AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವಾರದಿಂದ ವೀಕೆಂಡ್ ಕರ್ಫ್ಯೂ ಬೇಡ: ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ ನಾರಾಯಣಗೌಡ

ಈ ವಾರವೇ ವೀಕೆಂಡ್ ಕರ್ಫ್ಯೂಗೆ ವಿರೋಧವಿತ್ತು. ಆದರೆ ಆರೋಗ್ಯದ ಹಿತದೃಷ್ಟಿಯಿಂದ ಸಹಕರಿಸಿದ್ದೇವೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ನೀಡುತ್ತೇವೆ ಎಂದು ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ತಿಳಿಸಿದ್ದಾರೆ.

ಮುಂದಿನ ವಾರದಿಂದ ವೀಕೆಂಡ್ ಕರ್ಫ್ಯೂ ಬೇಡ: ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ ನಾರಾಯಣಗೌಡ
ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ ನಾರಾಯಣಗೌಡ
TV9 Web
| Edited By: |

Updated on:Jan 16, 2022 | 5:33 PM

Share

ಮೈಸೂರು: ಮುಂದಿನ ವಾರದಿಂದ ವೀಕೆಂಡ್​ ಕರ್ಫ್ಯೂ (Weekend curfew) ಬೇಡ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಭೇಟಿ ಮಾಡುತ್ತೇವೆ. ಮೂರನೇ ಅಲೆಯ ಕೊವಿಡ್ ಅಷ್ಟೋಂದು ಪರಿಣಾಮಕಾರಿಯಾಗಿಲ್ಲ. ಹೀಗಾಗಿ ವೀಕೆಂಡ್​ ಕರ್ಫ್ಯೂ ಜತೆಗೆ ನೈಟ್ ಕರ್ಫ್ಯೂ ಅವಧಿಯನ್ನು ಕಡಿಮೆ ಮಾಡಬೇಕು. ಮೈಸೂರು ಪ್ರವಾಸಿಗರ ನೆಚ್ಚಿನ ತಾಣ. ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ (Tourists) ವೀಕೆಂಡ್​ ಕರ್ಫ್ಯೂನಿಂದ ತೊಂದರೆಯಾಗುತ್ತದೆ. ನಾವು ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತೇವೆ ಎಂದು ಟಿವಿ9ಗೆ ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಹೇಳಿಕೆ ನೀಡಿದ್ದಾರೆ.

ಈ ವಾರವೇ ವೀಕೆಂಡ್ ಕರ್ಫ್ಯೂಗೆ ವಿರೋಧವಿತ್ತು. ಆದರೆ ಆರೋಗ್ಯದ ಹಿತದೃಷ್ಟಿಯಿಂದ ಸಹಕರಿಸಿದ್ದೇವೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ನೀಡುತ್ತೇವೆ ಎಂದು ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ತಿಳಿಸಿದ್ದಾರೆ.

ದಾವಣಗೆರೆ: ಸಿಎಂ ರಾಜಕೀಯ ಕಾರ್ಯದರ್ಶಿಯಿಂದ ಕೊವಿಡ್ ರೂಲ್ಸ್ ಬ್ರೇಕ್

ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಹಳ್ಳಿಗಳಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸುತ್ತಾಟ ನಡೆಸಿದ್ದಾರೆ. ವೀಕೆಂಡ್ ಕರ್ಫ್ಯೂ ವೇಳೆ ಸಾರ್ವಜನಿಕರು ಹೊರಗೆ ಓಡಾಡುವಂತಿಲ್ಲ. ಆದರೆ ಕೊವಿಡ್ ರೂಲ್ಸ್ ಉಲ್ಲಂಘಿಸಿ ರೇಣುಕಾಚಾರ್ಯ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ರಾಮೇಶ್ವರ, ಬಳೇಶ್ವರಕ್ಕೆ ಓಡಾಟ ನಡೆಸಿದ್ದಾರೆ. ಈ ವೇಳೆ ಗ್ರಾಮಕ್ಕೆ ಬಂದ ಶಾಸಕರಿಗೆ‌ ವಿಶೇಷ ಪ್ರೀತಿ ತೋರಿದ ಶ್ವಾನಕ್ಕೆ ತಮಗೆ ಹಾಕಿದ ಹಾರವನ್ನು ಹಾಕಿದ್ದಾರೆ.

ಯಾದಗಿರಿ: ದಂಡ ಹಾಕಲು ಬಂದ ಪೊಲೀಸರ ಜೊತೆ‌ ವಾದ ಮಾಡಿದ ವ್ಯಕ್ತಿ ಶಾಲು ಮುಖಕ್ಕೆ ಕಟ್ಟಿಕೊಂಡಿದ್ದೀನಿ ಮತ್ತೆ ಮಾಸ್ಕ್ ಯಾಕೆ ಹಾಕಬೇಕು ಎಂದು ದಂಡ ಹಾಕಲು ಬಂದ ಪೊಲೀಸರ ಜೊತೆ ವ್ಯಕ್ತಿ‌ ವಾದಕ್ಕೆ ಇಳಿದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ‌ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಾಸ್ಕ್‌ ಧರಿಸದೆ‌ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ದಂಡ ಕಟ್ಟು ಎಂದು ಬಸ್‌ನಿಂದ ಕೆಳಗಿಯುವಂತೆ ಹೇಳಿ ಗದರಿದ ಪೊಲೀಸರ ಜತೆಗೆ ವ್ಯಕ್ತಿ ವಾದಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: Bengaluru Metro: ಮೆಟ್ರೋ ರೈಲುಗಳಲ್ಲಿ ನಿಂತು ಪ್ರಯಾಣಿಸುವಂತಿಲ್ಲ, ವೀಕೆಂಡ್‌ನಲ್ಲಿ ಪ್ರತಿ 30 ನಿಮಿಷಕ್ಕೊಂದು ರೈಲು

ಶಿವಮೊಗ್ಗ, ಮಂಡ್ಯದಲ್ಲಿ ಕೊರೊನಾ ಹೆಚ್ಚಳ; ವೀಕೆಂಡ್​ ಕರ್ಫ್ಯೂ ಉಲ್ಲಂಘಿಸಿ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿದ ರೇಣುಕಾಚಾರ್ಯ

Published On - 5:11 pm, Sun, 16 January 22

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ