AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Chamundi Temple: ಅಕ್ಟೋಬರ್ 5ರಿಂದ 2 ದಿನ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ

ಅಕ್ಟೋಬರ್ 7ರಂದು ವಿಶ್ವವಿಖ್ಯಾತ ಮೈಸೂರು ದಸರಾ 2021ರ ಉದ್ಘಾಟನಾ ಮಹೋತ್ಸ ನೆರವೇರಲಿದೆ. ಹೀಗಾಗಿ ಅಕ್ಟೋಬರ್ 05ರಂದು ಬೆಳಗಿನ ಜಾವ 4 ಗಂಟೆಯಿಂದ ಅಕ್ಟೋಬರ್ 07ರ ಮಧ್ಯಾಹ್ನದ ವರೆಗೂ ನಿರ್ಬಂಧ ಹೇರಲಾಗಿದೆ.

Mysuru Chamundi Temple: ಅಕ್ಟೋಬರ್ 5ರಿಂದ 2 ದಿನ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ
ಮೈಸೂರು ಚಾಮುಂಡಿ ಬೆಟ್ಟ
TV9 Web
| Edited By: ಆಯೇಷಾ ಬಾನು|

Updated on: Oct 04, 2021 | 9:05 PM

Share

ಮೈಸೂರು: ಅಕ್ಟೋಬರ್ 5ರಿಂದ (ನಾಳೆ) ಮೈಸೂರು ಚಾಮುಂಡಿ ಬೆಟ್ಟಕ್ಕೆ(Mysuru Chamundi Hills) ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಅಕ್ಟೋಬರ್ 6ರಂದು ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

ಇನ್ನು ಅಕ್ಟೋಬರ್ 7ರಂದು ವಿಶ್ವವಿಖ್ಯಾತ ಮೈಸೂರು ದಸರಾ 2021ರ ಉದ್ಘಾಟನಾ ಮಹೋತ್ಸ ನೆರವೇರಲಿದೆ. ಹೀಗಾಗಿ ಅಕ್ಟೋಬರ್ 05ರಂದು ಬೆಳಗಿನ ಜಾವ 4 ಗಂಟೆಯಿಂದ ಅಕ್ಟೋಬರ್ 07ರ ಮಧ್ಯಾಹ್ನದ ವರೆಗೂ ನಿರ್ಬಂಧ ಹೇರಲಾಗಿದೆ. ಆದ್ರೆ ಧಾರ್ಮಿಕ ಪೂಜಾ ವಿಧಿ ವಿಧಾನಗಳು ಎಂದಿನಂತೆ ನಡೆಯಲಿದೆ. ಅಲ್ಲದೆ ಮೆಟ್ಟಿಲು ಮಾರ್ಗದಿಂದಲೂ ದೇವಸ್ಥಾನಕ್ಕೆ ಭಕ್ತರ ನಿರ್ಬಂಧವಿದೆ.

ದಾಸೋಹ, ಊಟದ ವ್ಯವಸ್ಥೆ ಮಾಡುವುದು ಅಥವಾ ಪ್ರಸಾದ ವಿತರಣೆಗೂ ಬ್ರೇಕ್ ಹಾಕಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರವು ಘೋಷಿಸಲ್ಪಟ್ಟ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು, ತುರ್ತು ಸೇವಾ ವಾಹನಗಳು ಹಾಗೂ ಚಾಮುಂಡಿಬೆಟ್ಟದ ಸುತ್ತಲಿನ ಗ್ರಾಮಸ್ಥರನ್ನು ಹೊರತುಪಡಿಸಿ ಎಲ್ಲರಿಗೂ ನಿರ್ಬಂಧ ಹೇರಿ ಮೈಸೂರು ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಪ್ರೆಸ್​​ನವರಿಗೆ ಹೈಕೋರ್ಟ್​​​ ಪಕ್ಕ ಕ್ಲಬ್​ ಇರಬಹುದಾದರೆ, ಶಾಸಕರಿಗೆ ಬಾಲಬ್ರೂಯಿ ಕಟ್ಟಡದಲ್ಲಿ ಕ್ಲಬ್ ಯಾಕಾಗಬಾರದು? ಸಿದ್ದರಾಮಯ್ಯ

ಚಾಮುಂಡಿ ಬೆಟ್ಟಕ್ಕೆ ನಾಳೆಯೂ ಸೇರಿ 2 ಶುಕ್ರವಾರ ಭಕ್ತರಿಗೆ ಪ್ರವೇಶ ನಿರ್ಬಂಧ

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್