AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ​ ಅವರಿಗೆ ಸಚಿವ ಹೆಚ್​ಸಿ ಮಹದೇವಪ್ಪರಿಂದ ಅಧಿಕೃತ ಆಹ್ವಾನ

ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದ್ದು, ಪ್ರತಿ ವರ್ಷದಂತೆ ಈ ಬಾರಿ ಕೂಡ ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿಗೆ ಗೌರವಧನ ನೀಡಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​ಸಿ ಮಹದೇವಪ್ಪ ಅವರು ಆಹ್ವಾನ ನೀಡಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸೇರಿ ಹಲವರು ಸಾಥ್ ನೀಡಿದರು.

ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ​ ಅವರಿಗೆ ಸಚಿವ ಹೆಚ್​ಸಿ ಮಹದೇವಪ್ಪರಿಂದ ಅಧಿಕೃತ ಆಹ್ವಾನ
ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಅವರಿಗೆ ಅಧಿಕೃತ ಆಹ್ವಾನ
ರಾಮ್​, ಮೈಸೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 29, 2024 | 9:46 PM

Share

ಮೈಸೂರು, ಸೆ.29: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಸಾಂಸ್ಕೃತಿಕ ನಗರಿ ಮೈಸೂರಿ(Mysore)ನಲ್ಲಿ ಮೆರಗು ಬಂದಿದೆ. ಈ ಬಾರಿ ಸಾಹಿತಿ ಹಂಪಾ ನಾಗರಾಜಯ್ಯ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ. ಅದರಂತೆ ಪ್ರತಿ ವರ್ಷದಂತೆ ಈ ಬಾರಿ ಕೂಡ ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿಗೆ ಗೌರವಧನ ನೀಡಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​ಸಿ ಮಹದೇವಪ್ಪ ಅವರು ಆಹ್ವಾನ ನೀಡಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸೇರಿ ಹಲವರು ಸಾಥ್ ನೀಡಿದರು.

ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದ್ದು, ಅಕ್ಟೋಬರ್​ 3 ರಂದು ಮೈಸೂರು ದಸರಾಕ್ಕೆ ಚಾಲನೆ ಸಿಗಲಿದೆ. ದಸರಾ ಸಮೀಪಿಸುತ್ತಿದ್ದಂತೆ ಅರಮನೆಯಲ್ಲಿ ದಸರಾ ಸಿದ್ದತೆಗಳು ಬರದಿಂದ ಸಾಗಿದೆ. ಈ ನಡುವೆ ಅರಮನೆಗೆ ಅಳವಡಿಸಿರುವ 20 ಸಾವಿರ ಬಲ್ಪ್ ಬದಲಾಯಿಸುತ್ತಿದ್ರೆ, ಮತ್ತೊಂದೆಡೆ ಅರಮನೆ ಗೋಡೆಗಳಿಗೆ ಸುಣ್ಣ ಬಣ್ಣ ಬಳಿಯಲಾಗುತ್ತಿದೆ. ಹೌದು, ದಸರಾ ಸಮೀಪಿಸುತ್ತಿದ್ದಂತೆ ಅರಮನೆಯಲ್ಲಿ ಅಳವಡಿಸಿರುವ ದೀಪಗಳಲ್ಲಿ ಕೆಟ್ಟುಹೋಗಿರುವ ವಿದ್ಯುತ್ ದೀಪಾಗಳನ್ನು ಬದಲಾಯಿಸುವ ಕಾರ್ಯ ಬರದಿಂದ ಸಾಗಿದೆ. ಇಡೀ ಅರಮನೆಯನ್ನ ಒಂದು ಲಕ್ಷ ವಿದ್ಯುತ್ ದೀಪಾಗಳಿಂದ ಅಲಂಕರಿಸಲಾಗಿದೆ.

ಇದನ್ನೂ ಓದಿ:ಮೈಸೂರು ದಸರಾ 2024 ವೇಳಾಪಟ್ಟಿ ಬಿಡುಗಡೆ: ಜಂಬೂಸವಾರಿ ನಡೆಯುವ ಸಮಯ ಇಲ್ಲಿದೆ

ವಿವಿಧ ಹೂಗಳಿಂದ ಅರಮನೆ ಆವರಣ ಅಲಂಕಾರ

ಇನ್ನು ಇದೇ ರೀತಿ ಅರಮನೆಗೆ ಸುಣ್ಣ ಬಣ್ಣ ಬಳಿಯುವ ಕೆಲಸವನ್ನು ಮಾಡಲಾಗುತ್ತಿದೆ. ಸದ್ಯ ಹಬ್ಬದ ಸಂಧರ್ಭದಲ್ಲಿ ಮನೆಗಳಿಗೆ ಹೇಗೆ ಸುಣ್ಣ ಬಣ್ಣ ಬಳಿಯುತ್ತೇವೆ ಅದೇ ಮಾದರಿಯಲ್ಲಿ ಇಡೀ ಅರಮನೆಯ ಪ್ರಾಂಗಣದಲ್ಲಿ ಬಣ್ಣ ಬಳಿಯಲಾಗುತ್ತಿದೆ. ಅದೇ ರೀತಿ ಅರಮನೆ ಆವರಣವನ್ನ ವಿವಿಧ ಹೂಗಳಿಂದ ಅಲಂಕರಿಸಲಾಗುತ್ತೆ. ಸುಮಾರು 15 ಕ್ಕು ಹೆಚ್ಚು ಜಾತಿಯ 10 ಸಾವಿರಕ್ಕು ಹೆಚ್ಚು ಹೂಕುಂಡಗಳಿಂದ ಅಲಂಕರಿಸಲಾಗುತ್ತಿದೆ.

ಒಟ್ಟಾರೆ, ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು, ಇದಕ್ಕಾಗಿ ಅರಮನೆ ಆಡಳಿತ ಮಂಡಳಿ ಬರದಿಂದ ಸಿದ್ದತೆ ಮಾಡಿಕೊಳ್ಳುತ್ತಿದೆ. ಒಟ್ಟಿನಲ್ಲಿ ವಿಶ್ವವೇ ತಿರುಗಿ ನೋಡುವಂತಹ ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಮಲ್ಲಿಗೆ ನಗರಿ ಮೈಸೂರು ಸಜ್ಜಾಗುತ್ತಿದ್ದು, ಇತ್ತ ದಸರಾ ಗಜಪಡೆ ಭರ್ಜರಿ ಕಸರತ್ತು ಕೂಡ ನಡೆಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್