AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ಮತ್ತು ಬಿಜೆಪಿಯ ಮಧ್ಯೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ

ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಾಸಕರಾದ ರಾಮ್‍ದಾಸ್, ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ಮೈಸೂರಿನ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಎಲ್ಲಾ ನಗರಸಭಾ ಸದಸ್ಯರು ಒಗ್ಗಟ್ಟಿನಿಂದ ಚುನಾವಣೆಗೆ ಶ್ರಮಿಸಿದ್ದಾರೆ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಜೆಡಿಎಸ್ ಮತ್ತು ಬಿಜೆಪಿಯ ಮಧ್ಯೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ
ಜೆಡಿಎಸ್ ಮತ್ತು ಬಿಜೆಪಿಯ ಮಧ್ಯೆ ಹೊಂದಾಣಿಯ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ
TV9 Web
| Updated By: ಸಾಧು ಶ್ರೀನಾಥ್​|

Updated on:Sep 06, 2022 | 7:39 PM

Share

ಮೈಸೂರು: ‘ಜೆ.ಡಿ.ಎಸ್ ಮತ್ತು ಬಿಜೆಪಿಯ ಹೊಂದಾಣಿಕೆ ಪ್ರಶ್ನೆ ಇಲ್ಲ. ಮೇಯರ್ ಹಾಗೂ ಉಪಮೇಯರ್‍ಗಳ ಗೆಲುವಿಗೆ ಒಗ್ಗಟ್ಟಿನ ಪ್ರದರ್ಶನವಾಗಿದ್ದರಿಂದ ಇದು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಾಸಕರಾದ ರಾಮ್‍ದಾಸ್, ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ಮೈಸೂರಿನ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಎಲ್ಲಾ ನಗರಸಭಾ ಸದಸ್ಯರು ಒಗ್ಗಟ್ಟಿನಿಂದ ಚುನಾವಣೆಗೆ ಶ್ರಮಿಸಿದ್ದಾರೆ. ಸ್ಥಳೀಯವಾಗಿ ಅವರಿಗೆ ಹಿಂದಿನ ಅನುಭವಗಳು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಮೈಸೂರಿಗೆ ಯಾವ ರೀತಿ ಹಿನ್ನಡೆಯಾಗಿ ಎಂದು ಅವರು ನಮಗಿಂತ ಚೆನ್ನಾಗಿ ಅರ್ಥ ಮಾಡಿಕೊಂಡು ಈ ಒಂದು ನಿರ್ಣಯಕ್ಕೆ ಬರಲು ಕಾರಣವಾಗಿದೆ.

ನಾವು ಸ್ಪರ್ಧಿಸುತ್ತಿದ್ದೇವೆ… ಬೇರೆ ಯಾರು ಬೇಕಾದರೂ ಸ್ಪರ್ಧಿಸಬಹುದು ಎಂದು ನಾವು ಮುಕ್ತವಾಗಿ ಹೇಳಿದ್ದೆವು. ನಾವು ನಮ್ಮ ಶಕ್ತಿಯ ಬಲದಿಂದ ಸ್ಪರ್ಧಿಸುವ ತೀರ್ಮಾನವನ್ನು ಮುಂಚೆ ಮಾಡಿದ್ದೆವು. ಅದರಂತೆ ಸ್ಪರ್ಧೆಯನ್ನೂ ಮಾಡಿದೆವು. ಜೆ.ಡಿ.ಎಸ್ ಉಪಮೇಯರ್‍ಗೆ ಅವರೂ ಪ್ರಯತ್ನಿಸಿದರು. ಆದರೆ ತಾಂತ್ರಿಕ ಕಾರಣದಿಂದ ಪ್ರಮಾಣಪತ್ರ ಸಿಗಲಿಲ್ಲವಾದ್ದರಿಂದ ತೊಂದರೆಯಾಯಿತು. ಚುನಾವಣೆಯಾದ ನಂತರ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮೈಸೂರಿನ ಸಮಗ್ರ ಅಭಿವೃದ್ಧಿ ಮಾಡುವುದು ನಮ್ಮ ಗುರಿ ಎಂದರು.

ಮೈಸೂರಿಗೆ ಇಂದು ಶುಭದಿನ:

ಮೈಸೂರಿಗೆ ಇಂದು ಶುಭದಿನ. ನಮ್ಮ ಪಕ್ಷದ ಮಹಾಪೌರರಾಗಿ ಶಿವಕುಮಾರ್ ಹಾಗೂ ಉಪಮಹಾಪೌರರಾಗಿ ರೂಪಾ ಅವರು ಆಯ್ಕೆಯಾಗಿದ್ದಾರೆ. ಕಳೆದ ಬಾರಿ ಕೇವಲ ಮೇಯರ್ ಆಗಿದ್ದರು, ಈ ಬಾರಿ ಮೇಯರ್ ಹಾಗೂ ಉಪಮೇಯರ್ ಇಬ್ಬರೂ ನಮ್ಮ ಪಕ್ಷದಿಂದ ಆಯ್ಕೆ ಆಗಿದ್ದಾರೆ. ಶಿವಕುಮಾರ್ ಹಾಗೂ ರೂಪಾ ಅವರಿಗೆ ಅಭಿನಂದನೆಗಳನ್ನು ತಿಳಿಸಿದರು. ಅವರ ಕಾಲದಲ್ಲಿ ಮೈಸೂರಿನ ಸಮಗ್ರ ಅಭಿವೃದ್ಧಿ ಆಗಲಿ. ಮೈಸೂರಿನ ಖ್ಯಾತಿ ಹೆಚ್ಚಲಿ. ಇಬ್ಬರೂ ಹೊಸಬರಿದ್ದಾರೆ. ದಸರಾ ಕೂಡ ವಿಜೃಂಭಣೆಯಿಂದ ಆಗಲಿ ಎಂದರು.

Published On - 6:16 pm, Tue, 6 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ