ದಾರೆ. ದಸರಾ ಕೂಡ ವಿಜೃಂಭಣೆಯಿಂದ ಆಗಲಿ ಎಂದರು.

Published On - 6:16 pm, Tue, 6 September 22

Follow Us
Web contact
Web contact

TV9 Kannada

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್