AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamundeshwari darshan: ಈ ಸಲ ಆಷಾಢ ಮಾಸದಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶ, ಉಚಿತ ಬಸ್ ಸೇವೆ

Ashada Masa 2022: ಚಾಮುಂಡೇಶ್ವರಿ ವರ್ಧಂತಿಯ ದಿನ ಮಾತ್ರ ಬೆಳಿಗ್ಗೆ 7 ಗಂಟೆಯಿಂದ ಸಾರಿಗೆ ಬಸ್ ಗಳ ಸಂಚಾರ ಆರಂಭವಾಗಲಿದೆ. ಇನ್ನುಳಿದ ಆಷಾಡ ಶುಕ್ರವಾರಗಳಂದು ಬೆಳಗಿನ ಜಾವ 3 ಗಂಟೆಯಿಂದ ಸಾರಿಗೆ ಬಸ್ ಗಳು ಸಂಚರಿಸಲಿವೆ. ಆಷಾಡ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಮಾಡಲಾಗುತ್ತದೆ

Chamundeshwari darshan: ಈ ಸಲ ಆಷಾಢ ಮಾಸದಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶ, ಉಚಿತ ಬಸ್ ಸೇವೆ
ಎಸ್.ಟಿ. ಸೋಮಶೇಖರ್
TV9 Web
| Edited By: ಸಾಧು ಶ್ರೀನಾಥ್​|

Updated on: Jun 27, 2022 | 7:14 PM

Share

ಮೈಸೂರು: ಕೊರೊನಾ ಮಹಾಮಾರಿ ಭೀತಿ ಕಳೆದಿದ್ದು, ಈ ಸಲ ಆಷಾಢ ಮಾಸದಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರು ಮಾಹಿತಿ ನೀಡಿದ್ದು, ಕಳೆದೆರಡು ವರ್ಷ ಕೋವಿಡ್ ಹಿನ್ನೆಲೆಯಲ್ಲಿ ಆಷಾಡ ಮಾಸದಲ್ಲಿ ದೇವಿಯ ದರ್ಶನಕ್ಕೆ ಅವಕಾಶ ಸಿಕ್ಕಿರಲಿಲ್ಲ‌. ಈ ಬಾರಿಯ ಆಷಾಡ ಮಾಸದಲ್ಲಿ ಚಾಮುಂಡೇಶ್ವರಿಯ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಎರಡು ಡೋಸ್ ಕೊರೊನಾ ಲಸಿಕೆ ತೆಗೆದುಕೊಂಡಿರುವವರಿಗೆ ಪ್ರವೇಶ ನೀಡಲಾಗುವುದು. ಈ ಬಗ್ಗೆ ಆಯ್ದ ಸ್ಥಳಗಳಲ್ಲಿ ತಪಾಸಣೆ ನಡೆಸಲಾಗುತ್ತದೆ. ಈ ಬಾರಿಯೂ ಖಾಸಗಿ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತ ಮಹಲ್ ಹೆಲಿಪ್ಯಾಡ್ ಬಳಿಯಿಂದ ಸಾರಿಗೆ ಬಸ್ ಗಳು ಹೊರಡಲಿವೆ. ಲಲಿತ ಮಹಲ್ ಹೆಲಿಪ್ಯಾಡ್ ಬಳಿಯಿಂದ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಸಚಿವ ಸೋಮಶೇಖರ್ ತಿಳಿಸಿದ್ದಾರೆ.

ಈ ಬಾರಿಯೂ ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಶಿಷ್ಟಾಚಾರದ ಪ್ರಕಾರ ಖಾಸಗಿ ವಾಹನಗಳ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುತ್ತದೆ. ಎಲ್ಲೆಡೆ ಹೆಚ್ಚುವರಿಯಾಗಿ ಸಿ ಸಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಸರತಿ ಸಾಲಿನಲ್ಲಿ ಬರುವ ಭಕ್ತಾಧಿಗಳು ಎಲ್ಇಡಿ ಪರದೆಯಲ್ಲಿ ಉತ್ಸವ ಮೂರ್ತಿಯನ್ನು ಕಣ್ತುಂಬಿಕೊಳ್ಳುವ ವ್ಯವಸ್ಥೆ ಮಾಡಲಾಗುತ್ತದೆ. ಚಾಮುಂಡೇಶ್ವರಿ ವರ್ಧಂತಿಯ ದಿನ ಮಾತ್ರ ಬೆಳಿಗ್ಗೆ 7 ಗಂಟೆಯಿಂದ ಸಾರಿಗೆ ಬಸ್ ಗಳ ಸಂಚಾರ ಆರಂಭವಾಗಲಿದೆ. ಇನ್ನುಳಿದ ಆಷಾಡ ಶುಕ್ರವಾರಗಳಂದು ಬೆಳಗಿನ ಜಾವ 3 ಗಂಟೆಯಿಂದ ಸಾರಿಗೆ ಬಸ್ ಗಳು ಸಂಚರಿಸಲಿವೆ. ಆಷಾಡ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಮಾಡಲಾಗುತ್ತದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

Also Read:

ಕೆಂಪೇಗೌಡ ಜಯಂತಿ ಗಿಫ್ಟ್​! ಇನ್ಮುಂದೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಶೇ. 25ರಷ್ಟು ರಿಯಾಯಿತಿ!

ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಬೆನ್ನಲ್ಲೇ ಟ್ರಾಫಿಕ್ ಪೊಲೀಸರ ಮೇಲೆ ಆರೋಪಗಳ ಸುರಿ ಮಳೆ, ತಿಂಗಳಲ್ಲಿ ಎರಡು ಮೂರು ಬಾರಿ ಮಾಮೂಲು ನೀಡಬೇಕೆಂದ ವ್ಯಾಪಾರಸ್ಥರು

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ